Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾರಿಕೊಂಡ ಮಾಧ್ಯಮಗಳನ್ನು ಗೌರವಿಸಿದರೆ...

ಮಾರಿಕೊಂಡ ಮಾಧ್ಯಮಗಳನ್ನು ಗೌರವಿಸಿದರೆ ನಾನೇ ನೀಚ: ವಸಂತ ಬಂಗೇರ ಆಕ್ರೋಶ

ಮೋದಿ ದೇಶವನ್ನೇ ಮಾರುತ್ತಾನೆ ಎಂದ ಮಾಜಿ ಶಾಸಕ!

ವಾರ್ತಾಭಾರತಿವಾರ್ತಾಭಾರತಿ14 Jun 2018 9:55 PM IST
share
ಮಾರಿಕೊಂಡ ಮಾಧ್ಯಮಗಳನ್ನು ಗೌರವಿಸಿದರೆ ನಾನೇ ನೀಚ: ವಸಂತ ಬಂಗೇರ ಆಕ್ರೋಶ

ಮಂಗಳೂರು, ಜೂ.14: ಪತ್ರಕರ್ತರ ವಿರುದ್ಧ ಮಾಜಿ ಶಾಸಕ ವಸಂತ ಬಂಗೇರ ಅವರು ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಚಾರ್ಮಾಡಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಚಾರ್ಮಾಡಿಯಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಬಂಗೇರ, “ಪತ್ರಿಕೆಗಳ ಮೇಲೆ ನನಗೆ ಗೌರವವಿತ್ತು. ಆದರೆ ಆ ಗೌರವವನ್ನು ಮಾಧ್ಯಮಗಳು ಮೋದಿಯಿಂದಾಗಿ ಕಳೆದುಕೊಂಡಿವೆ. ನೀವು ನಿಮ್ಮನ್ನು ಮೋದಿಗೆ ಮಾರಾಟ ಮಾಡಿಕೊಂಡಿದ್ದೀರಿ. ಮೊನ್ನೆ ನಡೆದ ಚುನಾವಣೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ 20,400 ಮತಗಳಿಂದ ಗೆದ್ದರು. ಮರುಮತದಾನ ನಡೆಯಿತು. ಒಂದು ಬೂತ್ ನಲ್ಲಿ ವ್ಯತ್ಯಾಸ ಬಂತು. ಲೆಕ್ಕ ಮಾಡಿದಾಗ 20 ಸಾವಿರ ಕಾಂಗ್ರೆಸ್ ಮತಗಳು ಬಿಜೆಪಿಗೆ ಬಿದ್ದದ್ದು ಪತ್ತೆಯಾಯಿತು. ನಿಮ್ಮ ಪತ್ರಿಕೆಯಲ್ಲಿ ಈ ಸುದ್ದಿ ಪ್ರಕಟವಾಗಿದೆಯೇ?” ಎಂದವರು ಪ್ರಶ್ನಿಸಿದರು.

“ನನಗೆ ಪ್ರಚಾರದ ಅಗತ್ಯವಿಲ್ಲ. ನಿಮಗೆ ಸಮಾಜವನ್ನು ತಿದ್ದುವ ಜವಾಬ್ದಾರಿಯಿದೆ. ನನ್ನಂತಹ ಕಳ್ಳರನ್ನು ಅಂದರೆ ರಾಜಕಾರಣಿಗಳನ್ನು ತಿದ್ದುವ ಕೆಲಸ ನಿಮ್ಮದು. ದೇಶವನ್ನು ಮುನ್ನಡೆಸುವವರು ನೀವು. ಆದರೆ ನೀವು ನಿಮ್ಮನ್ನು ಪ್ರಧಾನಿ ಮೋದಿಗೆ ಮಾರಿಕೊಂಡಿದ್ದೀರಿ. ಮೋದಿ ಇನ್ನು ಮುಂದೆ ಇದ್ದರೆ ಈ ದೇಶವನ್ನು ಮಾರುತ್ತಾನೆ. ಪ್ರಜಾಪ್ರಭುತ್ವ ನಾಶವಾಗುತ್ತದೆ” ಎಂದು ಬಂಗೇರ ಹೇಳಿದರು.

ತಾನು ಹೇಳಿದ ಎಲ್ಲವನ್ನೂ ಪ್ರಕಟಿಸಬೇಕು ಎಂದ ಅವರು, “ಒಂದಕ್ಷರವೂ ಬಿಡಬೇಡಿ. ಅವನಿಗೂ ಇದು ತಲುಪಲಿ. ಇಂತಹ ನೀಚಕೃತ್ಯ ಮಾಡುವವನು, ಪ್ರಜಾಪ್ರಭುತ್ವ ಕಗ್ಗೊಲೆ ಮಾಡುವವನು ಬದುಕಬಾರದು. ಅಂತಹ ಪತ್ರಿಕೆಯವರೂ, ಟಿವಿಯವರೂ ಬದುಕಬಾರದು. ನಾನು ಪತ್ರಿಕೆಗೆ, ಮಾಧ್ಯಮಕ್ಕೆ ಗೌರವ ಕೊಡುವಂತಹ ನೀಚನಲ್ಲ. ಗೌರವ ಕೊಟ್ಟರೆ ನಾನೇ ನೀಚನಾಗಿ ಬಿಡುತ್ತೇನೆ. ಸಮಾಜವನ್ನು ತಿದ್ದುವಂತಹವರು ಮಾಧ್ಯಮದವರು. ಆದರೆ ಯಾರಿಗೋ ನಿಮ್ಮನ್ನು ಮಾರಿಕೊಂಡು ಈ ದೇಶವನ್ನು ಅಧೋಗತಿಗೆ ಕೊಂಡೊಯ್ಯುತ್ತಿದ್ದೀರಿ. ಈ ದೇಶ ಮೋದಿಯಿದ್ದರೆ ಸರ್ವನಾಶವಾಗುತ್ತದೆ” ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X