Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶತಮಾನ ಕಂಡ 5 ಸರಕಾರಿ ಶಾಲೆಗಳ...

ಶತಮಾನ ಕಂಡ 5 ಸರಕಾರಿ ಶಾಲೆಗಳ ಉನ್ನತೀಕರಣದ ಭರವಸೆ ನೀಡಿದ ಪ್ರಕಾಶ್ ರೈ

ವಾರ್ತಾಭಾರತಿವಾರ್ತಾಭಾರತಿ11 Jun 2018 10:44 PM IST
share
ಶತಮಾನ ಕಂಡ 5 ಸರಕಾರಿ ಶಾಲೆಗಳ ಉನ್ನತೀಕರಣದ ಭರವಸೆ ನೀಡಿದ ಪ್ರಕಾಶ್ ರೈ

ಮಂಡ್ಯ, ಜೂ.11: ಸರಕಾರಿ ಶಾಲೆಗಳನ್ನು ಸಬಲೀಕರಣಗೊಳಿಸುವ ಹೊಣೆಗಾರಿಕೆ ಸರಕಾರಗಳ ಜತೆಗೆ ಪೋಷಕರು ಮತ್ತು ಸಮುದಾಯದ ಮೇಲಿದೆ ಎಂದು ಬಹುಭಾಷ ನಟ ಹಾಗೂ ಜಸ್ಟ್ ಆಸ್ಕ್ ಫೌಂಡೇಷನ್ ಅಧ್ಯಕ್ಷ ಪ್ರಕಾಶ್ ರೈ ಹೇಳಿದ್ದಾರೆ.

ಪಾಂಡವಪುರ ಪಟ್ಟಣದ ಫ್ರೆಂಚ್‍ರಾಕ್ಸ್ ಶತಮಾನದ ಸರಕಾರಿ ಶಾಲೆಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ದಾನಿಗಳು ಹಾಗೂ ಸಮಾನಮನಸ್ಕ ಶಿಕ್ಷಣ ಆಸಕ್ತರು ಮತ್ತು ಪೋಷಕರ ಸಹಕಾರದಿಂದ ಉನ್ನತೀಕರಣಗೊಳ್ಳುತ್ತಿರುವ ಫ್ರೆಂಚ್‍ರಾಕ್ಸ್ ಶಾಲೆಯನ್ನು ಸರಕಾರ ಮಾದರಿಯಾಗಿ ಸ್ವೀಕರಿಸಿ ರಾಜ್ಯದ ಎಲ್ಲಾ ಸರಕಾರಿ ಶಾಲೆಗಳ ಸಬಲೀಕರಣಗೊಳಿಸಬೇಕಿದೆ ಎಂದರು.

ಅವನತಿ ಹಾದಿ ಹಿಡಿಯುತ್ತಿರುವ ಸರಕಾರಿ ಶಾಲೆಗಳ ಉಳಿವಿಗೆ ಶಿಕ್ಷಕರು, ಪೋಷಕರು ಹಾಗೂ ಜನಸಮುದಾಯದ ಸಹಭಾಗಿತ್ವ ಅವಶ್ಯಕತೆ ಇದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಪಣತೊಡಬೇಕಿದೆ. ಇಚ್ಛಾಶಕ್ತಿಯುಳ್ಳ ಶಿಕ್ಷಕರು, ಪೋಷಕರು ಹಾಗೂ ಸಮುದಾಯದ ಸಹಭಾಗಿತ್ವವಿದ್ದರೆ ಸಾಕು. ಅವನತಿಯತ್ತ ಸಾಗಿರುವ ಸರಕಾರಿ ಶಾಲೆಗಳನ್ನು ಉಳಿಸಲು ಸಾಧ್ಯ ಎಂದು ಅವರು ತಿಳಿಸಿದರು.

ಫ್ರೆಂಚ್‍ರಾಕ್ಸ್ ಶತಮಾನ ಸರಕಾರಿ ಶಾಲೆ ಉನ್ನತೀಕರಣಕ್ಕಾಗಿ ದಿವಂಗತ ರೈತನಾಯಕ, ಮಾಜಿ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ, ದಕ್ಷ ಅಧಿಕಾರಿ ಡಾ.ಎಚ್.ಎಲ್.ನಾಗರಾಜು, ಉನ್ನತೀಕರಣ ಸಮಿತಿ ಹಾಗೂ ಎಸ್‍ಡಿಎಂಸಿ ಸದಸ್ಯರು ಶ್ರಮಿಸಿದ್ದರು. ಅದರ ಜತೆಗೆ ಸಮಾಜದ ಹೊಣೆಗಾರಿಕೆಯೂ ಮುಖ್ಯ. ಈ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಳಕ್ಕೆ ಮಕ್ಕಳ ಮನೆ ಪ್ರಾರಂಭಿಸಿರುವುದು ಒಂದು ದೊಡ್ಡ ಪ್ರಯೋಗ. ಈ ರೀತಿ ರಾಜ್ಯದ ಎಲ್ಲ ಸರಕಾರಿ ಶಾಲೆಗಳಲ್ಲೂ ಆಗಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಖಾಸಗಿ ಶಾಲೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಜಾಹಿರಾತು ನೀಡಿ ಪ್ರವೇಶ ನೀಡಲಾಗುತ್ತಿದೆ. ಇಂತಹ ಖಾಸಗಿ ಒಡೆತನದ ಮಾಫಿಯಾ ವಿರುದ್ಧ ಇಡೀ ಜನಸಮುದಾಯವೇ ನಿಲ್ಲಬೇಕು. ಹೆಚ್ಚಿನದಾಗಿ ಪೋಷಕರು ತೊಡಗಿಸಿಕೊಳ್ಳಬೇಕಿದೆ. ಸರಕಾರಿ ಶಾಲೆ ಮತ್ತು ಸರಕಾರಿ ಆಸ್ಪತ್ರೆ ಬಗ್ಗೆ ಜನರು ಇಟ್ಟುಕೊಂಡಿರುವ ಭಯ ದೂರವಿರಿಸಬೇಕು. ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಮುದಾಯಕ್ಕಾಗಿ ಶಿಕ್ಷಣ ಎಂಬುದನ್ನು ಸಾಬೀತುಪಡಿಸಲು ನಾವೆಲ್ಲರೂ ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಅವರು ಸಲಹೆ ನೀಡಿದರು.

