Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಳೆಯ ನಡುವೆ ಉಡುಪಿ ಜಿಲ್ಲೆಯಲ್ಲಿ...

ಮಳೆಯ ನಡುವೆ ಉಡುಪಿ ಜಿಲ್ಲೆಯಲ್ಲಿ ಶಾಂತಿಯುತ ಮತದಾನ

ನೈರುತ್ಯ ಪದವೀಧರ /ಶಿಕ್ಷಕರ ಕ್ಷೇತ್ರ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ8 Jun 2018 9:49 PM IST
share
ಮಳೆಯ ನಡುವೆ ಉಡುಪಿ ಜಿಲ್ಲೆಯಲ್ಲಿ ಶಾಂತಿಯುತ ಮತದಾನ

ಉಡುಪಿ, ಜೂ.8: ಉಡುಪಿ ಜಿಲ್ಲೆಯಲ್ಲಿ ಇಂದು ನಡೆದ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಶಾಂತಿಯುತ ಮತದಾನ ನಡೆಯಿತು. ಮಳೆಯ ನಡುವೆಯೇ, ಮತದಾನ ಕೇಂದ್ರಗಳಲ್ಲಿ ಮತದಾರರಾದ ಶಿಕ್ಷಕರು ಮತ್ತು ಪದವೀಧರರು ಸಾಲುಗಟ್ಟಿ ನಿಂತು ಮತದಾನ ಮಾಡಿದರು.

ಆದರೆ ಜಿಲ್ಲೆಯ ಶಿಕ್ಷಕರು ಮತ್ತು ಪದವೀಧರರು ಇಂದಿನ ಮತದಾನಕ್ಕೆ ಹೆಚ್ಚಿನ ಉತ್ಸಾಹ ತೋರಿಸಲ್ಲಿಲ್ಲ. ಶೇ.62.11ರಷ್ಟು ಪದವೀಧರರು ಹಾಗೂ ಶೇ.78ರಷ್ಟು ಶಿಕ್ಷಕರು ಮಾತ್ರ ಇಂದು ತಮ್ಮ ನೆಚ್ಚಿನ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದರು.

ಜಿಲ್ಲೆಯಲ್ಲಿ ನೊಂದಾಯಿತ 8276 ಪದವೀಧರ ಮತದಾರರಲ್ಲಿ 5140 ಮಂದಿ (ಶೇ.62.11) ಮತ ಚಲಾಯಿಸಿದರೆ, 2768 ಶಿಕ್ಷಕ ಮತದಾರರಲ್ಲಿ 2159 ಮಂದಿ (ಶೇ.78) ಮತ ಚಲಾಯಿಸಿದರು ಎಂದು ಚುನಾವಣಾಧಿಕಾರಿ ಗಳ ಪ್ರಕಟಣೆ ತಿಳಿಸಿದೆ.

ಪದವೀಧರ ಕ್ಷೇತ್ರದಲ್ಲಿ ಬೈಂದೂರಿನಲ್ಲಿ 338 ಮತದಾರರಲ್ಲಿ 240 ಮಂದಿ, ಶಂಕರನಾರಾಯಣದಲ್ಲಿ 405 ಮತದಾರರಲ್ಲಿ 259, ಕುಂದಾಪುರದಲ್ಲಿ 700-549, ಬ್ರಹ್ಮಾವರದಲ್ಲಿ 1378-768, ಮಣಿಪಾಲದಲ್ಲಿ 1036-569, ಉಡುಪಿಯಲ್ಲಿ 1863-1134, ಕಾಪುನಲ್ಲಿ 1394-799, ಅಜೆಕಾರುನಲ್ಲಿ 385-283, ಕಾರ್ಕಳದಲ್ಲಿ 776ರಲ್ಲಿ 539 ಮಂದಿ ಮತ ಚಲಾಯಿಸಿದರು. ಮತಗಟ್ಟೆ ನಂ.63ರಲ್ಲಿ ಅತ್ಯಧಿಕ ಶೇ.78.43ರಷ್ಟು ಮತದಾನವಾದರೆ, ಕನಿಷ್ಠ ಮತದಾನ ಮತಗಟ್ಟೆ ನಂ.64ಎಯಲ್ಲಿ ಶೇ.51.18ರಷ್ಟು ದಾಖಲಾಯಿತು.

ಶಿಕ್ಷಕರ ಕ್ಷೇತ್ರದಲ್ಲಿ ಬೈಂದೂರಿನಲ್ಲಿ 134 ಮಂದಿ ಮತದಾರರಲ್ಲಿ 120, ಶಂಕರನಾರಾಯಣದಲ್ಲಿ 146ರಲ್ಲಿ 114, ಕುಂದಾಪುರ 268ರಲ್ಲಿ 255, ಬ್ರಹ್ಮಾವರ 456ರಲ್ಲಿ 367, ಮಣಿಪಾಲ 479ರಲ್ಲಿ 284, ಉಡುಪಿ 533ರಲ್ಲಿ 398, ಕಾಪು 298ರಲ್ಲಿ 238, ಅಜೆಕಾರು 93ರಲ್ಲಿ 75 ಹಾಗೂ ಕಾರ್ಕಳದಲ್ಲಿ 362 ಮತದಾರರಲ್ಲಿ 308 ಮಂದಿ ಮತ ಚಲಾಯಿಸಿದರು. ಕುಂದಾಪುರ ಮತಗಟ್ಟೆಯಲ್ಲಿ ಅತ್ಯಧಿಕ ಶೇ.95.51 ಮಂದಿ ಮತ ಚಲಾಯಿಸಿದರೆ, ಮಣಿಪಾಲ ಮತಗಟ್ಟೆಯಲ್ಲಿ ಅತೀ ಕಡಿಮೆ ಅಂದರೆ ಶೇ.59.29ರಷ್ಟು ಮತ ದಾನವಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X