Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೂಢ ನಂಬಿಕೆಗಳ ಮೂಟೆ ಹೊತ್ತಿರುವ...

ಮೂಢ ನಂಬಿಕೆಗಳ ಮೂಟೆ ಹೊತ್ತಿರುವ ರಾಜಕಾರಣಿಗಳನ್ನು ಸರಿಪಡಿಸಬೇಕಾಗಿದೆ: ಕತೆಗಾರ ಡಾ.ಮೊಗಳ್ಳಿ ಗಣೇಶ್

ವಾರ್ತಾಭಾರತಿವಾರ್ತಾಭಾರತಿ9 Jun 2018 11:12 PM IST
share
ಮೂಢ ನಂಬಿಕೆಗಳ ಮೂಟೆ ಹೊತ್ತಿರುವ ರಾಜಕಾರಣಿಗಳನ್ನು ಸರಿಪಡಿಸಬೇಕಾಗಿದೆ: ಕತೆಗಾರ ಡಾ.ಮೊಗಳ್ಳಿ ಗಣೇಶ್

ಮಂಡ್ಯ, ಜೂ.9: ಪ್ರಜಾಪ್ರಭುತ್ವದ ದೇವಾಲಯಗಳಲ್ಲಿ(ಲೋಕಸಭೆ, ವಿಧಾನಸಭೆ) ಮೂಢ ನಂಬಿಕೆಗಳ ಮೂಟೆ ಹೊತ್ತುಕೊಂಡಿರುವ ರಾಜಕಾರಣಿಗಳನ್ನು, ಸರಕಾರಿ ವ್ಯವಸ್ಥೆಯನ್ನು ನಾವು ಸರಿಪಡಿಸಬೇಕಾಗಿದೆ ಎಂದು ಖ್ಯಾತ ಕತೆಗಾರ ಡಾ.ಮೊಗಳ್ಳಿ ಗಣೇಶ್ ಕರೆ ನೀಡಿದ್ದಾರೆ.

ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ ಕೊಡಮಾಡುವ 2017ರ ಸಾಲಿನ ಡಾ.ಬೆಸಗರಹಳ್ಳಿ ರಾಮಣ್ಣ ಕಥಾಸಂಕಲನ ಪ್ರಶಸ್ತಿಯನ್ನು ಶನಿವಾರ ಸ್ವೀಕರಿಸಿ ಮಾತನಾಡಿದ ಅವರು, ನಾವು ಯಾವುದು ಕತ್ತಲು ಎಂದು ಒಪ್ಪಿಕೊಂಡಿದ್ದೇವೆಯೋ ಆ ಕತ್ತಲಲ್ಲಿ ಬೆಳಗೋ ರೀತಿಯಲ್ಲಿ ವರ್ತಿಸುತ್ತಿರುವ ಜನಪ್ರತಿನಿಧಿಗಳನ್ನು ಮನುಷ್ಯತ್ವದ ಕಡೆಗೆ ತರುವುದು ಹೇಗೆ? ಎಂಬುದರ ಬಗ್ಗೆ ಚಿಂತನೆ ಮಾಡಬೇಕಾಗಿದೆ ಎಂದರು.

ಇವತ್ತು ನಾವು ಯಾವುದನ್ನು ಮತ, ಮೌಢ್ಯಗಳೆಂದು, ಕಂದಾಚಾರವೆಂದು ಕರೆಯುತ್ತೇವೆಯೋ, ಅದನ್ನು ತಲೆಯ ಮೇಲೆ ಹೊತ್ತುಕೊಂಡು, ಹೊಟ್ಟೆ ತುಂಬಾ ತುಂಬಿಕೊಂಡು, ಎದೆ ಮೇಲೆ ಹಾಕ್ಕೊಂಡು ಒಂದು ರಾಜಕೀಯ ವ್ಯವಸ್ಥೆಯನ್ನು ಹೇಸಿಗೆ ಮಾಡಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಬಡಪಾಯಿಗಳಿಗೆ, ದಿಕ್ಕೆಟ್ಟವರಿಗೆ ಸಿಗಬೇಕಾದ ನಿಜವಾದ ಪ್ರಜಾಪ್ರಭುತ್ವದ ನ್ಯಾಯವನ್ನು ಹೇಗೆ ಕೊಡಿಸುವುದು? ಮನುಷ್ಯನ ಅಂತಃಕರಣವನ್ನು ಮತ್ತೆ ಬೆಳಗಿಸುವುದು ಹೇಗೆ? ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಹೋರಾಟಗಾರರು, ಪ್ರಜ್ಞಾವಂತ ಸಮಾಜ, ಮನುಷ್ಯತ್ವದ ಕನಸನ್ನು ಉಳಿಸಿಕೊಂಡಿರುವವರು ಈ ಕತ್ತಲಿನ ವಿರುದ್ಧವಾಗಿ ಸಾಹಿತ್ಯ ಸಂವೇದನೆಯ ಹಣತೆಯನ್ನು ಸದಾ ಬೆಳಗಿಸಬೇಕಾಗುತ್ತದೆ ಎಂದು ಅವರು ಕಿವಿಮಾತು ಹೇಳಿದರು.

