Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮ.ಪ್ರದೇಶ ಸಿಎಂ ವಿರುದ್ಧ ಟೀಕೆಗೆ...

ಮ.ಪ್ರದೇಶ ಸಿಎಂ ವಿರುದ್ಧ ಟೀಕೆಗೆ ಕಾಂಗ್ರೆಸ್ ಆಯುಧವಾದ ‘ಅಮಿತಾಬ್ ಬಚ್ಚನ್’!

ವಾರ್ತಾಭಾರತಿವಾರ್ತಾಭಾರತಿ9 Jun 2018 8:57 PM IST
share
ಮ.ಪ್ರದೇಶ ಸಿಎಂ ವಿರುದ್ಧ ಟೀಕೆಗೆ ಕಾಂಗ್ರೆಸ್ ಆಯುಧವಾದ ‘ಅಮಿತಾಬ್ ಬಚ್ಚನ್’!

ಭೋಪಾಲ್, ಜೂ.9: ‘‘ಕಡಿಮೆ ಶೈಕ್ಷಣಿಕ ಅರ್ಹತೆಯನ್ನು ಹೊಂದಿದ್ದರೂ ಬದುಕಿನಲ್ಲಿ ಅಸಾಧಾರಣ ಯಶಸ್ಸನ್ನು ಕಂಡ ಮಹನೀಯರಲ್ಲಿ ಅಮಿತಾಭ್ ಬಚ್ಚನ್ ಕೂಡಾ ಒಬ್ಬರಾಗಿದ್ದಾರೆ’’...!. ಹೀಗೆಂದು ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿ ನೀಡಿದವರು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್. ಭೋಪಾಲ್‌ನಲ್ಲಿ ಶಾಲಾ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾರ್ಗದರ್ಶನ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಅವರು ಈ ಎಡವಟ್ಟು ಮಾಡಿಕೊಂಡಿದ್ದಾರೆ.

ವಾಸ್ತವವಾಗಿ ಅಮಿತಾಭ್ ಬಚ್ಚನ್ ಅವರು ಪದವಿ ಶಿಕ್ಷಣ ಪಡೆದವರಾಗಿದ್ದು, ಶೇರ್‌ವುಡ್ ಕಾಲೇಜ್ ಹಾಗೂ ಕಿರೊರಿಮಾಲ್ ಕಾಲೇಜ್‌ನಂತಹ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡಿದವರಾಗಿದ್ದಾರೆ.

ಶಿವರಾಜ್‌ಸಿಂಗ್ ಚೌಹಾಣ್‌ರಿಂದಾದ ಈ ಪ್ರಮಾದವು, ಮಧ್ಯಪ್ರದೇಶದಲ್ಲಿ ಚುನಾವಣೆ ಸಮೀಪಿಸುತ್ತಿರುವ ಈ ಸಮಯದಲ್ಲಿ ಕಾಂಗ್ರೆಸ್‌ಗೆ ಒಳ್ಳೆಯ ಟೀಕಾಸ್ತ್ರ ದೊರೆತಂತಾಗಿದೆ. ‘‘ಅಮಿತಾಭ್ ಪತ್ನಿ ಜಯಾಬಚ್ಚನ್ ಮೂಲತಃ ಮಧ್ಯಪ್ರದೇಶದ ಭೋಪಾಲಂ ನಗರದವರಾಗಿದ್ದು, ಈ ಹಿರಿಯ ನಟನ ಅತ್ತೆ ಮನೆಗೆ, ಶಿವರಾಜ್‌ಸಿಂಗ್ ಚೌಹಾಣ್ ಅವಮಾನ ಮಾಡಿದ್ದಾರೆ’’ ಎಂದು ಅದು ಬಣ್ಣಿಸಿದೆ.

