Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತೀರ್ಥಹಳ್ಳಿಯಲ್ಲಿ ಭಾರೀ ಮಳೆ: ತುಂಗಾ,...

ತೀರ್ಥಹಳ್ಳಿಯಲ್ಲಿ ಭಾರೀ ಮಳೆ: ತುಂಗಾ, ಭದ್ರಾ, ಲಿಂಗನಮಕ್ಕಿ ಡ್ಯಾಂಗಳಿಗೆ ಹೆಚ್ಚಿದ ಒಳಹರಿವು

ವಾರ್ತಾಭಾರತಿವಾರ್ತಾಭಾರತಿ12 Jun 2018 10:41 PM IST
share
ತೀರ್ಥಹಳ್ಳಿಯಲ್ಲಿ ಭಾರೀ ಮಳೆ: ತುಂಗಾ, ಭದ್ರಾ, ಲಿಂಗನಮಕ್ಕಿ ಡ್ಯಾಂಗಳಿಗೆ ಹೆಚ್ಚಿದ ಒಳಹರಿವು

ಶಿವಮೊಗ್ಗ, ಜೂ.12: ಜಿಲ್ಲೆಯ ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಧಾರಾಕಾರ ವರ್ಷಧಾರೆ ಮುಂದುವರಿದಿದೆ. ಜಲಾನಯನ ವ್ಯಾಪ್ತಿಯ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಪ್ರಮುಖ ಜಲಾಶಯಗಳ ತುಂಗಾ, ಭದ್ರಾ ಹಾಗೂ ಲಿಂಗನಮಕ್ಕಿ ಡ್ಯಾಂಗಳ ಒಳಹರಿವಿನಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ. 

ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಯ ಅವಧಿಯಲ್ಲಿ ಜಿಲ್ಲೆಯ ಏಳು ತಾಲೂಕು ಕೇಂದ್ರಗಳಲ್ಲಿ ಬಿದ್ದ ಒಟ್ಟಾರೆ ಸರಾಸರಿ ಮಳೆಯ ಪ್ರಮಾಣ 48.66 ಮಿಲಿ ಮೀಟರ್ (ಮಿ.ಮೀ.) ಆಗಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದಿದ್ದು, 231.80 ಮಿ.ಮೀ. ಮಳೆಯಾಗಿದೆ. 

ಶಿವಮೊಗ್ಗದಲ್ಲಿ 5.60 ಮಿ.ಮೀ., ಭದ್ರಾವತಿ 16 ಮಿ.ಮೀ., ಸಾಗರ 38 ಮಿ.ಮೀ., ಶಿಕಾರಿಪುರ 1.80 ಮಿ.ಮೀ., ಸೊರಬ 12 ಮಿ.ಮೀ. ಹಾಗೂ ಹೊಸನಗರದಲ್ಲಿ 34 ಮಿ.ಮೀ. ಮಳೆಯಾಗಿದೆ. ಉಳಿದಂತೆ ಘಟ್ಟ ಪ್ರದೇಶಗಳಾದ ಹುಲಿಕಲ್ಲು, ಮಾಣಿ, ಯಡೂರು, ಆಗುಂಬೆ, ನಗರ ಭಾಗಗಳಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. 

ಡ್ಯಾಂ ವಿವರ: ಜಲಾನಯನ ಪ್ರದೇಶವಾದ ಶೃಂಗೇರಿ, ತೀರ್ಥಹಳ್ಳಿ ತಾಲೂಕುಗಳ ಸುತ್ತಮುತ್ತ ಭಾರೀ ವರ್ಷಧಾರೆಯಾಗುತ್ತಿರುವ ಕಾರಣದಿಂದ ತುಂಗಾ ನದಿ ಮೈದುಂಬಿ ಹರಿಯಲಾರಂಭಿಸಿದೆ. ಇದರಿಂದ ಗಾಜನೂರಿನ ತುಂಗಾ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳ ಕಂಡುಬಂದಿದೆ. ಈಗಾಗಲೇ ಡ್ಯಾಂ ಗರಿಷ್ಠ ಮಟ್ಟವಾದ 588.24 ಅಡಿ ತಲುಪಿದೆ. 

ಮಂಗಳವಾರದ ಮಾಹಿತಿಯಂತೆ ತುಂಗಾ ಡ್ಯಾಂಗೆ 47,651 ಕ್ಯೂಸೆಕ್ ಒಳಹರಿವಿದ್ದು, ಅಷ್ಟೆ ಪ್ರಮಾಣದ ನೀರನ್ನು ಹೊಸಪೇಟೆಯ ಟಿ.ಬಿ. ಡ್ಯಾಂಗೆ ಹೊರ ಬಿಡಲಾಗುತ್ತಿದೆ. ಇದರಿಂದ ಶಿವಮೊಗ್ಗ ನಗರದಲ್ಲಿ ಹಾದು ಹೋಗಿರುವ ತುಂಗಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. 

ಭದ್ರಾ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಡ್ಯಾಂನಲ್ಲಿ 4 ಅಡಿ ನೀರು ಸಂಗ್ರಹವಾಗಿದೆ. ಡ್ಯಾಂನ ನೀರಿನ ಮಟ್ಟ 122.80 (ಗರಿಷ್ಠ ಮಟ್ಟ : 186) ಅಡಿಯಿದೆ. ಒಳಹರಿವು 22,231 ಕ್ಯೂಸೆಕ್ ಇದೆ. 194 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. 

ಉಳಿದಂತೆ ರಾಜ್ಯದ ಪ್ರಮುಖ ಜಲವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಡ್ಯಾಂನಲ್ಲಿ ಒಂದೇ ದಿನದಲ್ಲಿ 1 ಅಡಿ ನೀರು ಸಂಗ್ರಹವಾಗಿದೆ. ಪ್ರಸ್ತುತ ನೀರಿನ ಮಟ್ಟ 1755.80 (ಗರಿಷ್ಠ ಮಟ್ಟ: 1819) ಅಡಿಯಿದೆ. 18,973 ಕ್ಯೂಸೆಕ್ ಒಳಹರಿವಿದ್ದು, 2069 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X