ಸರಕಾರಿ ಶಾಲೆಗಳನ್ನು ಉನ್ನತೀಕರಿಸಲು ಸರಕಾರ ಮುಂದಾಗುತ್ತಿಲ್ಲವೆಂದು ವಿಷಾದಿಸಿದ ರೈ, ಸಾಂಘಿಕ ಶ್ರಮ ಮತ್ತು ಸಮಾನಮನಸ್ಕರು ಒಗ್ಗೂಡಿ ಸರಕಾರಿ ಶಾಲೆಗಳ ಉನ್ನತೀಕರಣ ಮಾಡಬೇಕು. ಖಾಸಗಿ ಶಾಲೆಗಳಿಗೆ ಸರಿಸಮಾನವಾದ ಶಿಕ್ಷಣ ನೀಡಬೇಕು. ಜತೆಗೆ ಪಠೇತರ ಚಟುವಟಿಕೆಗಳು ಹಾಗೂ ಕ್ರೀಡೆಗಳ ಬಗ್ಗೆ ಸರಕಾರಿ ಶಾಲೆಯ ಮಕ್ಕಳಿಗೆ ತರಬೇತಿ ನೀಡಬೇಕು ಎಂದು ಕಿವಿಮಾತು ಹೇಳಿದರು.

ಎಸ್‍ಡಿಎಂಸಿ ಅಧ್ಯಕ್ಷ ಎನ್.ಕೃಷ್ಣೇಗೌಡ, ಉನ್ನತೀಕರಣ ಸಮಿತಿಯ ಧನ್ಯಕುಮಾರ್,  ಎಂ.ರಾಜೀವ್, ಎಂ.ಎಚ್.ನಂದೀಶ್, ಮುಖ್ಯ ಶಿಕ್ಷಕ ಡಿ.ಸಿ.ಯೋಗಣ್ಣ, ಹಿರಿಯ ವಿದ್ಯಾರ್ಥಿಗಳಾದ ಮಹದೇಶ್ವರಪುರ ರಾಮಚಂದ್ರಪ್ಪ, ಹರಳಹಳ್ಳಿ ಗೋವಿಂದರಾಜು, ಸುಜುಕಿ ಮಂಜು, ಜನಶಕ್ತಿ ಸಂಘಟನೆಯ ಮಲ್ಲಿಗೆ, ಮುತ್ತುರಾಜ್, ಬಿಎಸ್‍ಪಿ ಜಿಲ್ಲಾ ಉಪಾಧ್ಯಕ್ಷ ಕೆ.ಎನ್.ರವೀಂದ್ರಕುಮಾರ್, ಇತರರು ಹಾಜರಿದ್ದರು.

“ರಾಜ್ಯದ ಸರಕಾರಿ ಶಾಲೆಗಳನ್ನು ಮಾದರಿಗೊಳಿಸುವ ಬಗ್ಗೆ ಸಂಬಂಧಪಟ್ಟ ಎಲ್ಲಾ ಸಚಿವರ ಜತೆ ಮಂಗಳವಾರ (ಜೂ.12)  ಮಾತುಕತೆ ನಡೆಸಲಿದ್ದೇವೆ. ಜಸ್ಟ್ ಆಸ್ಕ್ ಫೌಡೇಶನ್ ಸಂಸ್ಥೆಯ ವತಿಯಿಂದ ಪ್ರೆಂಚ್‍ರಾಕ್ಸ್ ಶಾಲೆ ಸೇರಿದಂತೆ ಮಂಡ್ಯ ಜಿಲ್ಲೆಯ 5 ಶತಮಾನದ ಶಾಲೆಗಳನ್ನು ಅಭಿವೃದ್ಧಿಪಡಿಸಲು ತೀರ್ಮಾನಿಸಿದ್ದೇವೆ. ಹದಿನೈದು ದಿನಗಳಲ್ಲಿ ಶಾಲೆಯ ಆಡಳಿತ ಮಂಡಳಿಯವರೊಂದಿಗೆ ಚರ್ಚಿಸಿ ಶಾಲೆಗೆ ಅಗತ್ಯವಿರುವ ಮೂಲಸೌಕರ್ಯಗಳ ಸಮಸ್ಯೆ ನಿವಾರಣೆಗೆ ಸಾಧ್ಯವಾದಷ್ಟು ಶ್ರಮಿಸುತ್ತೇವೆ”.
-ಪ್ರಕಾಶ್ ರೈ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X