Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಾಥಮಿಕ ಶಿಕ್ಷಣದಲ್ಲಿ ಸ್ಥಳೀಯ ಭಾಷೆ...

ಪ್ರಾಥಮಿಕ ಶಿಕ್ಷಣದಲ್ಲಿ ಸ್ಥಳೀಯ ಭಾಷೆ ನಿರ್ಲಕ್ಷಿಸಿದರೆ ಭಾಷೆಗೆ ಉಳಿಗಾಲವಿಲ್ಲ: ಪ್ರೊ.ಎಸ್.ಜಿ.ಸಿದ್ಧರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ13 Jun 2018 8:08 PM IST
share
ಪ್ರಾಥಮಿಕ ಶಿಕ್ಷಣದಲ್ಲಿ ಸ್ಥಳೀಯ ಭಾಷೆ ನಿರ್ಲಕ್ಷಿಸಿದರೆ ಭಾಷೆಗೆ ಉಳಿಗಾಲವಿಲ್ಲ: ಪ್ರೊ.ಎಸ್.ಜಿ.ಸಿದ್ಧರಾಮಯ್ಯ

ಬೆಂಗಳೂರು, ಜೂ. 13: ಶಿಕ್ಷಣದಲ್ಲಿ ಸ್ಥಳೀಯ ಭಾಷೆಯನ್ನು ಜಾರಿಗೊಳಿಸುವುದು ಭಾಷೆಯ ಉಳಿವಿನ ದೃಷ್ಟಿಯಿಂದ ಕಡ್ಡಾಯ. ಕನ್ನಡ ಭಾಷಾ ಕಲಿಕಾ ಅಧಿನಿಯಮ- 2015ನ್ನು ಪ್ರಸಕ್ತ ಸಾಲಿನಿಂದ ಎಲ್ಲ ಶಾಲೆಗಳು ಕನ್ನಡವನ್ನು ಪ್ರಥಮ-ದ್ವಿತೀಯ ಭಾಷೆಯಾಗಿ ಬೋಧಿಸುವುದು ಕಡ್ಡಾಯ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ಧರಾಮಯ್ಯ ಹೇಳಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ಬೆಂ.ಉತ್ತರ, ದಕ್ಷಿಣ ಹಾಗೂ ಬೆಂ.ಗ್ರಾಮಾಂತರ ಜಿಲ್ಲೆಯ ಖಾಸಗಿ/ಅನುದಾನ/ಅನುದಾನರಹಿತ ಶಾಲೆಗಳ ಕನ್ನಡ ಭಾಷಾ ಕಲಿಕಾ ಅಧಿನಿಯಮ ಅನುಷ್ಠಾನಕ್ಕೆ ಸಂಬಂಧ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.

