Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಹದ ಮಣ್ಣಲ್ಲದೆ ಮಡಕೆಯಾಗಲಾರದು

ಹದ ಮಣ್ಣಲ್ಲದೆ ಮಡಕೆಯಾಗಲಾರದು

ವಾರ್ತಾಭಾರತಿವಾರ್ತಾಭಾರತಿ8 Jun 2018 11:51 PM IST
share
ಹದ ಮಣ್ಣಲ್ಲದೆ ಮಡಕೆಯಾಗಲಾರದು

ಹದ ಮಣ್ಣಲ್ಲದೆ ಮಡಕೆಯಾಗಲಾರದು.

ವ್ರತಹೀನನ ಬೆರೆಯಲಾಗದು.
ಬೆರೆದಡೆ ನರಕ ತಪ್ಪದು.
ನಾನೊಲ್ಲೆ ಬಲ್ಲೆನಾಗಿ ಕುಂಭೇಶ್ವರಾ.
                          -ಗುಂಡಯ್ಯಗಳ ಪುಣ್ಯಸ್ತ್ರೀ ಕೇತಲದೇವಿ

 ಬೀದರ್ ಜಿಲ್ಲೆ ಭಾಲ್ಕಿಯ ಕುಂಬಾರ ಗುಂಡಯ್ಯನವರ ಸತಿ ಕೇತಲದೇವಿ ಬಸವಣ್ಣನವರ ಸಮಕಾಲೀನಳು. ವೃತ್ತಿಪರಿಭಾಷೆಯನ್ನು ಬಳಸಿ ವಚನ ರಚನೆ ಮಾಡಿದ ವಚನಕಾರ್ತಿಯರ ಸಾಲಿನಲ್ಲಿ ಕೇತಲದೇವಿಯೂ ಬರುತ್ತಾಳೆ. ಕಾಯಕ ಜೀವಿಗಳಾದ ವಚನಕಾರರಲ್ಲಿ ಬಹಳಷ್ಟು ಮಂದಿ ತಮ್ಮ ವೃತ್ತಿಪರಿಭಾಷೆಯನ್ನು ಬಳಸಿದ ಕಾರಣ ಕಾಯಕ ಪ್ರಧಾನವಾದ ಶರಣ ಸಿದ್ಧಾಂತ ಹೆಚ್ಚು ಆಕರ್ಷಕವಾಗಿದೆ. ಅನೇಕ ವಚನಕಾರ್ತಿಯರು ತಮ್ಮ ವೃತ್ತಿಪರಿಭಾಷೆಯ ಮೂಲಕ ತತ್ವಾನ್ವೇಷಣೆ ಮಾಡಿದ್ದಾರೆ. ‘‘ಕೈಯಲ್ಲಿ ಕನ್ನಡಿಯಿರಲು ತನ್ನ ತಾ ನೋಡಬಾರದೆ?’’ ಎಂದು ಕನ್ನಡಿ ಕಾಯಕದ ರೇಮಮ್ಮ ಕೇಳುತ್ತಾಳೆ. ‘‘ಹದತಪ್ಪಿ ಕುಟ್ಟಲು ನುಚ್ಚಲ್ಲದೆ ಅಕ್ಕಿಯಿಲ್ಲ. ವ್ರತಹೀನನ ನೆರೆಯೆ ನರಕವಲ್ಲದೆ ಮುಕ್ತಿಯಿಲ್ಲ.’’ ಎಂದು ಕೊಟ್ಟಣದ ಸೋಮಮ್ಮ ಹೇಳುತ್ತಾಳೆ. ‘‘ಕೈ ತಪ್ಪಿ ಕೆತ್ತಲು ಕಾಲಿಗೆ ಮೂಲ, ಮಾತು ತಪ್ಪಿ ನುಡಿಯಲು ಬಾಯಿಗೆ ಮೂಲ’’ ಎಂದು ಬಾಚಿಕಾಯಕದ ಬಸವಯ್ಯಗಳ ಪುಣ್ಯಸ್ತ್ರೀ ಕಾಳವ್ವೆ ತಿಳಿಸುತ್ತಾಳೆ. ಹೀಗೆ ಕೇತಲದೇವಿ ಕುಂಬಾರ ಕಾಯಕದ ಅನುಭವದ ಮೂಲಕವೇ ಅನುಭಾವವನ್ನು ಉಸುರುತ್ತಾಳೆ.
