Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿರೀಕ್ಷೆಯ ಮಟ್ಟ ತಲುಪದ ಪ್ರಧಾನಿಯ...

ನಿರೀಕ್ಷೆಯ ಮಟ್ಟ ತಲುಪದ ಪ್ರಧಾನಿಯ ಮಹತ್ವಾಕಾಂಕ್ಷೆಯ ‘ಉಡಾನ್’ ಯೋಜನೆ

ವಿಮಾನ ನಿಲ್ದಾಣ ನಿರ್ಮಾಣದಲ್ಲಿ ಹಿನ್ನಡೆ

ವಾರ್ತಾಭಾರತಿವಾರ್ತಾಭಾರತಿ11 Jun 2018 6:02 PM IST
share
ನಿರೀಕ್ಷೆಯ ಮಟ್ಟ ತಲುಪದ ಪ್ರಧಾನಿಯ ಮಹತ್ವಾಕಾಂಕ್ಷೆಯ ‘ಉಡಾನ್’ ಯೋಜನೆ

ಹೊಸದಿಲ್ಲಿ, ಜೂ.11: ಹೆಚ್ಚು ಹೆಚ್ಚು ಜನರು ವಿಮಾನಗಳಲ್ಲಿ ಪ್ರಯಾಣಿಸುವಂತಾಗಲು ಸಣ್ಣ ನಗರಗಳಲ್ಲಿನ ವಿಮಾನ ನಿಲ್ದಾಣಗಳ ಅಭಿವೃದ್ಧಿ ಅಥವಾ ಹೊಸ ನಿಲ್ದಾಣಗಳ ನಿರ್ಮಾಣ ಮಾಡುವ ಪ್ರಧಾನಿ ನರೇಂದ್ರ ಮೋದಿಯ ಮಹತ್ವಾಕಾಂಕ್ಷೆಯ ಉಡಾನ್ ಯೋಜನೆ ಕಳೆದ ವರ್ಷ ಉದ್ಘಾಟನೆಗೊಂಡಿದ್ದರೂ ಅದು ತನ್ನ ಉದ್ದೇಶವನ್ನು ಸದ್ಯೋಭವಿಷ್ಯದಲ್ಲಿ ಈಡೇರಿಸುವ ಸಾಧ್ಯತೆ ಕಡಿಮೆಯಾಗಿದೆ.

ಉಡಾನ್- ಅಂದರೆ ಉಡ್ ದೇಶ ಕಾ ಆಮ್ ನಾಗರಿಕ್ ಎಂಬ ಈ ಯೋಜನೆಯಂಗವಾಗಿ  ಹೊಸ ವಿಮಾನ ನಿಲ್ದಾಣಗಳ ನಿರ್ಮಾಣ ಅಥವಾ ಈಗಿರುವ ಸಣ್ಣ ನಿಲ್ದಾಣಗಳ ಅಭಿವೃದ್ಧಿ ನಿರೀಕ್ಷಿಸಿದ ಮಟ್ಟಕ್ಕೆ ಆಗಿಲ್ಲ. ಈ ಕಾರಣದಿಂದಾಗಿ ಮುಂದಿನ ಐದು ವರ್ಷಗಳಲ್ಲಿ 10 ಕೋಟಿ ಜನರನ್ನು ವಿಮಾನ ಪ್ರಯಾಣಿಕರನ್ನಾಗಿಸುವ ಯೋಜನೆ ಕೈಗೂಡುವ ಸಾಧ್ಯತೆಯಿಲ್ಲವೆಂದು ಸರಕಾರಿ ಅಧಿಕಾರಿಗಳೇ ಹೇಳುತ್ತಿದ್ದಾರೆ. ಕಳೆದ ವರ್ಷದ ಅಂತ್ಯದೊಳಗಾಗಿ ಸರಕಾರ 31 ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಿಸುವ ಗುರಿ ಹೊಂದಿದ್ದರೂ ಇಲ್ಲಿಯ ತನಕ ಕೇವಲ 16 ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಕೆಲ ರಾಜ್ಯಗಳು ತಮ್ಮ ಬಳಿ ವಿಮಾನ ನಿಲ್ದಾಣ ಸ್ಥಾಪನೆಗೆ  ಸಾಕಷ್ಟು ಹಣಕಾಸು ಇಲ್ಲ ಎಂಬ ಸಬೂಬು ನೀಡಿವೆ. ಇನ್ನು ಕೆಲವೆಡೆ ವಿಮಾನ ನಿಲ್ದಾಣಗಳಿಗೆ ಅಗತ್ಯವಾದ  ಏರ್ ಟ್ರಾಫಿಕ್ ಕಂಟ್ರೋಲ್ ಟವರ್, ಟರ್ಮಿನಲ್ ಕಟ್ಟಡ ನಿರ್ಮಿಸುವಲ್ಲಿ ತೊಡಕಾಗಿದೆ.

ಇದೀಗ ಕೇಂದ್ರ ಸರಕಾರ ತಾನೇ ಅಗತ್ಯ ಪರಿಕರಗಳನ್ನು ಒದಗಿಸಿ ಉಳಿದ 15 ವಿಮಾನ ನಿಲ್ದಾಣಗಳು ಜೂನ್ ಅಂತ್ಯದೊಳಗೆ ಕಾರ್ಯಾಚರಿಸುವಂತೆ ಮಾಡುವ ಇರಾದೆ ಹೊಂದಿದೆ. ಯೋಜನೆಯನ್ನು ಕಳೆದ ವರ್ಷ ಜಾರಿಗೊಳಿಸಿದಾಗ ಸರಕಾರ ತನಗೆ ದೇಶದಲ್ಲಿರುವ ಸುಮಾರು 400 ನಿರುಪಯೋಗಿ ವಿಮಾನ ನಿಲ್ದಾಣ ಸ್ಥಳಗಳನ್ನು ಅಭಿವೃದ್ಧಿ ಪಡಿಸುವ ಉದ್ದೇಶವಿದೆ ಎಂದು ತಿಳಿಸಿತ್ತು.

ವಿಮಾನಯಾನ ಸಚಿವಾಲಯವು ಎರಡು ಹಂತಗಳಲ್ಲಿ ಸುಮಾರು ಒಂದು ಡಜನ್ ವಿಮಾನಯಾನ ಸಂಸ್ಥೆಗಳಿಗೆ ಅನುಮೋದನೆ ನೀಡಿದ್ದು ಇವುಗಳಲ್ಲಿ ಸ್ಟಾರ್ಟ್-ಅಪ್ ಗಳಾದ ಏರ್ ಡೆಕ್ಕನ್ ಹಾಗೂ ಏರ್ ಒಡಿಶಾ ಕೂಡ ಸೇರಿವೆ. ಒಟ್ಟು 56 ವಿಮಾನ ನಿಲ್ದಾಣಗಳ ಮುಖಾಂತರ 450 ಮಾರ್ಗಗಳಲ್ಲಿ ವಿಮಾನಯಾನ ಸೇವೆ ಒದಗಿಸುವ ಗುರಿಯೂ ಇತ್ತು. ಆದರೆ ಈಗ ಮೊದಲ ಹಂತದಲ್ಲಿ 128 ಮಾರ್ಗಗಳ ಪೈಕಿ ಕೇವಲ 56ರಲ್ಲಿ ವಿಮಾನಯಾನ ಆರಂಭಗೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X