Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತದಲ್ಲಿ ಫುಟ್ಬಾಲ್ ಸಂಸ್ಕೃತಿಯ...

ಭಾರತದಲ್ಲಿ ಫುಟ್ಬಾಲ್ ಸಂಸ್ಕೃತಿಯ ಕೊರತೆಯಿದೆ: ಭುಟಿಯಾ

ವಾರ್ತಾಭಾರತಿವಾರ್ತಾಭಾರತಿ10 Jun 2018 11:56 PM IST
share
ಭಾರತದಲ್ಲಿ ಫುಟ್ಬಾಲ್ ಸಂಸ್ಕೃತಿಯ ಕೊರತೆಯಿದೆ: ಭುಟಿಯಾ

ಹೊಸದಿಲ್ಲಿ, ಜೂ.10: ‘‘ಫಿಫಾ ವಿಶ್ವಕಪ್‌ನಲ್ಲಿ ಆಡುವುದು ಭಾರತದ ಪಾಲಿಗೆ ಒಂದು ಕನಸಾಗಿ ಉಳಿದಿದೆ. ನಮ್ಮ ದೇಶದಲ್ಲಿ ಫುಟ್ಬಾಲ್ ಸಂಸ್ಕೃತಿಯ ಕೊರತೆಯಿದೆ. ಇಂತಹ ವಾತಾವರಣ ಶೀಘ್ರವೇ ಬದಲಾವಣೆಯಾಗುವ ಸಾಧ್ಯತೆಯೂ ಇಲ್ಲ್ಲ’’ ಎಂದು ಫುಟ್ಬಾಲ್ ದಿಗ್ಗಜರಾದ ಭೈಚುಂಗ್ ಭುಟಿಯಾ ಹಾಗೂ ಐ.ಎಂ.ವಿಜಯನ್ ಅಭಿಪ್ರಾಯಪಟ್ಟಿದ್ದಾರೆ.

‘‘ದೇಶದಲ್ಲಿ ಫುಟ್ಬಾಲ್ ಬೆಳವಣಿಗೆಯತ್ತ ಕಾರ್ಯೋನ್ಮುಖವಾಗುವ ಅಗತ್ಯವಿದೆ. ಇಲ್ಲವಾದರೆ ಕ್ರಿಕೆಟ್ ಎಲ್ಲವನ್ನೂ ಆಹುತಿ ತೆಗೆದುಕೊಳ್ಳಲಿದೆ. ಇತ್ತೀಚೆಗಿನ ದಿನಗಳಲ್ಲಿ ಭಾರತದ ಫುಟ್ಬಾಲ್ ತಂಡ ಉತ್ತಮವಾಗಿ ಆಡುತ್ತಿದೆ. ಆದರೆ, ವಿಶ್ವಕಪ್ ಬಗ್ಗೆ ಮಾತನಾಡುವಾಗ ಅದೊಂದು ವಿಭಿನ್ನ ವಿಷಯವಾಗುತ್ತದೆ. ದೇಶದಲ್ಲಿ ಫುಟ್ಬಾಲ್ ಸಂಸ್ಕೃತಿ ಸೃಷ್ಟಿಸುವುದು ದೊಡ್ಡ ಸವಾಲಾಗಿದೆ’’ ಎಂದು 41ರ ಹರೆಯದ ಭುಟಿಯಾ ಹೇಳಿದ್ದಾರೆ. ‘‘ನಮ್ಮಲ್ಲಿ ಪ್ರತಿಭೆಗಳ ಕೊರತೆಯಿಲ್ಲ. ಮೂಲಭೂತ ಸೌಕರ್ಯ ಈಗ ಹಿಂದಿಗಿಂತ ಚೆನ್ನಾಗಿದೆ. ಯುವ ಕಲ್ಯಾಣ ಯೋಜನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಆದರೆ, ಫುಟ್ಬಾಲ್ ಸಂಸ್ಕೃತಿ ಮಾಯವಾಗಿದೆ’’ಎಂದು ಭಾರತದ ಮಾಜಿ ಶ್ರೇಷ್ಠ ಸ್ಟ್ರೈಕರ್ ಭುಟಿಯಾ ಹೇಳಿದ್ದಾರೆ. ‘‘ನಮ್ಮ ಫುಟ್ಬಾಲ್ ಕ್ಲಬ್‌ಗಳು ಹಾಗೂ ಸಂಸ್ಥೆಗಳು ವಿದೇಶದ ಅಗ್ರ ಫುಟ್ಬಾಲ್ ಕ್ಲಬ್‌ನೊಂದಿಗೆ ಒಪ್ಪಂದ ಮಾಡಿಕೊಳ್ಳಲು ಮುಂದಾಗಬೇಕು. ಕಾಟಾಚಾರದ ಒಪ್ಪಂದವಾಗದೇ ಅದರಲ್ಲಿ ಗಂಭೀರತೆ ಇರಬೇಕು. ನಮ್ಮ ದೇಶದ ಫುಟ್ಬಾಲ್ ಪ್ರತಿಭೆಗಳಿಗೆ ಬಾರ್ಸಿಲೋನದ ಅಕಾಡಮಿ ತರಬೇತಿ ನೀಡುತ್ತಿದೆ. ಭಾರತದಲ್ಲಿ ಫುಟ್ಬಾಲ್ ಪ್ರತಿಭೆಗೆ ಕೊರತೆಯಿಲ್ಲ. ಈಗ ನಾವು ವಿಶ್ವಕಪ್‌ಗೆ ಅರ್ಹತೆ ಬಗ್ಗೆ ಮಾತನಾಡುತ್ತೇವೆ. ಈ ಸಂದರ್ಭದಲ್ಲಿ ಅದು ಅತ್ಯಂತ ಕಷ್ಟದ ಕೆಲಸ. ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ ಆಡಲು ನಾವು ಇನ್ನಷ್ಟು ವರ್ಷ ಕಾಯಬೇಕಾಗಿದೆ’’ಎಂದು ಐಎಂ ವಿಜಯನ್ ಹೇಳಿದ್ದಾರೆ.

​

share
ವಾರ್ತಾಭಾರತಿ
ವಾರ್ತಾಭಾರತಿ
Next Story
X