ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಸಚಿವ ಖಾದರ್ಗೆ ಸನ್ಮಾನ

ಮಂಗಳೂರು, ಜೂ. 10: ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ಅವರು ರವಿವಾರ ಶ್ರೀ ಕ್ಷೇತ್ರ ಕುದ್ರೋಳಿಗೆ ಭೇಟಿ ನೀಡಿದರು. ಈ ಸಂದರ್ಭ ಶ್ರೀ ಕ್ಷೇತ್ರದ ಆಡಳಿತ ಸಮಿತಿಯ ವತಿಯಿಂದ ಖಾದರ್ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.
ಖಾದರ್ ಅವರು ಸಚಿವ ಸ್ಥಾನ ಅಲಂಕರಿಸಿ ಜಿಲ್ಲೆಗೆ ಆಗಮಿಸಿದ ಬಳಿದ ಜಿಲ್ಲೆಯ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದರು.
Next Story