Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗೌರಿ ಹತ್ಯೆ ಹಿಂದಿನ ಶಕ್ತಿ...

ಗೌರಿ ಹತ್ಯೆ ಹಿಂದಿನ ಶಕ್ತಿ ಬಹಿರಂಗಗೊಳ್ಳಲಿ: ಪಾಪ್ಯುಲರ್ ಫ್ರಂಟ್‌

ವಾರ್ತಾಭಾರತಿವಾರ್ತಾಭಾರತಿ14 Jun 2018 8:37 PM IST
share
ಗೌರಿ ಹತ್ಯೆ ಹಿಂದಿನ ಶಕ್ತಿ ಬಹಿರಂಗಗೊಳ್ಳಲಿ: ಪಾಪ್ಯುಲರ್ ಫ್ರಂಟ್‌

ಬೆಂಗಳೂರು, ಜೂ. 14: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು ಪ್ರಕರಣದ ಪ್ರಮುಖ ರೂವಾರಿ ಎನ್ನಲಾದ ಕೇಸರಿ ಸಂಘಟನೆಯೊಂದರ ಸಕ್ರಿಯ ಕಾರ್ಯಕರ್ತ ಪರಶುರಾಮ್ ವಾಗ್ಮೋರೆ ಎಂಬಾತನನ್ನು ಬಂಧಿಸಿದ್ದು, ಸಂಚಿನ ಹಿಂದಿನ ಎಲ್ಲಾ ಷಡ್ಯಂತ್ರಗಳನ್ನು ಕೂಡಲೇ ಬಯಲಿಗೆಳೆಯಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಸಿರ್ ಹಸನ್ ಆಗ್ರಹಿಸಿದ್ದಾರೆ.

ಇದೀಗ ಸಂಘಪರಿವಾರದ ಕಾರ್ಯಕರ್ತರೆನ್ನಲಾದ ಇಬ್ಬರು ಯುವಕರ ಮೇಲೆ ಪೊಲೀಸರು ಜಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಹಿರಿಯ ಸಂಶೋಧಕ ಡಾ.ಎಂ.ಎಂ.ಕಲ್ಬುರ್ಗಿಯವರ ಹತ್ಯೆಯ ಪ್ರಕರಣವನ್ನು ಇದುವರೆಗೆ ಭೇದಿಸಲಾಗದಿರುವುದು ವ್ಯವಸ್ಥೆಯ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಕಲ್ಬುರ್ಗಿಯವರ ಹತ್ಯೆಯ ತನಿಖೆ ಹಳ್ಳ ಹಿಡಿದ ಕಾರಣದಿಂದಲೇ ಕೊಲೆಗಡುಕರಿಗೆ ಗೌರಿಯವರ ಹತ್ಯೆ ನಡೆಯಲು ಪ್ರೇರಣೆಯಾಯಿತೇ ಎಂದು ಅನುಮಾನ ಪಡುವಂತಾಗಿದೆ. ಗೌರಿ ಹತ್ಯೆಯಲ್ಲಿ ಕೇಸರಿ ಸಂಘಟನೆಗಳ ಕೈವಾಡ ಕಾಣಿಸುತ್ತಿದೆ. ಕಲ್ಬುರ್ಗಿಯವರ ಹತ್ಯೆಯಲ್ಲೂ ಸಂಘಪರಿವಾರದ ಸನಾತನ ಸಂಸ್ಥೆಯ ಹೆಸರು ಕೇಳಿಬಂದಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಸಂಘಪರಿವಾರದ ಕಾರ್ಯಕರ್ತರ ಮೇಲಿನ ಗಂಭೀರ ಪ್ರಕರಣಗಳು ಒಂದೊಂದಾಗಿ ಕೈಬಿಟ್ಟು ಹೋಗುತ್ತಿರುವ ಸನ್ನಿವೇಶಕ್ಕೆ ದೇಶವು ಸಾಕ್ಷಿಯಾಗುತ್ತಿದೆ. ಗೌರಿ ಲಂಕೇಶ್ ಮತ್ತು ಕಲ್ಬುರ್ಗಿಯವರ ಹತ್ಯೆ ಪ್ರಕರಣದಲ್ಲಿ ಸಾಮ್ಯತೆಗಳು ಕಂಡು ಬಂದಿವೆ ಎಂದು ಅವರು ತಿಳಿಸಿದರು.