ಬೆಂಗಳೂರು ದಕ್ಷಿಣ ವಲಯದ ಉಪ ನಿರ್ದೇಶಕರು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಗ್ರಾಮಾಂತರ ಜಿಲ್ಲೆಯಲ್ಲಿ ಖಾಸಗಿ ಶಾಲೆಗಳು ಕಡಿಮೆಯಿದ್ದು, ಬೆಂ. ನಗರ ಉತ್ತರ ವಲಯದಲ್ಲಿ ಆಡಳಿತವು ವಿಫಲವಾಗಿರುವುದಾಗಿ ಕಂಡು ಬಂದಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಕಾಯ್ದೆಯ ಅನುಷ್ಠಾನದಲ್ಲಿ ಖಾಸಗಿ ಶಾಲೆಗಳಲ್ಲಿ ನಕಾರಾತ್ಮಕ ಧೋರಣೆ ಕಂಡುಬಂದಿದೆ. ಅದರಲ್ಲಿ ಅನೇಕ ಶಾಲೆಗಳು ರಾಜ್ಯ ಸರಕಾರದ ಪಠ್ಯಕ್ರಮವನ್ನೇ ಬಳಸದಿರುವುದು ಕಂಡು ಬಂದಿದೆ. ಆದುದರಿಂದ ಕನ್ನಡ ಭಾಷಾ ಕಲಿಕಾ ಕಾಯ್ದೆ ಅನ್ವಯ ರಾಜ್ಯದ ಎಲ್ಲ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಸುವುದು ಕಡ್ಡಾಯ. ಅದನ್ನು ಈ ತಿಂಗಳಿನಿಂದಲೇ ಅನುಷ್ಠಾನಗೊಳಿಸತಕ್ಕದ್ದು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಪ್ರಾಧಿಕಾರ ಸೂಚಿಸಿದೆ. ದಯಾನಂದ ಸಾಗರ್ ಇಂಟರ್ ನ್ಯಾಷನಲ್, ಆಫ್ಲೈನ್, ನಾರಾಯಣ ಟೆಕ್ನೊ, ಎನ್‌ಇಟಿ, ಇನ್ಸಿಫ್ರೀ, ಆಕ್ಸ್ಫರ್ಡ್, ಇಂಡಿಯನ್ ಪಬ್ಲಿಕ್ ಸ್ಕೂಲ್, ರವೀಂದ್ರ ಭಾರತ, ಇನ್ನೋವೆಟಿವ್, ಎನ್‌ಎಸ್‌ಎಂ, ಆರ್‌ಎಂ ಎಸ್, ಈಸ್ಟ್ ವೆಸ್ಟ್ ಅಕಾಡೆಮಿ ಸೇರಿದಂತೆ ಹಲವು ಶಾಲೆಗಳು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕನ್ನಡವನ್ನು ಬೋಧಿಸುತ್ತಿಲ್ಲ. ಹೀಗಾಗಿ ಕಾಯ್ದೆಯನ್ವಯ ಈ ಎಲ್ಲ ಶಾಲೆಗಳಿಗೆ ಕೂಡಲೇ ನೋಟಿಸ್ ಜಾರಿ ಮಾಡಬೇಕು. ದಂಡ ವಿಧಿಸಿ, ಶಾಲೆಯ ಮಾನ್ಯತೆ ರದ್ದುಗೊಳಿಸಲು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರ ಸರಕಾರಕ್ಕೆ ಶಿಫಾರಸು ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಲೋಪವನ್ನು ಪ್ರಾಧಿಕಾರ ಗಂಭೀರವಾಗಿ ಪರಿಗಣಿಸಿದ್ದು, ಶಿಕ್ಷಣದಲ್ಲಿ ಕನ್ನಡವನ್ನು ಉಳಿಸುವ ಸಲುವಾಗಿ ಪ್ರಾಧಿಕಾರ ಸದರಿ ಅಧಿನಿಯಮವನ್ನು ಕಡ್ಡಾಯವಾಗಿ ಜಾರಿಗೊಳಿಸಲು ಎಲ್ಲ ಸಕ್ಷಮ ಪ್ರಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿರುವುದಲ್ಲದೆ ಪ್ರಾಧಿಕಾರದಿಂದ ಒಂದು ಪರಿಶೀಲನಾ ತಂಡವನ್ನು ರೂಪಿಸಿ ಬೆಂಗಳೂರು ವ್ಯಾಪ್ತಿಯಲ್ಲಿ ಬರುವ ಎಲ್ಲ ಖಾಸಗಿ/ಅನುದಾನ/ಅನುದಾನರಹಿತ ಶಾಲೆಗಳಲ್ಲಿ ಪೂರ್ವ ಸೂಚನೆ ನೀಡದೆ ಪರಿಶೀಲನೆ ನಡೆಸುವುದು. ಒಂದು ವೇಳೆ ಅಲ್ಲಿಯೂ ಲೋಪ ಕಂಡುಬಂದಲ್ಲಿ ಸಂಬಂಧಪಟ್ಟ ಶಾಲೆಯ ಮಾನ್ಯತೆ ರದ್ದುಪಡಿಸಲು ಸರಕಾರಕ್ಕೆ ಪ್ರಾಧಿಕಾರವೇ ಶಿಫಾರಸು ಮಾಡುವುದು ಎಂದು ತಿಳಿಸಿದರು.

