Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫೇಸ್‌ಬುಕ್‌ಗೆ ಮತ್ತೆ ಕೇಂದ್ರದ ತರಾಟೆ:...

ಫೇಸ್‌ಬುಕ್‌ಗೆ ಮತ್ತೆ ಕೇಂದ್ರದ ತರಾಟೆ: ದತ್ತಾಂಶ ಉಲ್ಲಂಘನೆಯ ವಾಸ್ತವಿಕ ವರದಿ ಸಲ್ಲಿಕೆಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ7 Jun 2018 10:39 PM IST
share
ಫೇಸ್‌ಬುಕ್‌ಗೆ ಮತ್ತೆ ಕೇಂದ್ರದ ತರಾಟೆ: ದತ್ತಾಂಶ ಉಲ್ಲಂಘನೆಯ ವಾಸ್ತವಿಕ ವರದಿ ಸಲ್ಲಿಕೆಗೆ ಸೂಚನೆ

ಹೊಸದಿಲ್ಲಿ,ಜೂ.7:ಫೇಸ್‌ಬುಕ್‌ ತನ್ನ ಬಳಕೆದಾರರ ಕುರಿತು ಮಾಹಿತಿಗಳನ್ನು ಅವರ ಅನುಮತಿಯಿಲ್ಲದೆ ಹಂಚಿಕೊಳ್ಳುತ್ತಿದೆ ಎಂದು ಮಾಧ್ಯಮಗಳು ಹೊಸದಾಗಿ ವರದಿ ಮಾಡಿರುವ ಹಿನ್ನೆಲೆಯಲ್ಲಿ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಈ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ಗುರುವಾರ ಅದಕ್ಕೆ ಸೂಚಿಸಿದೆ.

ಫೇಸ್‌ಬುಕ್‌ ತನ್ನ ಬಳಕೆದಾರರ ಸ್ನೇಹಿತರು ಸೇರಿದಂತೆ ಅವರ ವೈಯಕ್ತಿಕ ಮಾಹಿತಿಗಳನ್ನು ಅವರ ಸ್ಪಷ್ಟ ಅನುಮತಿಯಿಲ್ಲದೆ ಫೋನ್ ಮತ್ತು ಇತರ ಸಾಧನಗಳ ತಯಾರಕರೊಂದಿಗೆ ಹಂಚಿಕೊಳ್ಳುತ್ತಿದೆ ಎಂದು ಮಾಧ್ಯಮಗಳು ಇತ್ತೀಚಿಗೆ ವರದಿ ಮಾಡಿವೆ. ಇಂತಹ ಉಲ್ಲಂಘನೆಗಳ ವರದಿಗಳ ಬಗ್ಗೆ ಸರಕಾರವು ತೀವ್ರ ಕಳವಳಗೊಂಡಿದೆ ಎಂದು ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.

ಕೇಂಬ್ರಿಜ್ ಅನಾಲಿಟಿಕಾ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಯಕ್ತಿಕ ದತ್ತಾಂಶಗಳ ಉಲ್ಲಂಘನೆ ಕುರಿತು ಹಿಂದಿನ ನೋಟಿಸ್‌ಗಳಿಗೆ ಉತ್ತರಿಸಿದ್ದ ಫೇಸ್‌ಬುಕ್ ಆ ಬಗ್ಗೆ ಕ್ಷಮೆಯನ್ನು ಯಾಚಿಸಿತ್ತು ಮತ್ತು ತನ್ನ ಬಳಿಯಿರುವ ಬಳಕೆದಾರರ ದತ್ತಾಂಶಗಳ ಖಾಸಗಿತನದ ರಕ್ಷಣೆಗೆ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುವುದಾಗಿ ಭರವಸೆ ನೀಡಿತ್ತು. ಆದ್ದರಿಂದ ಈ ವಿಷಯದಲ್ಲಿ ವಿವರವಾದ ವಾಸ್ತವಿಕ ವರದಿಯನ್ನು ಸಲ್ಲಿಸುವಂತೆ ಸಚಿವಾಲಯವು ಫೇಸ್‌ಬುಕ್‌ಗೆ ಸೂಚಿಸಿದೆ ಎಂದು ಹೇಳಿಕೆಯು ತಿಳಿಸಿದೆ.

ಇದಕ್ಕೂ ಮುನ್ನ,ಕಳೆದ ಮೇ ತಿಂಗಳಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಕುರಿತ ಸಂಸದೀಯ ಸ್ಥಾಯಿ ಸಮಿತಿಯು ಸಭೆ ಸೇರಿ ಕೇಂಬ್ರಿಜ್ ಅನಾಲಿಟಿಕಾ ಪ್ರಕರಣ ಮತ್ತು ಫೇಸ್‌ಬುಕ್ ಬಳಕೆದಾರರ ದತ್ತಾಂಶ ಸೋರಿಕೆಗಳ ಹಿನ್ನೆಲೆಯಲ್ಲಿ ನಾಗರಿಕರ ದತ್ತಾಂಶ ಸುರಕ್ಷತೆ ಮತ್ತು ಖಾಸಗಿತನ ಕುರಿತು ಚರ್ಚಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X