ಇದೀಗ ಬಂಧಿತನಾಗಿರುವ ಪರಶುರಾಂ ಹಿಂದುತ್ವ ಸಂಘಟನೆಯೊಂದರ ಸದಸ್ಯನಾಗಿರುತ್ತಾನೆ. ಈ ಮಧ್ಯೆ ಶ್ರೀರಾಮ ಸೇನೆಯ ರಾಜ್ಯ ಕಾರ್ಯದರ್ಶಿ ನೀಲಕಂಠ ಕಂದಗಲ್ ಪರಶುರಾಂ ವಾಗ್ಮೋರೆಯನ್ನು ಬೆಂಬಲಿಸಿ ಫೇಸ್ ಬುಕ್‌ನಲ್ಲಿ ಪೋಸ್ಟ್ ಹಾಕಿದ್ದು ವಾಗ್ಮೋರೆ ನೀಲಕಂಠ ನಡುವಿನ ನಂಟನ್ನು ಬಹಿರಂಗಗೊಳಿಸಿದೆ. ಮಾತ್ರವಲ್ಲ ಆರೋಪಿಗಳು ಕೆ.ಎಸ್‌.ಭಗವಾನ್ ಹತ್ಯೆಗೂ ಸಂಚು ರೂಪಿಸಿದ್ದು ಎನ್ನುವ ಮಾತುಗಳು ಕೇಳಿಬರುತ್ತಿದೆ. ಅದರೊಂದಿಗೆ ಗಿರೀಶ್ ಕಾರ್ನಾಡ್ , ಬಿ.ಟಿ ಲಲಿತ ನಾಯಕ್, ನಿಡುಮಾಮಿಡಿ ಶ್ರೀ, ವೀರಭದ್ರ ಚನ್ನಮಲ್ಲ ಸ್ವಾಮಿ ಮತ್ತು ದ್ವಾರಕಾನಾಥ್ ಅವರ ಹೆಸರುಗಳೂ ಹಿಟ್ ಲಿಸ್ಟಿನಲ್ಲಿದೆ ಎಂದು ಸಿಟ್ ತನಿಖಾ ತಂಡದ ಮೂಲಗಳು ತಿಳಿಸಿವೆ. ಆರೋಪಿಗಳು ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಭಾರೀ ರಕ್ತಪಾತವನ್ನು ಮಾಡಲು ಸಂಚು ರೂಪಿಸಿದ್ದು ವ್ಯಕ್ತವಾಗುತ್ತಿದೆ. ಆದ್ದರಿಂದ ಸರಕಾರ ಯಾವುದೇ ರೀತಿಯ ಭಾಹ್ಯ ಶಕ್ತಿಗಳ ಒತ್ತಡ ಬೀಳದಂತೆ ಸುಸೂತ್ರವಾಗಿ ಕಾರ್ಯ ನಿರ್ವಹಿಸಲು ತನಿಖಾ ತಂಡಕ್ಕೆ ಅನುವು ಮಾಡಿಕೊಡಬೇಕು ಮತ್ತು ಗೌರಿ ಹತ್ಯೆಯ ಹಿಂದಿರುವ ಉಗ್ರವಾದಿ ದೇಶದ್ರೋಹಿ ಸಂಘಟನೆಗಳ ಅಸಲೀ ಮುಖವನ್ನು ಬಹಿರಂಗಗೊಳಿಸಬೇಕೆಂದು ಯಾಸರ್ ಹಸನ್ ಪತ್ರಿಕಾ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X