ಪ್ರಾಧಿಕಾರವು 1 ಮತ್ತು 2ನೆ ತರಗತಿಯಲ್ಲಿ ಓದುತ್ತಿರುವ ಮಕ್ಕಳ ಸಂಖ್ಯೆಯನ್ನು ನೀಡುವಂತೆ ಸೂಚಿಸಲಾಗಿದ್ದು, ಕಾಯ್ದೆ ಅನುಷ್ಠಾನಗೊಳಿಸಲು ಕೂಡಲೇ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಬೆಂಗಳೂರು ಉತ್ತರ ವಲಯದ ವಿವರ ಅಪೂರ್ಣವಾಗಿದ್ದು ಸಂಬಂಧಪಟ್ಟ ಉಪನಿರ್ದೇಶಕರಿಗೆ ಕೂಡಲೇ ಎಲ್ಲ ಶಾಲೆಗಳಿಗೆ ಖುದ್ದು ಭೇಟಿ ನೀಡಿ ಸ್ಪಷ್ಟ ಮಾಹಿತಿ ನೀಡಲು ಎಚ್ಚರಿಕೆ ನೀಡಲಾಗಿದೆ ಎಂದರು.

ಬೆಂ.ಗ್ರಾ.ದಲ್ಲಿ 46 ಆಂಗ್ಲ ಭಾಷೆಯ ಮತ್ತು 14 ಉರ್ದು ಶಾಲೆಗಳಲ್ಲಿದ್ದು, ಕಾಯ್ದೆ ಅನುಷ್ಠಾನಗೊಂಡಿರುವುದಿಲ್ಲ. ದೇವನಹಳ್ಳಿ, ಹೊಸಕೋಟೆ ತಾಲೂಕಿನ ವಿವರಗಳು ಅಪೂರ್ಣವಾಗಿದ್ದು, ದೊಡ್ಡಬಳ್ಳಾಪುರ ತಾಲೂಕಿನ 398 ಶಾಲೆಗಳಲ್ಲಿ ಕಾಯ್ದೆ ಅನುಷ್ಠಾನಗೊಂಡಿದೆ ಎಂದರು. ಕಾಯ್ದೆ ಅನುಷ್ಠಾನಗೊಳಿಸದೇ ಇದ್ದಲ್ಲಿ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರರನ್ನೇ ಹೊಣೆಗಾರರನ್ನಾಗಿ ಮಾಡಲಾಗುವ ಎಚ್ಚರಿಕೆ ನೀಡಲಾಗಿದೆ ಎಂದು ಅವರು, ಐಜಿಸಿಎಸ್ ಮತ್ತು ಐಬಿ ಶಾಲೆಗಳಿಗೂ ರಾಜ್ಯ ಸರಕಾರದ ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯ ಎಂದರು.

‘ಕನ್ನಡ ಭಾಷೆ ಬೋಧಿಸದ ಎಲ್ಲ ಶಾಲೆಗಳಿಗೆ ಕೂಡಲೇ ನೋಟೀಸ್ ಜಾರಿ ಮಾಡಬೇಕು. ದಂಡ ವಿಧಿಸಿ, ಶಾಲೆಯ ಮಾನ್ಯತೆ ರದ್ದುಗೊಳಿಸಲು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರ ಸರಕಾರಕ್ಕೆ ಶಿಫಾರಸು ಮಾಡುವಂತೆ ಸೂಚನೆ ನೀಡಲಾಗಿದೆ’
-ಪ್ರೊ.ಎಸ್.ಜಿ.ಸಿದ್ಧರಾಮಯ್ಯ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X