Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಹಿಂಪ ಮತ್ತು ಬಜರಂಗ ದಳ ಉಗ್ರಗಾಮಿ...

ವಿಹಿಂಪ ಮತ್ತು ಬಜರಂಗ ದಳ ಉಗ್ರಗಾಮಿ ಧಾರ್ಮಿಕ ಸಂಘಟನೆಗಳು: ಅಮೆರಿಕದ ಸಿಐಎ

ವಾರ್ತಾಭಾರತಿವಾರ್ತಾಭಾರತಿ14 Jun 2018 10:20 PM IST
share
ವಿಹಿಂಪ ಮತ್ತು ಬಜರಂಗ ದಳ ಉಗ್ರಗಾಮಿ ಧಾರ್ಮಿಕ ಸಂಘಟನೆಗಳು: ಅಮೆರಿಕದ ಸಿಐಎ

ಹೊಸದಿಲ್ಲಿ,ಜೂ.14: ಅಮೆರಿಕದ ಸಿಐಎ ಇತ್ತೀಚಿಗೆ ಪರಿಷ್ಕರಿಸಿರುವ ತನ್ನ ‘ವರ್ಲ್ಡ್ ಫ್ಯಾಕ್ಟ್‌ಬುಕ್’ನಲ್ಲಿ ಸಂಘ ಪರಿವಾರದ ಸಂಘಟನೆಗಳಾದ ವಿಹಿಂಪ ಮತ್ತು ಬಜರಂಗ ದಳಗಳನ್ನು ಉಗ್ರಗಾಮಿ ಧಾರ್ಮಿಕ ಸಂಘಟನೆಗಳು ಎಂದು ವರ್ಗೀಕರಿಸಿದೆ.

ಸಿಐಎದ ಈ ಕ್ರಮ ಇವೆರಡೂ ಸಂಘಟನೆಗಳನ್ನು ರೊಚ್ಚಿಗೆಬ್ಬಿಸಿದ್ದು,ಅವು ಇದರ ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿದೆ. ಇದನ್ನು ಬಜರಂಗ ದಳವು ದೃಢಪಡಿಸಿದೆ.

ಕೆಲವು ದಿನಗಳ ಹಿಂದಷ್ಟೇ ಈ ವಿಷಯವು ನಮ್ಮ ಗಮನಕ್ಕೆ ಬಂದಿದೆ. ನಾವು ತಜ್ಞರೊಂದಿಗೆ ಸಮಾಲೋಚಿಸುತ್ತಿದ್ದೇವೆ ಮತ್ತು ಇದನ್ನು ಕಾನೂನು ಮೂಲಕ ಎದುರಿಸಲು ಬಯಸಿದ್ದೇವೆ ಎಂದು ಬಜರಂಗ ದಳದ ರಾಷ್ಟ್ರೀಯ ಸಂಚಾಲಕ ಮನೋಜ ವರ್ಮಾ ಸುದ್ದಿಗಾರರಿಗೆ ತಿಳಿಸಿದರು.

‘ರಾಜಕೀಯ ಒತ್ತಡ ಗುಂಪುಗಳು ಮತ್ತು ನಾಯಕರು’ ಶೀರ್ಷಿಕೆಯಡಿ ಇವೆರಡೂ ಸಂಘಟನೆಗಳನ್ನು ಉಗ್ರಗಾಮಿ ಧಾರ್ಮಿಕ ಸಂಘಟನೆಗಳು ಎಂದು ಹೆಸರಿಸಲಾಗಿದೆ ಮತ್ತು ಇದೇ ಶೀರ್ಷಿಕೆಯಡಿ ಇವುಗಳ ಸೈದ್ಧಾಂತಿಕ ಪೋಷಕ ಆರೆಸ್ಸೆಸ್‌ನ್ನು ರಾಷ್ಟ್ರೀಯವಾದಿ ಸಂಘಟನೆ ಎಂದು ಹೆಸರಿಸಲಾಗಿದೆ.

ಧಾರ್ಮಿಕ ದುರಭಿಮಾನಕ್ಕೂ ತಮಗೂ ಸಂಬಂಧವಿಲ್ಲ ಮತ್ತು ತಮ್ಮದೇನಿದ್ದರೂ ರಾಷ್ಟ್ರೀಯವಾದಿ ಮತ್ತು ಸಾಂಸ್ಕೃತಿಕ ಸಂಘಟನೆಗಳಾಗಿವೆ ಎಂದು ವಿಹಿಂಪ ಮತ್ತು ಬಜರಂಗ ದಳ ನಾಯಕರು ಹೇಳಿದ್ದಾರೆ.

 ಆಲ್ ಪಾರ್ಟೀಸ್ ಹುರಿಯತ್ ಕಾನ್ಪರೆನ್ಸ್(ಎಪಿಎಚ್‌ಸಿ)ನಂತಹ ಸಂಘಟನೆಗಳೊಂದಿಗೆ ತಮ್ಮನ್ನು ಸೇರಿಸಿರುವುದು ನಾಯಕರ ಕಣ್ಣುಗಳನ್ನು ಕೆಂಪಗಾಗಿಸಿದೆ. ಎಪಿಎಚ್‌ಸಿ ಪ್ರತ್ಯೇಕತಾವಾದಿ ಸಂಘಟನೆಯಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಏನಿದು ‘ವರ್ಲ್ಡ್ ಫ್ಯಾಕ್ಟ್‌ಬುಕ್’?

 ‘ವರ್ಲ್ಡ್ ಫ್ಯಾಕ್ಟ್‌ಬುಕ್’ ಅಮೆರಿಕವು ಮಾನ್ಯತೆ ನೀಡಿರುವ 266 ದೇಶಗಳ ಜನಸಂಖ್ಯೆ,ಭೌಗೋಳಿಕತೆ,ಸಂಪರ್ಕಗಳು,ಸರಕಾರ,ಆರ್ಥಿಕತೆ ಮತ್ತು ಮಿಲಿಟರಿ ಕುರಿತು ಮಾಹಿತಿಗಳನ್ನು ಒಳಗೊಂಡಿರುವ ಸಿಐಎದ ವಾರ್ಷಿಕ ಪ್ರಕಟಣೆಯಾಗಿದೆ ಎಂದು ಅದರ ವೆಬ್‌ಸೈಟ್‌ನಲ್ಲಿ ಹೇಳಲಾಗಿದೆ. ಅಮೆರಿಕದ ಅಧಿಕಾರಿಗಳ ಬಳಕೆಗಾಗಿ ಇದನ್ನು ಸಿದ್ಧಗೊಳಿಸಲಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X