Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸ್ಪೇನ್ ಕೋಚ್ ಸ್ಥಾನದಿಂದ ಲೊಪೆಟೆಗುಯ್...

ಸ್ಪೇನ್ ಕೋಚ್ ಸ್ಥಾನದಿಂದ ಲೊಪೆಟೆಗುಯ್ ಉಚ್ಚಾಟನೆ

ವಾರ್ತಾಭಾರತಿವಾರ್ತಾಭಾರತಿ13 Jun 2018 11:53 PM IST
share
ಸ್ಪೇನ್ ಕೋಚ್ ಸ್ಥಾನದಿಂದ ಲೊಪೆಟೆಗುಯ್ ಉಚ್ಚಾಟನೆ

ಕ್ರಾಸ್ನೋಡರ್(ರಶ್ಯ), ಜೂ.13: ವಿಶ್ವಕಪ್‌ನಲ್ಲಿ ಪೋರ್ಚುಗಲ್ ವಿರುದ್ಧ ಆರಂಭಿಕ ಪಂದ್ಯ ಆಡಲು ಕೇವಲ ಎರಡು ದಿನಗಳು ಬಾಕಿ ಇರುವಾಗ ಸ್ಪೇನ್ ಫುಟ್ಬಾಲ್ ತಂಡ ತನ್ನ ಪ್ರಧಾನ ಕೋಚ್ ಜುಲೆನ್ ಲೊಪೆಟೆಗುಯ್ ಅವರನ್ನು ಹುದ್ದೆಯಿಂದ ಉಚ್ಚಾಟನೆ ಮಾಡಿದೆ.

 ಸ್ಪೇನ್ ತಂಡ ಶುಕ್ರವಾರ ಸೋಚಿಯಲ್ಲಿ ಯುರೋಪಿಯನ್ ಚಾಂಪಿಯನ್ ಪೋರ್ಚುಗಲ್ ತಂಡವನ್ನು ಎದುರಿಸುವ ಮೂಲಕ ಈ ವರ್ಷದ ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ.

ಕೋಚ್ ಜುಲೆನ್‌ರನ್ನು ಉಚ್ಚಾಟನೆ ಮಾಡಲಾಗಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಟೆಕ್ನಿಕಲ್ ಡೈರೆಕ್ಟರ್ ಫೆರ್ನಾಂಡೊ ಹೈರ್ರೊ ಅವರನ್ನು ನೇಮಕ ಮಾಡಲಾಗಿದೆ ಎಂದು ಸ್ಪೇನ್ ಫುಟ್ಬಾಲ್ ಸಂಸ್ಥೆ ಬುಧವಾರ ಘೋಷಿಸಿದೆ.

ಮಂಗಳವಾರ ನಡೆದ ಅಚ್ಚರಿಯ ಬೆಳವಣಿಗೆಯಲ್ಲಿ ರಿಯಲ್ ಮ್ಯಾಡ್ರಿಡ್ ತಂಡ ಝೈನುದ್ದೀನ್ ಝೈದಾನ್‌ರಿಂದ ತೆರವಾದ ಸ್ಥಾನಕ್ಕೆ ಲೊಪೆಟೆಗುಯ್ ಅವರನ್ನು ಮೂರು ವರ್ಷ ಅವಧಿಗೆ ಕೋಚ್ ಆಗಿ ನೇಮಿಸಿತ್ತು. ರಶ್ಯದಲ್ಲಿ ವಿಶ್ವಕಪ್ ಕೊನೆಗೊಂಡ ಬಳಿಕ ಮ್ಯಾಡ್ರಿಡ್ ತಂಡದ ಕೆಲಸ ಮಾಡಲಿದ್ದಾರೆ ಎಂದು ಹೇಳಿತ್ತು. ಈ ಘೋಷಣೆಯ ಮಾಡಿರುವ ಸನ್ನಿವೇಶದ ಬಗ್ಗೆ ಸ್ಪೇನ್ ಫುಟ್ಬಾಲ್ ಫೆಡರೇಶನ್ ಹಾಗೂ ಸ್ಪೇನ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

ಟೂರ್ನಮೆಂಟ್ ಆರಂಭಕ್ಕೆ ದಿನಗಣನೆ ಆರಂಭವಾಗಿರುವಾಗ ತನಗೆ ಮಾಹಿತಿ ನೀಡದೇ ಮ್ಯಾಡ್ರಿಡ್‌ನ್ನು ಸೇರ್ಪಡೆಯಾಗಲು ಬಯಸಿರುವ ಲೊಪೆಟೆಗುಯ್‌ರನ್ನು ಸ್ಪೇನ್ ತಂಡದ ಕೋಚ್ ಹುದ್ದೆಯಿಂದ ಉಚ್ಚಾಟಿಸುತ್ತಿದ್ದೇವೆ ಎಂದು ಹೇಳಲು ನನಗೆ ಬೇಸರವಾಗುತ್ತಿದೆ ಎಂದು ಸ್ಪೇನ್ ಫುಟ್ಬಾಲ್ ಫೆಡರೇಶನ್ ಮುಖ್ಯಸ್ಥ ಲೂಯಿಸ್ ರುಬಿಯಲೆಸ್ ಹೇಳಿದ್ದಾರೆ.

