ಸಿಎಫ್ಡಿ ತಂತ್ರಜ್ಞಾನ ಕುರಿತ ತಾಂತ್ರಿಕ ಕಾರ್ಯಾಗಾರ

ಉಡುಪಿ, ಜೂ.8: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗವು ಐಎಸ್ಟಿಇ ಘಟಕದ ಸಹಯೋಗದೊಂದಿಗೆ ಸಿಎಫ್ಡಿ ತಂತ್ರಜ್ಞಾನಕ್ಕೆ ಸಂಬಂಧಿಸಿದ ತಾಂತ್ರಿಕ ಕಾರ್ಯಾಗಾರವನ್ನು ಶುಕ್ರವಾರ ಆಯೋಜಿಸಲಾಗಿತ್ತು.
ಕಾರ್ಯಾಗಾರವನ್ನು ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಟಾನದ ಕಾರ್ಯದರ್ಶಿ ರತ್ನಕುಮಾರ್ ಉದ್ಘಾಟಿಸಿದರು. ಕಾಲೇಜಿನ ತಾಂತ್ರಿಕ ಸಲಹೆ ಗಾರ ಹರೀಶ್ ಬೆಳ್ಮಣ್, ಪ್ರಾಚಾರ್ಯ ಡಾ.ತಿರುಮಲೇಶ್ವರ ಭಟ್ ಉಪಸ್ಥಿತರಿ ದ್ದರು. ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಡಾ.ಸುದರ್ಶನ ರಾವ್ ಕೆ. ಸ್ವಾಗತಿಸಿ ದರು. ಕಾರ್ಯಾಗಾರದ ಸಂಯೋಜಕ ಅನಂತೇಶ ರಾವ್ ವಂದಿಸಿದರು. ಮೆಕ್ಯಾನಿಕಲ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಮಂಜುನಾಥ್ ಎಸ್. ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಾಗಾರದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜುಗಳ 30ಕ್ಕೂ ಅಧಿಕ ಭೋಧಕ ಸಿಬ್ಬಂದಿ ಭಾಗವಹಿಸಿದ್ದರು. ಮಂಗಳೂರಿನ ಸಂತ ಜೋಸೆಫ್ ತಾಂತ್ರಿಕ ಮಹಾವಿದ್ಯಾಲಯದ ಡಾ. ಪುರುಷೋತ್ತಮ ಚಿಪ್ಪಾರ್ ಮತ್ತು ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ಪ್ರೊ.ಮಧ್ವೇಶ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.