Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ: ಗಮನ ಸೆಳೆದ ತಾಂತ್ರಿಕ ಯೋಜನಾ...

ಮಂಡ್ಯ: ಗಮನ ಸೆಳೆದ ತಾಂತ್ರಿಕ ಯೋಜನಾ ವಸ್ತುಪ್ರದರ್ಶನ; ಪಿಇಎಸ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ಅನಾವರಣ

ವಾರ್ತಾಭಾರತಿವಾರ್ತಾಭಾರತಿ12 Jun 2018 11:57 PM IST
share
ಮಂಡ್ಯ: ಗಮನ ಸೆಳೆದ ತಾಂತ್ರಿಕ ಯೋಜನಾ ವಸ್ತುಪ್ರದರ್ಶನ; ಪಿಇಎಸ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ಅನಾವರಣ

ಮಂಡ್ಯ, ಜೂ.12: ನಗರದ ಪಿಇಎಸ್ ಇಂಜನಿಯರಿಂಗ್ ಕಾಲೇಜಿನ ವಿದ್ಯುನ್ಮಾನ ಮ್ತು ಸಂವಹನ ಇಂಜನಿಯರಿಂಗ್ ವಿಭಾಗದಲ್ಲಿ ಮಂಗಳವಾರ ಆಯೋಜಿಸಿದ್ದ ತಾಂತ್ರಿಕ ಯೋಜನಾ ಪ್ರದರ್ಶನ ಪ್ರೇಕ್ಷಕರ ಗಮನ ಸೆಳೆಯಿತು.

ಪ್ರದರ್ಶನ ಉದ್ಘಾಟಿಸಿದ ಪ್ರಾಂಶುಪಾಲ ಡಾ.ವಿ.ಶ್ರೀಧರ್ ಮಾತನಾಡಿ, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರತಿ ವರ್ಷಂತೆ ಈ ಬಾರಿಯೂ ತಾಂತ್ರಿಕ ವಸ್ತುಪ್ರದರ್ಶನವನ್ನು ಏರ್ಪಡಿಸಿದ್ದೇವೆ ಎಂದರು. ತಾಂತ್ರಿಕ ಶಿಕ್ಷಣದ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ತಯಾರಿಸುವ ಮಾದರಿಗಳನ್ನು ಈ ವಸ್ತುಪ್ರದರ್ಶನದಲ್ಲಿ ಇಡಲಾಗಿದೆ. ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್ ವಿಭಾಗದ 25 ಮಾದರಿಗಳು, ಮೆಕಾನಿಕಲ್‍ಗೆ ಸಂಬಂಧಿಸಿದಂತೆ 20 ಮಾದರಿಗಳು ಸೇರಿದಂತೆ 45ಕ್ಕೂ ಹೆಚ್ಚು ಮಾದರಿಗಳು ಪ್ರದರ್ಶನದಲ್ಲಿ ಇಡಲಾಗಿದೆ ಎಂದು ಅವರು ಹೇಳಿದರು. 

ಎಲೆಕ್ಟ್ರಿಕಲ್ ಸರ್ಕೀಟ್, ನಾನ್ ಸರ್ಕೀಟ್‍ನಿಂದ ಕೂಡಿದ ಉತ್ತಮ ಮಾದರಿಗಳನ್ನು ವಿದ್ಯಾರ್ಥಿಗಳು ತಯಾರಿಸಿದ್ದಾರೆ. ಪ್ರದರ್ಶನದಲ್ಲಿ ಯಾವುದು ಆವಿಷ್ಕಾರದಿಂದ ಕೂಡಿವೆ ಅಂತಹ ಮಾದರಿಗಳನ್ನು ಮಾತ್ರ ಇಡಲಾಗುತ್ತದೆ. ಪ್ರತಿ ವರ್ಷ ಸುಮಾರು 150ಕ್ಕೂ ಹೆಚ್ಚು ಮಾದರಿಗಳನ್ನು ಪ್ರದರ್ಶನದಲ್ಲಿ ಇಡಲಾಗುತ್ತದೆ. ಪ್ರತಿಯೊಂದು ವಿಭಾಗದಲ್ಲೂ ವಿದ್ಯಾರ್ಥಿಗಳು ಹೊಸ ಹೊಸ ಆವಿಷ್ಕಾರಗಳನ್ನು ನಡೆಸಿ ಪ್ರದರ್ಶನ ಮಾಡುತ್ತಾರೆ ಎಂದು ಅವರು ವಿವರಿಸಿದರು.

