Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ನರೇಗಾ ಯೋಜನೆಯಡಿಯಲ್ಲಿ 4...

ಚಿಕ್ಕಮಗಳೂರು: ನರೇಗಾ ಯೋಜನೆಯಡಿಯಲ್ಲಿ 4 ಕೋ. 27 ಲಕ್ಷ ರೂ. ಅವ್ಯವಹಾರ; ಆರೋಪ

'ಜಿಪಂನಲ್ಲಿ ಸಿಇಒ ದರ್ಬಾರು'

ವಾರ್ತಾಭಾರತಿವಾರ್ತಾಭಾರತಿ13 Jun 2018 5:31 PM IST
share
ಚಿಕ್ಕಮಗಳೂರು: ನರೇಗಾ ಯೋಜನೆಯಡಿಯಲ್ಲಿ 4 ಕೋ. 27 ಲಕ್ಷ ರೂ. ಅವ್ಯವಹಾರ; ಆರೋಪ

ಚಿಕ್ಕಮಗಳೂರು, ಜೂ.13: ತೆರವಾಗಿರುವ ಜಿಲ್ಲಾ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಸಲು ಸಿಇಒ ವಿಧಾನಸಭೆ, ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ನೆಪದಲ್ಲಿ ವಿಳಂಬ ಮಾಡುತ್ತಿದ್ದಾರೆ. ನರೇಗಾ ಯೋಜನೆಯಡಿಯಲ್ಲಿ ಯಾರೋ ಮಾಡಿದ ಅವ್ಯವಹಾರ ಸಂಬಂಧ ಜಿಪಂನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಹೊರಗುತ್ತಿಗೆ ನೌಕರರು, ಇಂಜಿನಿಯರ್‍ಗಳಿಗೆ ಕಳೆದ 8 ತಿಂಗಳಿನಿಂದ ವೇತನ ತಡೆ ಹಿಡಿದಿದ್ದಾರೆ. ಕೆಲಸದ ನೆಪದಲ್ಲಿ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ. ಜಿಪಂ ಸಾಮಾನ್ಯ ಸಭೆಯಯಲ್ಲಿ ಕೈಗೊಂಡ ನಿರ್ಣಯಗಳ ಜಾರಿಗೆ ಸಿಇಒ ಮುಂದಾಗದೇ ಸರ್ವಾಧಿಕಾರಿ ಧೋರಣೆ ತಳೆಯುತ್ತಿದ್ದಾರೆಂದು ಜಿಪಂ ಸದಸ್ಯರು ಆರೋಪಿಸಿದ್ದಾರೆ.

