Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯು.ಎ.ಇ ಮೂಡಿಗೆರೆ ವೆಲ್ಫೇರ್...

ಯು.ಎ.ಇ ಮೂಡಿಗೆರೆ ವೆಲ್ಫೇರ್ ಅಸೋಷಿಯೇಶನ್‍ನಿಂದ ಇಫ್ತಾರ್ ಕಿಟ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ10 Jun 2018 11:20 PM IST
share
ಯು.ಎ.ಇ ಮೂಡಿಗೆರೆ ವೆಲ್ಫೇರ್ ಅಸೋಷಿಯೇಶನ್‍ನಿಂದ ಇಫ್ತಾರ್ ಕಿಟ್ ವಿತರಣೆ

ಮೂಡಿಗೆರೆ,ಜೂ.10: ರಂಜಾನ್ ತಿಂಗಳಲ್ಲಿ ದಾನ, ಧರ್ಮ ನೀಡಿದರೆ, ಇಹಪರರದಲ್ಲಿ ಯಶಸ್ಸು ದೊರಕಲಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಕಿರುಗುಂದ ಅಬ್ಬಾಸ್ ಹೇಳಿದರು.

ಅವರು ಭಾನುವಾರ ಜಾಮಿಯಾ ಶಾದಿ ಮಹಲ್‍ನಲ್ಲಿ ಯು.ಎ.ಇ.ಮೂಡಿಗೆರೆ ವೆಲ್ಫೇರ್ ಅಸೋಷಿಯೇಷನ್ ವತಿಯಿಂದ ಹಮ್ಮಿಕೊಂಡಿದ್ದ ಪವಿತ್ರ ರಂಜಾನ್ ಮಾಸದ ಇಫ್ತಾರ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. 

ವಿದೇಶಿ ನೆಲದಲ್ಲಿ ಕಠಿಣ ಪರಿಶ್ರಮದ ಮೂಲಕ ಬೆವರು ಸುರಿಸಿ ದುಡಿದು ತನ್ನ ಕುಟುಂಬವನ್ನು ಸಾಕುವ ಜತೆಗೆ ಸಂಘಟನೆಗಳನ್ನು ಕಟ್ಟಿ, ಬಡವರ ಬಗ್ಗೆ ಕಾಳಜಿ ಹೊಂದುತ್ತಿರುವ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ವಿದೇಶದಲ್ಲಿ ದುಡಿಯುವ ವೇಳೆ ತನ್ನ ಮನೆಯಲ್ಲಿ ಶುಭಕಾರ್ಯಗಳು ಅಥವಾ ಸಾವು-ನೋವು ಸಂಭವಿಸಿದರೆ ಭಾರತದಲ್ಲಿರುವ ತನ್ನ ಮನೆಗೆ ಬರಲು ಸಾಧ್ಯವಾಗದೆ ಅಸಹಾಯಕ ಪರಿಸ್ಥಿತಿಯಲ್ಲಿ ದುಡಿಯುತ್ತಿರುತ್ತಾರೆ. ಇಂಥವರು ಸಮಾಜದ ಸುಧಾರಣೆಗೆಂದು ತಮ್ಮ ಜೀವನವನ್ನು ಮುಡಿಪಾಗಿಟ್ಟುಕೊಳ್ಳುತ್ತಾರೆ ಎಂದು ತಿಳಿಸಿದರು.