 ‘ಹದ ಮಣ್ಣಲ್ಲದೆ ಮಡಕೆಯಾಗಲಾರದು’ ಎಂಬುದು ಅವಳ ಅನುಭವದ ಮಾತು. ಮಡಕೆ ತಯಾರಿಸಲು ಯೋಗ್ಯವಾದ ಮಣ್ಣು ಬೇಕು. ಆ ಮಣ್ಣನ್ನು ಸೋಸಿ ಸೋಸಿ ನುಣುಪುಗೊಳಿಸಬೇಕು. ಅದರಲ್ಲಿ ಮಣ್ಣಲ್ಲದೇ ಬೇರೆ ಯಾವುದೇ ಕಸ ಕಡ್ಡಿ ಹರಳುಗಳು ಇರಬಾರದು. ಅಂಥ ಮೃದು ಮಣ್ಣನ್ನು ನೀರಲ್ಲಿ ಕಲಸಿ ತುಳಿದು ತುಳಿದು ಹದಗೊಳಿಸಬೇಕು. ಆಗ ನೈಸರ್ಗಿಕ ಸಂಪನ್ಮೂಲವಾದ ಆ ಮಣ್ಣು ಹೀಗೆ ಮಡಕೆ ಮಾಡಲು ಬೇಕಾದ ಸಿದ್ಧವಸ್ತುವಾಗುವುದು. ಈ ರೀತಿ ಪ್ರತಿಯೊಬ್ಬನೂ ನೈಸರ್ಗಿಕ ಸಂಪನ್ಮೂಲವಾಗಿದ್ದಾನೆ. ಸಂಸ್ಕಾರದ ಮೂಲಕ ಆತ ಹದಗೊಳ್ಳಬೇಕು. ಆಗ ಅವನು ಅನುಭಾವ ತುಂಬಿದ ಘಟವಾಗುವನು. (ಮಡಕೆಗೂ ಶರೀರಕ್ಕೂ ಘಟ ಎನ್ನುತ್ತಾರೆ.)
ಶರೀರವು ಅನುಭಾವ ತುಂಬುವ ಘಟವಾಗಬೇಕಾದರೆ ನಾವು ಎಲ್ಲ ರೀತಿಯ ದೌರ್ಬಲ್ಯಗಳಿಂದ ಮುಕ್ತರಾಗಬೇಕು. ವ್ರತವೆಂದರೆ ಪವಿತ್ರವಾಗಿ ಬದುಕುವ ಪ್ರತಿಜ್ಞೆ ಮಾಡುವುದು ಮತ್ತು ಹಾಗೆ ಬದುಕುವುದು. ವ್ರತಾಚರಣೆಯಿಂದ ನಮ್ಮ ಮನಸ್ಸನ್ನು ಸೋಸಿ ಸೋಸಿ ಶುದ್ಧಗೊಳಿಸಿಕೊಳ್ಳಬೇಕು. ಅದನ್ನು ಸಕಲ ಜೀವಾತ್ಮರಿಗೆ ಲೇಸನ್ನು ಬಯಸುವ ಹದಕ್ಕೆ ತರಬೇಕು. ಆಗ ಕಾಯವು ಪ್ರಸಾದಕಾಯವಾಗುವುದು. ಅದುವೇ ಅನುಭಾವದ ಘಟ. ಪ್ರಸಾದ ಕಾಯದವರು ಬದುಕಿನಲ್ಲಿ ಅಂಥವರ ಜೊತೆಯೇ ಬೆರೆಯಬೇಕು. ಏಕೆಂದರೆ ಎಮ್ಮೆಕರುವಿನ ಜೊತೆ ಆಕಳಕರುವೂ ಹೊಲಸಿನ ಕಡೆಗೆ ಹೋದ ಹಾಗೆ ಆಗುತ್ತದೆ. ಈ ಕಾರಣದಿಂದ ವ್ರತಹೀನನನ್ನು ಬೆರೆಯಲಾಗದು. ಹಾಗೆ ಹೋದರೆ ಬದುಕು ನರಕವಾಗುವುದು. ಈ ಕಾರಣದಿಂದಲೇ ತಾನು ಪವಿತ್ರವಾದ ಶರಣರ ಸಂಕುಲ ಬಿಟ್ಟು ಬೇರೆಲ್ಲಿಯೂ ಹೋಗುವುದಿಲ್ಲ ಎಂದು ಸೂಚಿಸುತ್ತಾಳೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X