ರಾಮಣ್ಣನವರ ಕತೆಗಳ ಕೊಂಡಿ ನಾನು. ದಿಕ್ಕೆಟ್ಟ ತಾಯಂದಿರು, ಅನಾಥ ಮಕ್ಕಳು, ಅನಾಥ ಸಮಾಜ, ಮನುಷ್ಯತ್ವವೇ ಇಲ್ಲದೆ ಕ್ರೂರವಾದ ಜಗತ್ತಿನಲ್ಲಿ ಕಳೆದುಹೋಗಿರುವ ಮನುಷ್ಯನನ್ನು ಹುಡುಕುವ ರಾಮಣ್ಣನವರ ಕತೆಗಳಿಗೂ ನನ್ನ ಕತೆಗಳಿಗೂ ಯಾವ ವ್ಯತ್ಯಾಸವಿಲ್ಲ ಎಂದು ಗಣೇಶ್ ಅಭಿಪ್ರಾಯಪಟ್ಟರು.

ಒಂದೇ ಬಳ್ಳಿಯ, ಒಂದೇ ತಾಯಿಯ ಮಕ್ಕಳು ಹೇಗೋ ಹಾಗೆ ನನ್ನ ಮತ್ತು ರಾಮಣ್ಣ ಅವರ ಕತೆಗಳು. ಆ ರೀತಿಯ ಕಥಾ ಪರಂಪರೆಯಬ್ಬಯ ಕೊಂಡಿಯನ್ನು ಹಾಗೆಯೇ ವಿಸ್ತರಿಸಬಹುದು. ಕನ್ನಡ ಕಥಾ ಸಾಹಿತ್ಯದಲ್ಲಿ ಇಂತಹ ಒಂದು ಪರಂಪರೆಯೇ ಇದೆ. ಆ ಪರಂಪರೆಯಲ್ಲಿ ಜತೆಗೆ ನಾನು ಬಂದಿದ್ದೇನೆ ಎಂದು ಅವರು ಹೇಳಿದರು.

‘ದೇವರ ದಾರಿ’ ಕೃತಿಗಾಗಿ ಡಾ.ಮೊಗಳ್ಳಿ ಗಣೇಶ್ ಅವರಿಗೆ ಸುಪ್ರಸಿದ್ದ ಕವಿ, ಜೆಎನ್‍ಯು ಪ್ರಾಧ್ಯಾಪಕ ಪ್ರೊ.ಎಚ್.ಎಸ್.ಶಿವಪ್ರಕಾಶ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಪ್ರಶಸ್ತಿಯು 25 ಸಾವಿರ ನಗದು, ಪ್ರಶಸ್ತಿ ಫಲಕ, ಪತ್ರ ಒಳಗೊಂಡಿದೆ.

ಪ್ರಸಿದ್ಧ ವಿಮರ್ಶಕಿ ಡಾ.ವಿನಯಾ ವಕ್ಕುಂದ ಡಾ.ಬೆಸಗರಹಳ್ಳಿ ರಾಮಣ್ಣ ಅವರ ಕತೆಗಳ ಕುರಿತು ಹಾಗೂ ಬೆಂಗಳೂರು ಮಹಾರಾಣಿ ಅಮ್ಮಣ್ಣಿ ಕಾಲೇಜಿನ ಪ್ರಾಧ್ಯಾಪಕ ಡಾ.ಟಿ.ಎಸ್.ರಘುನಾಥ್ ಪ್ರಶಸ್ತಿ ಪಡೆದ ಕೃತಿ ದೇವರ ದಾರಿ ಕುರಿತು ಮಾತನಾಡಿದರು.

ಪ್ರತಿಷ್ಠಾನದ ಅಧ್ಯಕ್ಷ ಡಾ.ಕೆ.ಪುಟ್ಟಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಪ್ರತಿಷ್ಠಾನದ ಅಜೀವ ಪೋಷಕರಾದ ಡಿ.ಪಿ.ರಾಜಮ್ಮ ರಾಮಣ್ಣ, ರಾಮಣ್ಣ ಪುತ್ರ ಹಿರಿಯ ಪೊಲೀಸ್ ಅಧಿಕಾರಿ ಬಿ.ಆರ್.ರವಿಕಾಂತೇಗೌಡ, ಪ್ರತಿಷ್ಠಾನದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದೇ ವೇಳೆ ಮಳವಳ್ಳಿ ತಾಲೂಕು ದಾಸನದೊಡ್ಡಿಯ ಪರಿಸರ ಪ್ರೇಮಿ ಕಾಮೇಗೌಡ ಅವರಿಗೆ ಪ್ರತಿಷ್ಠಾನದ ವತಿಯಿಂದ 10 ಸಾವಿರ ರೂ. ನಗದು ಒಳಗೊಂಡ ಪ್ರಶಸ್ತಿ ಪ್ರದಾನಿಸಿ ಅಭಿನಂದಿಸಲಾಯಿತು.

ಕುವೆಂಪು ಅವರು ಸಾರಿದ ವೈಚಾರಿಕ ಕ್ರಾಂತಿಯ ಬೆಳಗನ್ನು ಕಾಪಾಡಿಕೊಂಡು ಬಂದಿದ್ದೇವೆ. ಆ ಟಾರ್ಚನ್ನು ಯಾವುದೇ ಕಾರಣಕ್ಕೂ ಕೆಳಗಿಟ್ಟಿಲ್ಲ, ಇಡುವುದೂ ಇಲ್ಲ. ಅದು ಸದಾ ಜಗತ್ತಿಗೆ ಬೇಕಾದ ಟಾರ್ಚ್.
-ಡಾ.ಮೊಗಳ್ಳಿ ಗಣೇಶ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X