Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯಲ್ಲಿ ಮೂರು ಜೀವಹಾನಿ,...

ಉಡುಪಿ ಜಿಲ್ಲೆಯಲ್ಲಿ ಮೂರು ಜೀವಹಾನಿ, ಮೆಸ್ಕಾಂಗೆ 2.15 ಕೋಟಿ ರೂ.ನಷ್ಟ

ಪ್ರಾಕೃತಿಕ ವಿಕೋಪ ಸಮಗ್ರ ವರದಿ ನೀಡಲು ಎಡಿಸಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ12 Jun 2018 9:01 PM IST
share
ಉಡುಪಿ ಜಿಲ್ಲೆಯಲ್ಲಿ ಮೂರು ಜೀವಹಾನಿ, ಮೆಸ್ಕಾಂಗೆ 2.15 ಕೋಟಿ ರೂ.ನಷ್ಟ

ಉಡುಪಿ, ಜೂ.12: ಜಿಲ್ಲೆಯಲ್ಲಿ ಮಳೆ ಗಾಳಿಯಿಂದಾಗಿ ಸಂಭವಿಸಿರುವ ಜೀವ ಹಾನಿ ಮತ್ತು ಸೊತ್ತುಗಳ ಹಾನಿಯ ಸಮಗ್ರ ವರದಿಯನ್ನು ಶೀಘ್ರವೇ ನೀಡುವಂತೆ ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರಿಗೆ ಅಪರ ಜಿಲ್ಲಾಧಿಕಾರಿ ಅನುರಾಧ ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ಸಂಭವಿಸಿರುವ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಗುರುವಾರ ಮುಖ್ಯಮಂತ್ರಿಗಳು ಸಭೆ ಕರೆದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಈವರೆಗಿನ ಪ್ರಾಕೃತಿಕ ವಿಕೋಪದಿಂದಾದ ಹಾನಿಯ ಕುರಿತಂತೆ ಸಭೆಯು ಇಂದು ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಗಳ ಅಧ್ಯಕ್ಷತೆಯಲ್ಲಿ ನಡೆಯಿತು.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 3 ಮಾನವ ಜೀವಹಾನಿ ಸಂಭವಿಸಿದ್ದು, 14 ಲಕ್ಷ ರೂ.ಗಳ ಪರಿಹಾರವನ್ನು ಪಾವತಿಸಲಾಗಿದೆ. ಒಟ್ಟು 6 ಜಾನುವಾರುಗಳು ಮೃತಪಟ್ಟಿದ್ದು 1.08 ಲಕ್ಷ ರೂ.ಗಳ ಪರಿಹಾರವನ್ನು ವಿತರಿಸಲಾಗಿದೆ. 492 ವಾಸದ ಮನೆಗಳಿಗೆ ಹಾನಿಯಾಗಿದ್ದು, ಪರಿಹಾರವಾಗಿ 21.97 ಲಕ್ಷ ರೂ. ನೀಡಲಾಗಿದೆ. ತೋಟಗಾರಿಕೆ ಬೆಳೆ ಹಾನಿಯಲ್ಲಿ 1.50 ಲಕ್ಷ ರೂ.ಗಳನ್ನು 46 ಪ್ರಕರಣಗಳಲ್ಲಿ ವಿತರಿಸಿದ್ದು, ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಈವರೆಗೆ ಒಟ್ಟು 547 ಪ್ರಕರಣಗಳಲ್ಲಿ 38.55 ಲಕ್ಷ ರೂ.ಗಳನ್ನು ಪರಿಹಾರ ರೂಪದಲ್ಲಿ ಪಾವತಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ವಿವರಿಸಿದರು.

ಇದಲ್ಲದೆ ನಗರಸಭೆ, ಪುರಸಭೆ, ಜಿಲ್ಲಾ ಪಂಚಾಯತ್, ಲೋಕೋಪಯೋಗಿ ಇಲಾಖೆಯಿಂದ ಹಾನಿಯ ವರದಿ ನೀಡಲು ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರಲ್ಲದೆ, ಎಲ್ಲ ತಹಶೀಲ್ದಾರ್ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳು ಆಗಿರುವ ನಷ್ಟದ ಅಂದಾಜು ಮಾಹಿತಿ ಮತ್ತು ಪರಿಹಾರ ಕೋರಿ ತ್ಷಣವೇ ವರದಿ ನೀಡಲು ಸೂಚಿಸಿದರು.

