Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅಂತಾರಾಷ್ಟ್ರೀಯ ಖುರ್ ಆನ್ ಪಾರಾಯಣ...

ಅಂತಾರಾಷ್ಟ್ರೀಯ ಖುರ್ ಆನ್ ಪಾರಾಯಣ ಸ್ಪರ್ಧೆ: ಕನ್ನಡಿಗ ದರ್ವೇಶ್ ಮುಹಮ್ಮದ್ ಅಲಿ ಪ್ರಥಮ

ವರದಿ: ಹಕೀಂ ಮದೀನಾವರದಿ: ಹಕೀಂ ಮದೀನಾ9 Jun 2018 10:26 PM IST
share
ಅಂತಾರಾಷ್ಟ್ರೀಯ ಖುರ್ ಆನ್ ಪಾರಾಯಣ ಸ್ಪರ್ಧೆ: ಕನ್ನಡಿಗ ದರ್ವೇಶ್ ಮುಹಮ್ಮದ್ ಅಲಿ ಪ್ರಥಮ

ಬಹರೈನ್, ಜೂ. 9: ಬಹರೈನ್ ನಲ್ಲಿ ನಡೆದ 'ಕಿಂಗ್ ಅಹ್ಮದ್ ಬಿನ್ ಇಸಾ ಅಲ್ ಖಲೀಫಾ ಖುರಾನ್ ಪಠಣ' ಸ್ಪರ್ಧೆಯಲ್ಲಿ ಭಾರತದ ದರ್ವೇಶ್ ಮುಹಮ್ಮದ್ ಅಲಿ ಪ್ರಥಮ ಸ್ಥಾನ ಪಡೆದಿದ್ದಾರೆ. 

ರಮಝಾನ್ ತಿಂಗಳಲ್ಲಿ ಬಹರೈನ್ ನ ವಿವಿಧ ಮಸೀದಿಗಳಲ್ಲಿ ಖುರ್ ಆನ್ ಪಾರಾಯಣ ಮಾಡಿ ರಾತ್ರಿಯ ವಿಶೇಷ ಪ್ರಾರ್ಥನೆಗಳಿಗೆ ಧರ್ವೇಶ್ ಮುಹಮ್ಮದ್ ಅಲಿ ನೇತೃತ್ವ ವಹಿಸುತ್ತಾರೆ. ಧರ್ವೇಶ್ 13ನೇ ವಯಸ್ಸಿನಿಂದ ಬಹರೈನ್ ನ ಹಲವು ಮಸೀದಿಗಳಲ್ಲಿ ತರಾವೀಹ್ ನಮಾಝ್ ನಿರ್ವಹಿಸುತ್ತಿದ್ದು, ಸದ್ಯ ಬಹರೈನ್ ರಾಜ್ಯದ 11ಮಸೀದಿಗಳಲ್ಲಿ  ತರಾವೀಹ್  ನಮಾಝಿಗೆ ನೇತೃತ್ವ ವಹಿಸುತ್ತಿದ್ದಾರೆ.

2008 ರಲ್ಲೇ ಸ್ಪರ್ಧಾ ಕಣಕ್ಕೆ ಲಗ್ಗೆಯಿಟ್ಟ ದರ್ವೇಶ್ ಸಬ್ ಜೂನಿಯರ್, ಜೂನಿಯರ್, ಸೀನಿಯರ್ ಮುಂತಾದ ಎಲ್ಲಾ ವಿಭಾಗದಲ್ಲೂ ಪ್ರಥಮ ಸ್ಥಾನವನ್ನಲಂಕರಿಸುತ್ತಾ ಬಂದು 2018ರಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ. 

ಬಹರೈನ್ ರಾಜ್ಯದ 500 ಅರಬಿ ಹಾಫಿಳ್ ಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದು, ಅದರಲ್ಲಿ ಕನ್ನಡಿಗ ದರ್ವೇಶ್ ಮುಹಮ್ಮದ್ ಅಲಿ ಜಯಗಳಿಸಿದ್ದು,  ತನ್ನೆಲ್ಲಾ ಸಾಧನೆಗಳ ಹಿಂದೆ ತಂದೆ ತಾಯಿಯ ಗುರುಹಿರಿಯರ ಪ್ರೋತ್ಸಾಹವಿದ್ದು, ಇದೇ ಹಾದಿಯಲ್ಲಿ ಮುಂದುವರೆಯುತ್ತೇನೆ ಎಂದು  ದರ್ವೇಶ್ ಹೇಳಿದ್ದಾರೆ.

ಕೊಡಗು ಸ್ವದೇಶಿ ಅಲ್ ಹಾಜ್ ಮುಹಮ್ಮದಾಲಿ ಮುಸ್ಲಿಯಾರ್ ಹಾಗೂ ಸಫಿಯಾ ಹಜ್ಜುಮ್ಮ ದಂಪತಿಯ ಏಳು ಮಕ್ಕಳಲ್ಲಿ ಆರನೇಯ ಪುತ್ರನಾಗಿ 2002 ರಲ್ಲಿ ಬಹ್ರೈನ್'ನಲ್ಲಿ ದರ್ವೇಶ್ ಜನಿಸಿದ್ದರು. ಆರಂಭದಲ್ಲಿ ಇಂಡಿಯನ್ ಸ್ಕೂಲ್ ನಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ನಡೆಸಿದ್ದು, ಬಹರೈನ್ ನ ಅಲ್ ಮಹದ್ ರಿಲೇಜೆಸ್ ಅರೇಬಿಕ್ ಸ್ಕೂಲ್ ನಲ್ಲಿ ಕಲಿಯುತ್ತಿದ್ದಾರೆ.

ಸಂಜೆ ಬಳಿಕ ಮರ್ಕಝ್ ಅಬ್ದುಲ್ಲಾ ಬಿನ್ ಅಬ್ಬಾಸ್ ಎಂಬ ಸಂಸ್ಥೆ ಯಲ್ಲಿ ಖುರಾನ್ ಹಿಫ್ಳ್ ಅಭ್ಯಾಸ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಈಜಿಪ್ಟಿನ ಅಲ್ ಅಝ್ಹರಿ ಕಾಲೇಜಿನಲ್ಲಿ ಉನ್ನತ ವಿಧ್ಯಾಭ್ಯಾಸ ನಡೆಸುವ ಆಕಾಂಕ್ಷೆ ಹೊಂದಿದ್ದಾರೆ. ದರ್ವೇಶ್ ಅರಬಿ, ಇಂಗ್ಲಿಷ್, ಕನ್ನಡ, ತಮಿಲು, ಮಲಯಾಳಂ, ಹಿಂದಿ, ಪಂಜಾಬಿ ಭಾಷೆಗಳಲ್ಲಿ ಹಾಡುತ್ತಿದ್ದ ದರ್ವೇಶ್ ತನ್ನ ಆರನೇ ವರ್ಷ ಪ್ರಾಯದಿಂದಲೇ ವಿವಿಧ ಸ್ಪರ್ಧಾ ವೇದಿಕೆಗಳಲ್ಲಿ ಮಿಂಚಲಾರಂಭಿಸಿದ್ದರು.

share
ವರದಿ: ಹಕೀಂ ಮದೀನಾ
ವರದಿ: ಹಕೀಂ ಮದೀನಾ
Next Story
X