  ಚೌಹಾಣ್ ಅವರು ತನ್ನ ಭಾಷಣದಲ್ಲಿ ಹನ್ನೆರಡನೆ ತರಗತಿ ಪರೀಕ್ಷೆಯಲ್ಲಿ ಶೇ.70ಕ್ಕಿಂತಲೂ ಕಡಿಮೆ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಹುರಿದುಂಬಿಸಲು ಯತ್ನಿಸುತ್ತಿದ್ದರು. ತಾನು ಕುಳಿತ ಕೊಂಬೆಯನ್ನೇ ಕತ್ತರಿಸುವಷ್ಟು ಮೂರ್ಖನಾಗಿದ್ದ ಕಾಳಿದಾಸ ಆನಂತರ ಹೇಗೆ ಮಹಾನ್ ಸಂಸ್ಕೃತ ಕವಿಯಾದನೆಂದು ವಿದ್ಯಾರ್ಥಿಗಳಿಗೆ ವಿವರಿಸಿದ ಮುಖ್ಯಮಂತ್ರಿಯವರು, ಔಪಚಾರಿಕ ಶಿಕ್ಷಣವನ್ನು ಪಡೆಯದ ನೊಬೆಲ್ ಪುರಸ್ಕೃತ ಸಾಹಿತಿ ರವೀಂದ್ರನಾಥ್ ಠಾಗೋರ್ ಹಾಗೂ ಪರೀಕ್ಷೆಯಲ್ಲಿ ಕಳಪೆ ನಿರ್ವಹಣೆ ಪ್ರದರ್ಶಿಸುತ್ತಿದ್ದ ಮಹಾನ್ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಅವರ ಸಾಧನೆಯನ್ನು ಕೂಡಾ ತನ್ನ ಭಾಷಣದಲ್ಲಿ ಉಲ್ಲೇಖಿಸಿದ್ದರು. ಆದರೆ ಇದೇ ವೇಳೆ ಶಿವರಾಜ್ ಸಿಂಗ್ ಚೌಹಾಣ್, ಅಮೆರಿಕದ ಮಾಜಿ ಅಧ್ಯಕ್ಷ ಜಾರ್ಜ್ ಬುಶ್ ಹಾಗೂ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಕೂಡಾ ಕಡಿಮೆ  ಶೈಕ್ಷಣಿಕ ಅರ್ಹತೆಯುಳ್ಳವರೆಂದು ಹೇಳುವ ಮೂಲಕ ಯಡವಟ್ಟು ಮಾಡಿಕೊಂಡಿದ್ದಾರೆ. ‘‘ನೀವು ಬಾಲಿವುಡ್‌ನ ಸೂಪರ್‌ಸ್ಟಾರ್ ಅಮಿತಾಭ್ ಬಚ್ಚನ್ ಬಗ್ಗೆ ಕೇಳಿರಬಹುದು. ಅವರಿಗೆ ಯಾವುದೇ ಉನ್ನತ ಶಿಕ್ಷಣದ ಪದವಿಗಳಿರಲಿಲ್ಲ. ಒಂದೊಮ್ಮೆ ಧ್ವನಿ ಚೆನ್ನಾಗಿಲ್ಲವೆಂಬ ಕಾರಣಕ್ಕಾಗಿ ಆಕಾಶವಾಣಿ ಅವರಿಗೆ ಉದ್ಯೋಗ ನೀಡಲು ನಿರಾಕರಿಸಿತ್ತು. ಆದರೆ ಇಂದು ಅವರು ತನ್ನ ಕಂಠದಿಂದಲೇ ಖ್ಯಾತರಾಗಿದ್ದಾರೆ’’ ಎಂದು ಮುಖ್ಯಮಂತ್ರಿಯವರು, ವಿದ್ಯಾರ್ಥಿಗಳ ಮಾರ್ಗದರ್ಶನ ಶಿಬಿರದಲ್ಲಿ ಹೇಳಿದರು.

ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದುದಕ್ಕೆ ಕುಗ್ಗದಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ಅವರು, ನಿಮ್ಮ ಚೈತನ್ಯವನ್ನು ಮೇಲ್ಮಟ್ಟದಲ್ಲೇ ಇರಿಸಿಕೊಂಡು, ಈ ಮಹನೀಯರನ್ನು ಸ್ಫೂರ್ತಿಯಾಗಿರಿಸಿಕೊಂಡಲ್ಲಿ, ನಿಮಗೆ ಒಳ್ಳೆ.ಯ ಅಂಕ ಪಡೆಯಬೇಕಾದ ಅವಶ್ಯಕತೆ ಇರುವುದಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X