ಜಿಲ್ಲೆಯ ವಿವಿಧ ಜಿಪಂ ಕ್ಷೇತ್ರಗಳ ಜಿಪಂ ಸದಸ್ಯರಾದ ಸೋಮಶೇಖರ್, ಮಹೇಶ್ ಒಡೆಯರ್, ಜಸಂತಾ ಅನಿಲ್, ರೇಣುಕಾ ನಟರಾಜ್, ರಾಧಾ ಶಿವಣ್ಣ, ಲೋಲಾಕ್ಷಿ ಬಾಯಿ, ಸುಜಾತಾ ಕೃಷ್ಣಮೂರ್ತಿ ಹಾಗೂ ಅಮಿತಾ ಗುರುವಾರ ನಗರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಜಿಪಂ ಸಿಇಒ ಸತ್ಯಭಾಮ ಅವರು ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ  ಸರ್ವಾಧಿಕಾರದ ಧೋರಣೆ ಅನುಸರಿಸುತ್ತಿದ್ದಾರೆ. ಸಿಇಒ ಅವರ ಈ ರೀತಿಯ ಕಾರ್ಯ ವೈಖರಿ ವಿರುದ್ಧ ಸರಕಾರಕ್ಕೆ ದೂರು ನೀಡಿ ವರ್ಗಾವಣೆಗೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡ ಹಾಗೂ ಜಿಪಂ ಸದಸ್ಯ ಸೋಮಶೇಖರ್, ಚುನಾವಣಾ ನೀತಿ ಸಂಹಿತೆ ಇದ್ದಾಗಲೂ ಜಿಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಸಲು ಅವಕಾಶವಿದೆ. ಆದರೆ ಸಿಇಒ ಸತ್ಯಭಾಮ ಅವರ ಚುನಾವಣಾ ಕೆಲಸದ ಒತ್ತಡ ನೆಪ ಮಾಡಿಕೊಂಡು ಚುನಾವಣೆಯನ್ನು ಮುಂದೂಡಿದ್ದರು. ಜಿಪಂ ಸದಸ್ಯರ ಒತ್ತಾಯದಿಂದಾಗಿ ಜೂ.20 ರಂದು ಚುನಾವಣೆ ನಡೆಸುವುದಾಗಿ ಹೇಳಿದ್ದಾರೆಂದ ಅವರು, ಜಿಪಂ ನರೇಗಾ ಕಾಮಗಾರಿಗಳ ಅನುದಾನ ಬಿಡುಗಡೆ ಸಂಬಂಧ ಸಾಮಾಜಿಕ ಲೆಕ್ಕಪರಿಶೋಧನೆಯಲ್ಲಿ 4 ಕೋಟಿ. 27 ಲಕ್ಷ ರೂ. ಹೆಚ್ಚುವರಿ ಹಣ ಬಿಡುಗಡೆಯಾಗಿರುವುದು ಬೆಳಕಿಗೆ ಬಂದಿದೆ. ಈ ಅಕ್ರಮ ಎಸಗಿದವರ ವಿರುದ್ಧ ಕ್ರಮಕೈಗೊಳ್ಳವ ಬದಲು ಸಿಇಒ ಸತ್ಯಭಾಮ ಅವರು ಜಿಲ್ಲಾ ಪಂಚಾಯತ್‍ನಲ್ಲಿ ಹೊರಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿರುವ 42 ಇಂಜಿನಿಯರ್‍ಗಳಿಗೆ ನೋಟಿಸ್ ನೀಡಿದ್ದು, ಡಿಸೆಂಬರ್ ತಿಂಗಳಿನಿಂದ ಎಲ್ಲ ನೌಕರರ ವೇತನ ತಡೆಹಿಡಿದಿದ್ದಾರೆ. ಯಾರೋ ಮಾಡಿದ ತಪ್ಪಿಗೆ ಎಲ್ಲರಿಗೂ ಶಿಕ್ಷೆ ನೀಡಿರುವುದರಿಂದ ನೌಕರರು ಒತ್ತಡಲ್ಲಿ ಕೆಲಸ ಮಾಡುವಂತಾಗಿದೆ. ನೌಕರರಿಗೆ ಜೀವನ ನಿರ್ವಹಣೆ ಕಷ್ಟವಾಗಿದೆ. ಜಿಪಂ ನೌಕರರರು, ಗ್ರಾಪಂ ಸಿಬ್ಬಂದಿಯ ಸಣ್ಣಪುಟ್ಟ ತಪ್ಪಿಗೂ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಈ ಬಗ್ಗೆ ನೌಕರರು ಜಿಪಂ ಸದಸ್ಯರಿಗೆ ದೂರು ನೀಡಿದ್ದಾರೆ. ಸಿಇಒ ಸತ್ಯಭಾಮ ತಮ್ಮ ಕಾರ್ಯವೈಖರಿಯನ್ನು ಸರಿಪಡಿಕೊಳ್ಳಬೇಕು. ತಪ್ಪಿದಲ್ಲಿ ಅವರ ವರ್ಗಾವಣೆಗೆ ಸರಕಾರಕ್ಕೆ ಮನವಿ ಮಾಡಲಾಗುವುದೆಂದರು

ಕಡೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಜಿಪಂ ಸದಸ್ಯ ಮಹೇಶ್ ಒಡೆಯರ್ ಮಾತನಾಡಿ, ಕಳೆದ ಮಾರ್ಚ್‍ನಲ್ಲಿ ಜಿಪಂ ಸಾಮಾನ್ಯಸಭೆ ನಡೆದಿದ್ದು, ಸಭೆಯಲ್ಲಿ ಜಿಪಂ ಸದಸ್ಯ ಶರತ್‍ ಕೃಷ್ಣಮೂರ್ತಿ ನರೆಗಾ ಜಾಬ್‍ಕಾರ್ಡ್‍ಗಳಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಪ್ರಸ್ತಾಪ ಮಾಡಿದ್ದರು. ಈ ಅವ್ಯವಹಾರವನ್ನು ನರೇಗಾ ಯೋಜನೆಗೆ ಸಂಬಂಧಿಸಿದ ಅಧಿಕಾರಿ ಮಂಜುನಾಥ್ ಎಂಬವರು ದೃಢಪಡಿಸಿದ್ದರು. ಅವ್ಯವಹಾರದಲ್ಲಿ ಸಿಇಒ ಸತ್ಯಭಾಮ ಅವರೇ ಭಾಗಿಯಾಗಿದ್ದಾರೆಂಬ ಆರೋಪವೂ ಕೇಳಿ ಬಂದಿದ್ದರಿಂದ ಸಿಇಒ ಸೇರಿದಂತೆ ಇಬ್ಬರು ಜಪಂ ಸದಸ್ಯರನ್ನೊಳಗೊಂಡ ತನಿಖಾ ಸಮಿತಿ ನೇಮಕಕ್ಕೆ ಒತ್ತಾಯಿಸಲಾಗಿತ್ತು. ಆದರೆ ಸಿಇಒ ಅವರು 4 ತಿಂಗಳಾದರೂ ಈ ಸಮಿತಿಯನ್ನು ರಚಿಸಿಲ್ಲ. ಬದಲಾಗಿ ಜಾಬ್ ಕಾರ್ಡ್ ಅವ್ಯವಹಾರದ ತನಖೆಯನ್ನು ಓಂಬುಡ್ಸ್‍ಮನ್ ಮೂಲಕ ಮಾಡಿಸಲು ಮುಂದಾಗಿದ್ದಾರೆ. ಇದು ಕಾನೂನು ಬದ್ಧವಲ್ಲ ಎಂದ ಅವರು, ಸಿಇಒ ಸತ್ಯಭಾಮ ಅವರು ಸರ್ವಾಧಿಕಾರಿಯಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಯಾವ ಸದಸ್ಯರನ್ನೂ ವಿಶ್ವಾಸಕ್ಕೆ ಪಡೆಯುತ್ತಿಲ್ಲ. ಯಾರ ಮಾತನ್ನೂ ಕೇಳುತ್ತಿಲ್ಲ. ಆದ್ದರಿಂದ ಕೂಡಲೇ ಸರಕಾರ ಇಒಒ ಅವರನ್ನು ವರ್ಗಾವಣೆ ಮಾಡಬೇಕು. ಈ ಸಂಬಂಧ ಜೂ.20ರ ನಂತರ ಸರಕಾರಕ್ಕೆ ಮನವಿ ಮಾಡಲಾಗುವುದು ಎಂದರು.