ಎಲೆಕ್ಟ್ರಾನಿಕ್ಸ್ ಮತ್ತು ಕಂಪ್ಯೂಟರ್ಸ್ ವಿಭಾಗಕ್ಕೆ ಸಂಬಂಧಿಸಿದಂತೆ ರೋಬೋಟ್‍ನಿಂದ ಕೂಡಿರುವ ಮಾದರಿಗಳು, ಕೃಷಿಗೆ ಸಂಬಂಧಿಸಿದ ಮಾದರಿಗಳು, ಕಸ ವಿಲೇವಾರಿ ಸಂಬಂಧಿ, ಕಸ ವಿಂಗಡಿಸಿ, ಎಷ್ಟು ಕಸ ತುಂಬಿದೆ, ಎಷ್ಟು ಉಳಿದಿದೆ ಎಂಬುದರ ಕುರಿತಂತೆ ಸಮಗ್ರ ಮಾಹಿತಿ ಇರುವ ಮಾದರಿ, ವಿಲೇವಾರಿ ಮಾಡುವುದು ಹೇಗೆ ಎಂಬಿತ್ಯಾದಿ ಮಾದರಿಗಳನ್ನು ವಿದ್ಯಾರ್ಥಿಗಳು ತಯಾರಿಸಿದ್ದಾರೆ ಎಂದರು. 

ಬಯೋ ಇಂಧನ ಉಪಯೋಗಿಸಿ ವಾಹನ ಚಾಲನೆ, ಅದನ್ನು ಕಂಪ್ರೆಸ್ ಮಾಡಿ ಟ್ಯಾಂಕ್‍ನಲ್ಲಿ ಶೇಖರಿಸಿ ಅಡುಗೆ ಮತ್ತು ವಾಹನ ಚಾಲನೆಗೆ ಉಪಯೋಗಿಸುವುದರ ಕುರಿತು, ಸೋಲಾರ್‍ನಿಂದ ಸೈಕಲ್ ಚಾಲನೆ, ವಿದ್ಯುತ್ ಮತ್ತು ಸೋಲಾರ್ ಬಳಸಿ ಸೈಕಲ್ ಚಾಲನೆ ಮಾಡುವುದು ಹೀಗೆ ಹಲವಾರು ಉಪಯೋಗಿ ಮಾದರಿಗಳನ್ನು ವಿದ್ಯಾರ್ಥಿಗಳು ಪ್ರದರ್ಶನದಲ್ಲಿ ಇಟ್ಟಿದ್ದಾರೆ ಎಂದು ಅವರು ತಿಳಿಸಿದರು. 

ತಾಂತ್ರಿಕ ಪದವಿ ಪೂರ್ಣಗೊಳಿಸಿದ ನಂತರ ಸ್ವಂತ ಉದ್ದಿಮೆಗಳನ್ನು ಸ್ಥಾಪಿಸಿ ತಮ್ಮದೇ ಆದ ಮಾದರಿಗಳನ್ನು ತಯಾರಿಸಿ ಸಮಾಜಕ್ಕೆ ಬೇಕಾದ ವಸ್ತುಗಳನ್ನು ತಯಾರಿಸಲು ಅನುಕೂಲ ಕಲ್ಪಿಸುವುದು, ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರದರ್ಶನ ಏರ್ಪಡಿಸಲಾಗುತ್ತಿದೆ ಎಂದು ಅವರು ಹೇಳಿದರು. 
ಉಪ ಪ್ರಾಂಶುಪಾಲ ಡಾ.ಎಚ್.ವಿ.ರವೀಂದ್ರ, ಡೀನ್ ಡಾ.ಬಿ.ಎಸ್. ಶಿವಕುಮಾರ್, ಡಾ. ಎಂ.ಎನ್. ವೀಣಾ, ಸಂತೋಷ್‍ಕುಮಾರ್ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X