ಯುಎಇ ಮೂಡಿಗೆರೆ ವೆಲ್ಫೇರ್ ಅಸೋಷಿಯೇಷನ್ ಉಪಾಧ್ಯಕ್ಷ ಸಬ್ಬೇನಹಳ್ಳಿ ಹಂಝ ಮಾತನಾಡಿ, ಕಳೆದ 10 ವರ್ಷದ ಹಿಂದೆ ತಮ್ಮ ಬಳಗ ಸೇರಿಕೊಂಡು ಈ ಸಂಘಟನೆಗೆ ದುಬೈಯಲ್ಲಿ ಚಾಲನೆ ನೀಡಲಾಯಿತು. ಬಳಿಕ ಭಾರತದಲ್ಲಿರುವ ಅತೀ ಬಡ ಕುಟುಂಬಗಳನ್ನು ಗುರುತಿಸಿ ಶಿಕ್ಷಣದಿಂದ ವಂಚಿತರಾದ ವಿದ್ಯಾರ್ಥಿಗಳು, ಅನಾರೋಗ್ಯಕ್ಕೆ ತುತ್ತಾದ ರೋಗಿಗಳು ಮತ್ತಿತರೆ ಅರ್ಹ ಫಲಾನುಭವಿಗಳಿಗೆ ಅವರ ಕಷ್ಟದಲ್ಲಿ ಪಾಲ್ಗೊಳ್ಳುವ ಜೊತೆಗೆ ಉಚಿತ ಆಂಬುಲೆನ್ಸ್ ಸೇವೆಯನ್ನು ಸಂಘದಿಂದ ಒದಗಿಸಿದ್ದೇವೆ. ರಂಜಾನ್ ತಿಂಗಳಲ್ಲಿ ಉಪವಾಸ ವ್ರತಾಚರಣೆಯಲ್ಲಿ ಪಾಲ್ಗೊಳ್ಳುವ ಬಡತನ ರೇಖೆಗಿಂತ ಕೆಳಗಿನವರಿಗೆ ರಂಝಾನ್ ಕಿಟ್ ಸಹಿತ ಹಲವು ರೀತಿಯ ಸಮಾಜ ಸೇವೆ ಮಾಡಿಕೊಂಡು ಬಂದಿರುವ ನಮ್ಮ ಸಂಘಟನೆ ಭಾರತ ಮತ್ತು ವಿದೇಶದಲ್ಲಿ ಸಕ್ರಿಯವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಬ್ಯಾರಿಗಳ ಒಕ್ಕೂಟದ ಅಧ್ಯಕ್ಷ ಸಿ.ಕೆ.ಇಬ್ರಾಹಿಂ ಮಾತನಾಡಿ, ಕಾರ್ಮಿಕರಾಗಿ ದುಡಿಯುವ ಬಡತನದ ಬೇಗೆಯಲ್ಲಿ ಬೆಂದು ಬಸವಳಿಯುವ ವರ್ಗಗಳ ಸರ್ವೆ ನಡೆಸಿ ಅಂತಹ ಕುಟುಂಬದ ಜೀವನ ಸಂಕಷ್ಟ ಬಗೆಹರಿಸುವ ಸಣ್ಣಮಟ್ಟದ ಪ್ರಯತ್ನವನ್ನು ಸಂಘ ಸಂಸ್ಥೆಗಳು ಮಾಡಬೇಕು. ಸಮಾಜ ಸೇವೆ ಮಾಡುವ ಸಂಘಟನೆಗಳು ಸಮಾಜದಲ್ಲಿ ಉತ್ತಮ ಸ್ಥಾನಕ್ಕೇರಲಿದೆ. ಹಾಗಾಗಿ ಶ್ರೀಮಂತ ವರ್ಗ ಸಮಾಜದಲ್ಲಿ ಕಾರ್ಯಾಚರಿಸುತ್ತಿರುವ ಸಂಘಟನೆಗಳಿಗೆ ಆರ್ಥಿಕ ನೆರವನ್ನು ನೀಡುವ ಮೂಲಕ ಸಮಾಜಸೇವೆಗೆ ಶಕ್ತಿ ತುಂಬಬೇಕು ಎಂದು ತಿಳಿಸಿದರು.

ಈ ವೇಳೆ ಸುಮಾರು 500 ಮಂದಿಗೆ ರಂಜಾನ್ ಮಾಸದ ಇಫ್ತಾರ್ ಕಿಟ್ ವಿತರಣೆ ಮಾಡಲಾಯಿತು. ಮೌಲಾನ ವಾಜಿದ್ ಹಾಜಿ ಕಿರಾಅತ್ ಪಠಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ತಾಲೂಕು ಬ್ಯಾರಿಗಳ ಒಕ್ಕೂಟದ ಅಧ್ಯಕ್ಷ ಎ.ಸಿ.ಅಯೂಬ್ ಹಾಜಿ, ಅಬ್ದುಲ್ ಸುಕುರ್ ಸಾಬ್ ಹಾಜಿ, ಜದೀದ್ ಮಸೀದಿ ಅಧ್ಯಕ್ಷ ಪ್ಯಾರುಜಾನ್ ಹಾಜಿ, ಬಿದರಹಳ್ಳಿ ಜಾಮಿಯಾ ಮಸೀದಿ ಅಧ್ಯಕ್ಷ ಅಬ್ರಾರ್ ಅಹ್ಮದ್, ಸಮಾಜ ಸೇವಕ ಫಿಶ್‍ ಮೋನು, ಕಾಫಿ ಬೆಳೆಗಾರ ಹಂಡುಗುಳಿ ಉಮರಬ್ಬ ಹಾಜಿ, ಪೀಸ್ ಅಂಡ್ ಅವೇರ್‍ನೆಸ್ ಟ್ರಸ್ಟ್ ಅಧ್ಯಕ್ಷ ಅಲ್ತಾಫ್ ಬಿಳಗುಳ, ಬಿ.ಎಚ್.ಮಹಮ್ಮದ್, ಅಬ್ದುಲ್ ರಝಾಕ್, ಎಜಾಜ್ ಪಾಶ, ಮೊಹಮ್ಮದ್ ಆರಿಫ್ ಜಾನ್, ಸಿರಾಜ್ ಭೂತನಕಾಡು, ಅಲ್ಲಾವುದ್ದೀನ್, ಮೊಹಮ್ಮದ್ ನಯೀಮ್ ಪಾಶ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X