ಬಂಟ್ವಾಳ: ಬಸ್ ಢಿಕ್ಕಿ; ಬೈಕ್ ಸವಾರನಿಗೆ ಗಾಯ

ಬಂಟ್ವಾಳ, ಜೂ. 8: ಖಾಸಗಿ ಬಸ್ವೊಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಜಂಕ್ಷನ್ನಲ್ಲಿ ಶುಕ್ರವಾರ ನಡೆದಿದೆ.
ಗಾಯಗೊಂಡವರನ್ನು ಅನಂತಾಡಿ ಗ್ರಾಮದ ನಿವಾಸಿ ಮೋಹನ ಎಂದು ಗುರುತಿಸಲಾಗಿದೆ. ಮೋಹನ ಅವರು ಮಾಣಿ ಸಮೀಪ ಟಯರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಕೆಲಸಕ್ಕೆ ತೆರಳುತ್ತಿದ್ದಾಗ ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಖಾಸಗಿ ಬಸ್ ಬೈಕ್ಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಘಟನೆ ತೀವ್ರತೆಗೆ ಬೈಕ್ ಬಸ್ಸಿನಡಿಯಲ್ಲಿ ಸಿಕ್ಕಿಹಾಕಿಕೊಂಡು ನಜ್ಜುಗುಜ್ಜಾಗಿದೆ. ಸವಾರ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Next Story