ಚಿಕ್ಕಮಗಳೂರು ತಾಲೂಕಿನ ಬೀಕನಹಳ್ಳಿ ಗ್ರಾಮದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿಯಲ್ಲಿ ಕೈಗೊಂಡ ಕಾಂಕ್ರೀಟ್ ರಸ್ತೆಯನ್ನು ಗ್ರಾಪಂ ಪಿಡಿಒ ಒಬ್ಬರು ಟ್ರ್ಯಾಕ್ಟರ್ ಮೂಲಕ ಹಾಳು ಗೆಡವಿದ್ದಾರೆ. ಈ ಬಗ್ಗೆ ಸಿಇಒ ಅವರಿಗೆ ದೂರು ನೀಡಿದ್ದು, ಇದುವರೆಗೂ ಯಾವುದೇ ಕ್ರಮವಹಿಸಿಲ್ಲ ಎಂದು ಆರೋಪಿಸಿದ ಸೋಮಶೇಖರ್, ಪಿಡಿಒ ವಿರುದ್ಧ ಪೊಲೀಸರಿಗೆ ದೂರು ನೀಡಲು ಮುಂದಾದಾಗಲೂ ಸಿಇಒ ಅವರು ದೂರು ನೀಡುವುದನ್ನು ತಡೆದಿದ್ದಾರೆ. ಪಿಡಿಒ ಅವರ ವಿರುದ್ದ ಕ್ರಮವಹಿಸಲು ಸಿಇಒ ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯವಹಿಸಿದ್ದಾರೆ.
- ಸೋಮಶೇಖರ್ ಜಿಪಂ ಸದಸ್ಯ

ನರೇಗಾ ಯೋಜನೆಯಡಿ ನಡೆದಿರುವ 4 ಕೋ 27 ಲಕ್ಷ ರೂ. ಅವ್ಯವಹಾರದಡಿ ಸಮಗ್ರ ತನಿಖೆಯಾಗಬೇಕು. ಹಣ ವಸೂಲಿ ನೆಪದಲ್ಲಿ ಹೊರಗುತ್ತಿಗೆಯಡಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಇಂಜಿಯರ್‍ಗಳು ಹಾಗೂ ಸಿಬ್ಬಂದಿಗೆ ವೇತನ ತಡೆಹಿಡಿದರುವುದು ಸರಿಯಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಆದರೆ ಅಮಾಯಕರಿಗೆ ಶಿಕ್ಷೆಯಾಗಬಾರದು. ನರೇಗಾ ಸಮಾಜಿಕ ಲೆಕ್ಕ ಪರಿಶೋಧನೆ ಪ್ರತೀ ವರ್ಷ ನಡೆಯಬೇಕು. ಆದರೆ ಒಮ್ಮೆ ಮಾತ್ರ ಮಾಡಲಾಗಿದೆ. ಜಾಬ್‍ಕಾರ್ಡ್ ಅವ್ಯವಹಾರದಲ್ಲಿ ಸಿಇಒ ಅವರ ಮೇಲೆ ಆರೋಪ ಇರುವುದರಿಂದ ಅವರೇ ನೇಮಿಸಿ ಓಂಬುಡ್ಸ್‍ಮನ್ ಮೂಲಕ ತನಿಖೆ ನಡೆಸುವುದು ಸರಿಯಲ್ಲ.
- ಮಹೇಶ್ ಒಡೆಯರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X