Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಚೊಚ್ಚಲ ಗ್ರ್ಯಾನ್‌ಸ್ಲಾಮ್ ಗೆಲುವಿಗೆ...

ಚೊಚ್ಚಲ ಗ್ರ್ಯಾನ್‌ಸ್ಲಾಮ್ ಗೆಲುವಿಗೆ ಮ್ಯಾನೇಜರ್ ಸ್ಫೂರ್ತಿ

ಫ್ರೆಂಚ್ ಓಪನ್‌

ವಾರ್ತಾಭಾರತಿವಾರ್ತಾಭಾರತಿ10 Jun 2018 11:55 PM IST
share
ಚೊಚ್ಚಲ ಗ್ರ್ಯಾನ್‌ಸ್ಲಾಮ್ ಗೆಲುವಿಗೆ ಮ್ಯಾನೇಜರ್ ಸ್ಫೂರ್ತಿ

ಪ್ಯಾರಿಸ್, ಜೂ.10: ರೊಲ್ಯಾಂಡ್ ಗ್ಯಾರೊಸ್‌ನಲ್ಲಿ 40 ವರ್ಷಗಳ ಹಿಂದೆ ತನ್ನ ಮ್ಯಾನೇಜರ್ ವರ್ಜಿನಿಯ ರುಝಿಸಿ ಮಾಡಿರುವ ಸಾಧನೆಯೇ ತಾನು ಚೊಚ್ಚಲ ಗ್ರಾನ್‌ಸ್ಲಾಮ್ ಪ್ರಶಸ್ತಿ ಜಯಿಸಲು ಸ್ಫೂರ್ತಿಯಾಗಿದೆ ಎಂದು ಫ್ರೆಂಚ್ ಓಪನ್‌ನ ನೂತನ ಮಹಿಳಾ ಚಾಂಪಿಯನ್ ಸಿಮೊನಾ ಹಾಲೆಪ್ ಹೇಳಿದ್ದಾರೆ. ಹಾಲೆಪ್‌ಗೆ ಈಗ ಮ್ಯಾನೇಜರ್ ಆಗಿರುವ ರುಝಿಸಿ 1978ರಲ್ಲಿ ಫ್ರೆಂಚ್ ಓಪನ್‌ನಲ್ಲಿ ಮಿಮಾ ಜಸೌಸೊವಿಕ್‌ರನ್ನು ಮಣಿಸಿ ಗ್ರಾನ್‌ಸ್ಲಾಮ್ ಪ್ರಶಸ್ತಿ ಜಯಿಸಿದ್ದರು. ಆ ಬಳಿಕ ರೊಮೇನಿಯಾದ ಯಾವ ಆಟಗಾರ್ತಿ ಅಥವಾ ಆಟಗಾರ ಗ್ರಾನ್‌ಸ್ಲಾಮ್ ಪ್ರಶಸ್ತಿ ಜಯಿಸಿಲ್ಲ.

ಶನಿವಾರ ನಡೆದ ಮಹಿಳೆಯರ ಸಿಂಗಲ್ಸ್ ಫೈನಲ್‌ನಲ್ಲಿ ಅಮೆರಿಕದ ಸ್ಲೋಯಾನೆ ಸ್ಟೀಫನ್ಸ್‌ರನ್ನು 3-6, 6-4, 6-1 ಸೆಟ್‌ಗಳಿಂದ ಮಣಿಸಿದ ಹಾಲೆಪ್ ದೀರ್ಘಕಾಲದ ಕಾಯುವಿಕೆಗೆ ಅಂತ್ಯ ಹಾಡಿದರು. ತನ್ನ ನಾಲ್ಕನೇ ಪ್ರಯತ್ನದಲ್ಲಿ ಗ್ರಾನ್‌ಸ್ಲಾಮ್ ಪ್ರಶಸ್ತಿ ಜಯಿಸಿದ ಹಾಲೆಪ್ ಅಮೆರಿಕದ ಏಳು ಬಾರಿಯ ಫ್ರೆಂಚ್ ಓಪನ್ ಚಾಂಪಿಯನ್ ಕ್ರಿಸ್ ಎವರ್ಟ್ ದಾಖಲೆಯನ್ನು ಸರಿಗಟ್ಟಿದರು. ಎವರ್ಟ್ 1974ರಲ್ಲಿ ಫ್ರೆಂಚ್ ಓಪನ್ ಜಯಿಸುವ ಮೊದಲು ಮೂರು ಬಾರಿ ಗ್ರಾನ್‌ಸ್ಲಾಮ್ ಫೈನಲ್‌ನಲ್ಲಿ ಎಡವಿದ್ದರು.

  ‘‘ನನ್ನ ಗೆಲುವಿಗೆ ಮ್ಯಾನೇಜರ್ ಸ್ಫೂರ್ತಿ. ನನ್ನ ಮ್ಯಾನೇಜರ್ 40 ವರ್ಷಗಳ ಹಿಂದೆ ಪ್ಯಾರಿಸ್‌ನಲ್ಲಿ ಟ್ರೋಫಿ ಜಯಿಸಿದ್ದರು. ಇದೊಂದು ವಿಶೇಷ ಕ್ಷಣ. ಫ್ರೆಂಚ್ ಓಪನ್‌ನಲ್ಲಿ ಗ್ರಾನ್‌ಸ್ಲಾಮ್ ಪ್ರಶಸ್ತಿ ಜಯಿಸಿರುವುದು ಒಂದು ವಿಶೇಷ’’ ಎಂದು ಮ್ಯಾನೇಜರ್ ರುಝಿಸಿಯವರೊಂದಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಹಾಲೆಪ್ ಅಭಿಪ್ರಾಯಪಟ್ಟರು.

 ಹಾಲೆಪ್ ಶನಿವಾರ ಪ್ಯಾರಿಸ್ ಓಪನ್ ಚಾಂಪಿಯನ್ ಆಗುವ ಮೊದಲು ಮೂರು ಬಾರಿ ಗ್ರಾನ್‌ಸ್ಲಾಮ್ ಫೈನಲ್‌ನಲ್ಲಿ ಸೋತಿದ್ದರು. ಪ್ಯಾರಿಸ್‌ನಲ್ಲಿ 2 ಬಾರಿ ಟ್ರೋಫಿ ವಂಚಿತರಾಗಿದ್ದರು. 2014ರಲ್ಲಿ ಮರಿಯಾ ಶರಪೋವಾಗೆ ಸೋತಿದ್ದ ಹಾಲೆಪ್ 2017ರಲ್ಲಿ ಜೆಲೆನಾ ಒಸ್ಟಾಪೆಂಕೊ ವಿರುದ್ಧ ಸೋತಿದ್ದರು. ಈ ವರ್ಷದ ಆಸ್ಟ್ರೇಲಿಯನ್ ಓಪನ್‌ನಲ್ಲಿ ಫೈನಲ್‌ಗೆ ತಲುಪಿದ್ದರೂ ಕರೊಲಿನ್ ವೋಝ್ನಿಯಾಕಿಗೆ ಸೋತಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X