ಲೊಪೆಟೆಗುಯ್ ಅವರ ಒಪ್ಪಂದದ ಅವಧಿಯನ್ನು ಕಳೆದ ತಿಂಗಳು 2020ಕ್ಕೆ ವಿಸ್ತರಿಸಲಾಗಿತ್ತು. ಲೊಪೆಟೆಗುಯ್ ತಾನು ರಿಯಲ್ ಮ್ಯಾಡ್ರಿಡ್‌ಗೆ ಸೇರ್ಪಡೆಯಾಗುವ ವಿಷಯವನ್ನು ತಡವಾಗಿ ತಿಳಿಸಿದ್ದಕ್ಕೆ ಸ್ಪೇನ್ ಫುಟ್ಬಾಲ್ ಫೆಡರೇಶನ್ ಮುಖಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೊಪೆಟೆಗುಯ್ 2016ರ ಜುಲೈನಲ್ಲಿ ಸ್ಪೇನ್ ತಂಡದ ಕೋಚ್ ಆಗಿ ನೇಮಕಗೊಂಡಿದ್ದರು. ಲೊಪೆಟೆಗುಯ್ ಕೋಚಿಂಗ್‌ನಲ್ಲಿ ಸ್ಪೇನ್ ಸೋಲನ್ನೇ ಕಂಡಿರಲಿಲ್ಲ. ವಿಶ್ವಕಪ್‌ಗೆ ಮೊದಲು ಆಡಿರುವ ಎಲ್ಲ 20 ಪಂದ್ಯಗಳಲ್ಲಿ ಸ್ಪೇನ್ 14ರಲ್ಲಿ ಜಯ ದಾಖಲಿಸಿದೆ. ಆರು ಪಂದ್ಯಗಳಲ್ಲಿ ಡ್ರಾ ಸಾಧಿಸಿದೆ. ಸ್ಪೇನ್ ತಂಡ ಈ ವರ್ಷದ ವಿಶ್ವಕಪ್ ಟ್ರೋಫಿ ಎತ್ತಿಹಿಡಿಯುವ ಫೇವರಿಟ್ ತಂಡಗಳ ಪೈಕಿ ಒಂದಾಗಿದೆ. ಆದರೆ, ಟೂರ್ನಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿರುವಾಗ ಕೋಚ್‌ರನ್ನು ಉಚ್ಚಾಟಿಸಿರುವುದು ಆಟಗಾರರ ಮೇಲೆ ವ್ಯತಿರಿಕ್ತ ಪರಿಣಾಮಬೀರುವ ಸಾಧ್ಯತೆಯಿದೆ. ವಿಶ್ವಕಪ್ ವೇಳೆ ಲೊಪೆಟ್‌ಗುಯ್ ಅವರು ತಂಡದ ಉಸ್ತುವಾರಿ ವಹಿಸಿಕೊಳ್ಳಬೇಕು ಎಂದು ನಾಯಕ ಸರ್ಗಿಯೊ ರಾಮೊಸ್ ಸಹಿತ ಹಿರಿಯ ಆಟಗಾರರು ಒತ್ತಡ ಹೇರುತ್ತಿದ್ದಾರೆ.

ಲೊಪೆಟೆಗುಯ್ ವೃತ್ತಿಜೀವನದಲ್ಲಿ ಮ್ಯಾಡ್ರಿಡ್ ಹಾಗೂ ಬಾರ್ಸಿಲೋನದ ಪರ ಮೀಸಲು ಗೋಲ್‌ಕೀಪರ್ ಆಗಿ ಆಡಿದ್ದರು.

 ಸ್ಪೇನ್ ತಂಡ 2016ರ ಯುರೋ ಕಪ್‌ನಲ್ಲಿ ಅಂತಿಮ-16ರ ಸುತ್ತಿನಲ್ಲಿ ಸೋತ ಬಳಿಕ ಲೊಪೆಟೆಗುಯ್ ಅವರು 8 ವರ್ಷಗಳ ಕಾಲ ಕೋಚ್ ಆಗಿದ್ದ ವಿನ್ಸೆಂಟ್ ಡೆಲ್ ಬಾಸ್ಕ್ಯೊ ಉತ್ತರಾಧಿಕಾರಿಯಾಗಿ ಆಯ್ಕೆಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X