Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೃಂಗೇರಿ: ಭಾರೀ ಮಳೆಗೆ ತುಂಬಿ ಹರಿದ...

ಶೃಂಗೇರಿ: ಭಾರೀ ಮಳೆಗೆ ತುಂಬಿ ಹರಿದ ತುಂಗಾ ನದಿ

ಜನಜೀವನ ಅಸ್ತವ್ಯಸ್ತ; ಅಪಾರ ಆಸ್ತಿಪಾಸ್ತಿ ನಷ್ಟ

ವಾರ್ತಾಭಾರತಿವಾರ್ತಾಭಾರತಿ14 Jun 2018 11:03 PM IST
share
ಶೃಂಗೇರಿ: ಭಾರೀ ಮಳೆಗೆ ತುಂಬಿ ಹರಿದ ತುಂಗಾ ನದಿ

ಶೃಂಗೇರಿ, ಜೂ.14: ತಾಲೂಕಿನಲ್ಲಿ ಬುಧವಾರ ರಾತ್ರಿ ಪ್ರಾರಂಭಗೊಂಡ ಮಳೆಯು ಸತತವಾಗಿ ಗುರುವಾರವು ಮುಂದುವರಿದಿದೆ. ಜನವರಿಯಿಂದ ಇಲ್ಲಿಯ ತನಕ 1210.2ಮಿ.ಮೀ ಮಳೆಯಾಗಿದೆ. ಗುರುವಾರ 116.0ಮಿ.ಮೀ ಮಳೆಯಾದ ಬಗ್ಗೆ ವರದಿಯಾಗಿದೆ. ಎಡೆಬಿಡದ ಮಳೆಯಿಂದ ತಾಲೂಕಿನ ಜನಜೀವನ ಅಸ್ತವ್ಯಸ್ತಗೊಂಡಿದೆ.

ತಾಲೂಕಿನ ಕೆರೆಕಟ್ಟೆ, ನೆಮ್ಮಾರ್, ಕಿಗ್ಗಾ ಮುಂತಾದ ಕಡೆ ಅತಿಯಾದ ಮಳೆ ಸುರಿದಿದೆ. ಪರಿಣಾಮ ರಾಷ್ಟ್ರೀಯ ಹೆದ್ದಾರಿ-169 ರಲ್ಲಿ ಧರೆಗಳು ಮತ್ತು ಮರಗಳು ಕುಸಿದಿದೆ. ಹಾಗಾಗಿ ದಕ್ಷಿಣ ಕನ್ನಡದಿಂದ ಬರುವ ಬಸ್ಸು ಹಾಗೂ ಇತರ ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ತುಂಗಾನದಿಯ ಹರಿವು ತೀವ್ರಗೊಂಡ ಪರಿಣಾಮ ಗಾಂಧಿ ಮೈದಾನದ ಅಂಗಡಿಮುಂಗಟ್ಟುಗಳಲ್ಲಿ ದಾಸ್ತಾನು ಆಗಿರುವ ವಸ್ತುಗಳನ್ನು ತೆರವುಗೊಳಿಸಲಾಗಿದೆ.

ಶ್ರೀಮಠದ ಭೋಜನಶಾಲೆ, ಸಂಧ್ಯಾವಂದನೆಮಂಟಪ, ಕಪ್ಪೆಶಂಕರದೇವಾಲಯ ಸಂಪೂರ್ಣ ಜಲಾವೃತಗೊಂಡಿದೆ. ನರಸಿಂಹವನದ ಗುರುನಿವಾಸಕ್ಕೆ ತೆರಳುವ ಮಾರ್ಗವು ನೀರಿನಿಂದ ಆವೃತ್ತಗೊಂಡು ಭಕ್ತರು ಗುರುನಿವಾಸಕ್ಕೆ ತೆರಳಲು ಅಸಾಧ್ಯವಾಗಿತ್ತು. ಬಂದ ಪ್ರವಾಸಿಗರು ತೆಕ್ಕೂರು ರಸ್ತೆಯ ಮಾರ್ಗವಾಗಿ ಗುರುನಿವಾಸಕ್ಕೆ ತೆರಳಿ ಗುರುಗಳ ಆರ್ಶೀವಚನ ಪಡೆದರು. ಶ್ರೀಮಠದ ಭೋಜನಶಾಲೆಯ ಕೆಳಭಾಗದಲ್ಲೂ ಸುಮಾರು ಮೂರು ಅಡಿಯಷ್ಟು ನೀರು ನಿಂತ ಬಗ್ಗೆ ವರದಿಯಾಗಿದೆ.