ಇದಲ್ಲದೆ ನಗರಸೆ,ಪುರಸೆ, ಜಿಲ್ಲಾ ಪಂಚಾಯತ್, ಲೋಕೋಪಯೋಗಿ ಇಲಾಖೆಯಿಂದ ಹಾನಿಯ ವರದಿ ನೀಡಲು ಅಪರ ಜಿಲ್ಲಾಧಿಕಾರಿಗಳು ಸೂಚಿಸಿ ದರಲ್ಲದೆ, ಎಲ್ಲ ತಹಶೀಲ್ದಾರ್ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳು ಆಗಿರುವ ನಷ್ಟದ ಅಂದಾಜು ಮಾಹಿತಿ ಮತ್ತು ಪರಿಹಾರ ಕೋರಿ ತಕ್ಷಣವೇ ವರದಿ ನೀಡಲು ಸೂಚಿಸಿದರು. ಮಳೆಯಿಂದಾಗುವ ಹಾನಿ ನಿಭಾಯಿಸಲು ಈಗಾಗಲೇ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಗ್ರಾಪಂವಾರು ಗ್ರಾಮೀಣ ಮಟ್ಟದ ತಂಡ ರಚಿಸಲಾಗಿದೆ. ಜೀವ ಹಾನಿ ತಡೆಗೆ ಅಗತ್ಯ ಸುರಕ್ಷಾ ಕ್ರಮ ಕೈಗೊಳ್ಳುವ ಕುರಿತು ಸುತ್ತೋಲೆಗಳನ್ನು ಹೊರಡಿಸಲಾಗಿದೆ. ಜಿಲ್ಲೆಯ ಅಗ್ನಿಶಾಮಕ ಠಾಣೆಗಳಿಗೆ 7.50 ಲಕ್ಷ ರೂ.ಗಳ ರಕ್ಷಣಾ ಸಲಕರಣೆಗಳನ್ನು ಒದಗಿಸಲಾಗಿದೆ ಎಂದರು.

ಮೆಸ್ಕಾಂಗೆ 2.15 ಕೋಟಿ ರೂ. : ಜಿಲ್ಲೆಯಲ್ಲಿ ಮೆಸ್ಕಾಂನ ಸುಮಾರು 1,896 ವಿದ್ಯುತ್ ಕಂಬಗಳು ಬಿದ್ದಿದ್ದು, 240 ಟ್ರಾನ್ಸ್‌ಫಾರ್ಮರ್‌ಗಳು ಸುಟ್ಟು ಹೋಗಿವೆ. ಒಟ್ಟು 214.06 ಲಕ್ಷ ರೂ.ಗಳ ಅಂದಾಜು ನಷ್ಟ ಸಂಭವಿಸಿದೆ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದರು. ಕಾಪುವಿನಲ್ಲಿ ಚರಂಡಿ ಕಾಮಗಾರಿ ನಡೆಯುತ್ತಿದ್ದು, ನೀರು ನಿಲ್ಲದಂತೆ ಚರಂಡಿಯನ್ನು ತೆರವುಗೊಳಿಸಿದ್ದರಿಂದ 20 ಲಕ್ಷ ರೂ. ನಷ್ಟವಾಗಿದೆ ಎಂದು ಕಾಪು ಪುರಸಬೆ ಮುಖ್ಯಾಧಿಕಾರಿ ರಾಯಪ್ಪ ಸಭೆಗೆ ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಗೆ ಸೇರಿದ 81.83 ಕಿ.ಮೀ ಉದ್ದದ ರಸ್ತೆಗಳು ಮಳೆಯಿಂದ ಹಾಳಾಗಿದ್ದು, ಈವರೆಗೆ 426 ಲಕ್ಷ ರೂ.ಗಳ ನಷ್ಟದ ಅಂದಾಜು ಮಾಡಲಾಗಿದೆ ಎಂದು ಮುಖ್ಯ ಇಂಜಿನಿಯರ್ ವಿವರಿಸಿದರು. ತೋಟಗಾರಿಕಾ ಉಪನಿರ್ದೇಶಕರು ಮಾಹಿತಿ ನೀಡಿ, 96 ಪ್ರಕರಣಗಳಲ್ಲಿ 17.287 ಎಕರೆ ವಿಸ್ತೀರ್ಣದಲ್ಲಿ 22.87 ಲಕ್ಷ ರೂ.ಗಳ ಬೆಳೆ ನಷ್ಟದ ಅಂದಾಜು ಮಾಡಲಾಗಿದೆ ಎಂದರು.

ಒತ್ತಿನೆಣೆಯಲ್ಲಿ ಭೂಕುಸಿತ ಸಂಭವಿಸಿಲ್ಲ ಎಂದು ಸ್ಪಷ್ಟ ಪಡಿಸಿದ ನವಯುಗ್ ಅಧಿಕಾರಿಗಳು, ದೂರುಗಳಿಗೆ ಸಕಾರಾತ್ಮಕವಾಗಿ ಸ್ಪಂಧಿಸಿರುವುದಾಗಿ ಅಪರ ಜಿಲ್ಲಾಧಿಕಾರಿಗಳಿಗೆ ಸ್ಪಷ್ಟನೆ ನೀಡಿದರು. ರಸ್ತೆಯ ಪಕ್ಕದ ಮನೆಗಳಿಗೆ ಮಣ್ಣು ನೀರಿನೊಂದಿಗೆ ಬಂದಿರುವುದನ್ನು ತಕ್ಷಣವೇ ತೆರವುಗೊಳಿಲಾಗಿದೆ ಎಂದು ಅವರು ವಿವರಿಸಿದರು. ನಗರ ಪ್ರದೇಶ ವ್ಯಾಪ್ತಿಯಲ್ಲಿ ಕೃತಕ ನೆರೆ ತಡೆಯಲು ಚರಂಡಿ ಶುಚಿ ಗೊಳಿಸಲು, ಸಾಂಕ್ರಾಮಿಕ ರೋಗ ತಡೆಗೆ ಸಂಬಂಧ ಪಟ್ಟ ಇಲಾಖೆ ಸಜ್ಜಾಗಿರ ಬೇಕೆಂದು ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ, ಸಹಾಯಕ ಆಯುಕ್ತ ಭೂಬಾಲನ್, ನಗರಸಭೆ ಆಯುಕ್ತ ಜನಾರ್ಧನ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X