ಗಾಂಧಿಮೈದಾನದ ಪರ್ಯಾಯರಸ್ತೆ, ಕುರುಬಕೇರಿರಸ್ತೆ, ಮುಖ್ಯರಸ್ತೆಗೆ ಸಂಪರ್ಕ ಸಾಧಿಸುವ ಹಲವು ರಸ್ತೆಗಳು ಮುಳುಗಡೆಗೊಂಡಿದ್ದು, ಕೆ.ವಿ.ಆರ್.ರಸ್ತೆಯಲ್ಲಿದ್ದ ಅಂಗಡಿಗಳಿಗೆ ನೀರು ನುಗ್ಗಿದೆ. ಅಂಗಡಿಯಲ್ಲಿದ್ದ ಪರಿಕರಗಳನ್ನು ಸ್ಥಳಾಂತರಿಸಲಾಗಿದೆ. 

ತಾಲೂಕಿನ ಕಿಕ್ರೆ, ಕೊರಡಕಲ್, ತೆಕ್ಕೂರು, ಕಾವಡಿ, ನೆಮ್ಮಾರ್ ಮುಂತಾದ ಕಡೆ ರಸ್ತೆಯ ಮೇಲೆ ನೀರು ನಿಂತಿದ್ದು ಸುಮಾರು ಮೂರುಗಂಟೆಗಳ ಕಾಲ ವಾಹನ ಹಾಗೂ ಜನಸಂಚಾರ ಸ್ಥಗಿತಗೊಂಡಿತ್ತು. ಜಿಲ್ಲಾಡಳಿತ, ತಾಲೂಕು ಆಡಳಿತ, ಪೊಲೀಸ್ ಇಲಾಖೆ ಹಾಗೂ ಪ.ಪಂ ಇಲಾಖೆಗಳು ಮುಂಜಾಗ್ರತಾ ಕ್ರಮವನ್ನು ತೆಗೆದುಕೊಂಡಿದ್ದು ಅಗ್ನಿಶಾಮಕದಳದ ಸಿಬ್ಬಂದಿ, ಸರಕಾರಿ ಅಸ್ಪತ್ರೆಯ 108 ಹಾಗೂ ಪ.ಪಂನ ಬೋಟ್ ಅವಘಡ ಸಂಭವಿಸಿದ್ದಲ್ಲಿ ಕಾರ್ಯನಿರ್ವಹಿಸಲು ಸಜ್ಜಾಗಿ ನಿಂತಿವೆ. 2008ರಲ್ಲಿ ಇದೇ ರೀತಿಯ ಮಳೆ ಕಾಣಿಸಿಕೊಂಡಿದ್ದು ಗುರುವಾರ ಬಂದ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಅಡಿಕೆ ಮರಗಳಿಗೆ ಜೂನ್ ತಿಂಗಳಲ್ಲಿ ಔಷಧಿ ಸಿಂಪಡಿಸುವುದು ವಾಡಿಕೆ. ಆದರೆ ಒಂದು ವಾರದಿಂದ ಎಡೆಬಿಡದೆ ಮಳೆ ಬರುತ್ತಿದ್ದ ಕಾರಣ ತೋಟದ ಕೆಲಸಗಳು ಸ್ಥಗಿತಗೊಂಡಿವೆ. ಅತಿಯಾದ ಮಳೆಯಿಂದ ಅಡಿಕೆ ಮತ್ತು ಕಾಳುಮೆಣಸಿನ ಬಳ್ಳಿಗಳಿಗೆ ಕೊಳೆರೋಗ ತಗಲುವ ಭೀತಿ ಎದುರಾಗಿದೆ. ಅಡಿಕೆ ತೋಟದಲ್ಲಿರುವ ಬಸಿ ಕಾಲುವೆ ಸ್ವಚ್ಛಗೊಳಿಸಲು ಮಳೆ ತೊಂದರೆ ನೀಡುತ್ತಿದೆ. ತಗ್ಗುಪ್ರದೇಶದ ಭತ್ತದ ಗದ್ದೆಗಳಲ್ಲಿ ನೀರು ನಿಂತಿದ್ದು ಕೃಷಿಚಟುವಟಿಕೆಗೆ ಅಡಚಣೆ ಉಂಟಾಗಿದೆ.

ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಗ್ರಾಮೀಣ್ರದೇಶಗಳಲ್ಲಿ ಮೂರುದಿನಗಳಿಂದ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X