Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂಸಾಚಾರಕ್ಕೆ ಅಭಿವೃದ್ಧಿ ಕಾರ್ಯವೇ...

ಹಿಂಸಾಚಾರಕ್ಕೆ ಅಭಿವೃದ್ಧಿ ಕಾರ್ಯವೇ ಸೂಕ್ತ ಉತ್ತರ: ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ14 Jun 2018 11:05 PM IST
share
ಹಿಂಸಾಚಾರಕ್ಕೆ ಅಭಿವೃದ್ಧಿ ಕಾರ್ಯವೇ ಸೂಕ್ತ ಉತ್ತರ: ಪ್ರಧಾನಿ ಮೋದಿ

ರಾಯ್‌ಪುರ, ಜೂ.14: ಎಲ್ಲಾ ರೀತಿಯ ಹಿಂಸಾಚಾರಕ್ಕೂ ಅಭಿವೃದ್ಧಿ ಕಾರ್ಯವೇ ಸೂಕ್ತ ಉತ್ತರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಛತ್ತೀಸ್‌ಗಢದಲ್ಲಿ ಹಲವು ಯೋಜನೆಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡುತ್ತಿದ್ದರು.

ಈ ಹಿಂದೆ ಬಸ್ತಾರ್ ಎಂಬ ಹೆಸರು ಕೇಳಿದೊಡನೆ ಬಂದೂಕು, ಬಾಂಬ್ ಹಾಗೂ ಹಿಂಸಾಚಾರದ ನೆನಪಾಗುತ್ತಿತ್ತು. ಆದರೆ ಈಗ ಈ ಪ್ರದೇಶವು ಜಗದಾಳ್‌ಪುರ ವಿಮಾನನಿಲ್ದಾಣದ ಕಾರಣ ಪ್ರಸಿದ್ಧವಾಗಿದೆ. ಯಾವುದೇ ರೀತಿಯ ಹಿಂಸಾಚಾರವಿರಲಿ, ಅದಕ್ಕೆ ಅಭಿವೃದ್ಧಿ ಕಾರ್ಯವೇ ಸೂಕ್ತ ಉತ್ತರವಾಗಿದೆ ಎಂಬ ವಿಶ್ವಾಸ ತನಗಿದೆ ಎಂದು ಪ್ರಧಾನಿ ಹೇಳಿದರು.

ಜಗದಾಳ್‌ಪುರದಿಂದ ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರಕ್ಕೆ ಪ್ರಥಮ ವಿಮಾನಯಾನವನ್ನು ಇದೇ ಸಂದರ್ಭ ಅವರು ಉದ್ಘಾಟಿಸಿದರು. ಈ ಹಿಂದಿನ ಸರಕಾರಗಳು ರಸ್ತೆ ನಿರ್ಮಿಸಲೂ ಹಿಂಜರಿಯುತ್ತಿದ್ದ ಪ್ರದೇಶದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ರಾಜ್ಯ ಸರಕಾರದ ಸಹಯೋಗದಿಂದ ವಿಮಾನ ನಿಲ್ದಾಣವನ್ನು ನಿರ್ಮಿಸಿದೆ. ಬಸ್ತಾರ್ ಪ್ರದೇಶದ ಹಲವು ಯುವಜನರು ಹಿಂಸಾಚಾರ ತ್ಯಜಿಸಿ ಸಮಾಜದ ಮುಖ್ಯವಾಹಿನಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದರು. ರಾಯ್‌ಪುರ ಮತ್ತು ಜಗದಾಳ್‌ಪುರದ ನಡುವಿನ ಪ್ರಯಾಣದ ಅವಧಿ ಈ ಹಿಂದೆ ಸುಮಾರು 7 ಗಂಟೆ ಇದ್ದರೆ ಈಗ 40 ನಿಮಿಷಕ್ಕೆ ಇಳಿದಿದೆ. ನಮ್ಮ ಸರಕಾರದ ಕಾರ್ಯನೀತಿಯ ಕಾರಣ ಈಗ ರೈಲುಗಳ ಎಸಿ ಬೋಗಿಗಳಲ್ಲಿ ಪ್ರಯಾಣಿಸುವವರಿಗಿಂತ ಹೆಚ್ಚು ಮಂದಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾರೆ. ಸಂಪರ್ಕ ವ್ಯವಸ್ಥೆ ಹೆಚ್ಚಿದಂತೆಲ್ಲಾ ಉದ್ದಿಮೆಗಳನ್ನು ಆಕರ್ಷಿಸುತ್ತವೆ ಮತ್ತು ಇದರಿಂದ ಉದ್ಯೋಗಾವಕಾಶ ಹೆಚ್ಚುತ್ತದೆ ಎಂದು ಪ್ರಧಾನಿ ಹೇಳಿದರು.

   ಇದಕ್ಕೂ ಮೊದಲು ಅವರು ವಿಸ್ತರಿತ ಮತ್ತು ಆಧುನೀಕರಣಗೊಂಡ ಭಿಲಾಯ್ ಸ್ಟೀಲ್ ಪ್ಲಾಂಟ್ ಅನ್ನು ಲೋಕಾರ್ಪಣೆಗೊಳಿಸಿದರು. ಶಾಂತಿ, ಸ್ಥಿರತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಅಭಿವೃದ್ಧಿ ಕಾರ್ಯದ ಮೂಲ ಅಗತ್ಯವಾಗಿದ್ದು ಛತ್ತೀಸ್‌ಗಢದ ಆಡಳಿತಾರೂಢ ಬಿಜೆಪಿ ಸರಕಾರ ಇದನ್ನು ಸಾಧ್ಯವಾಗಿಸಿ ರಾಜ್ಯವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಿದೆ. ಛತ್ತೀಸ್‌ಗಢದಿಂದ ಹೊರತೆಗೆಯುವ ಖನಿಜ ಸಂಪನ್ಮೂಲದಿಂದ ದೊರಕುವ ಆದಾಯದ ಸ್ವಲ್ಪ ಅಂಶವನ್ನು ಆದಿವಾಸಿಗಳು ಸೇರಿದಂತೆ ರಾಜ್ಯದ ಜನರ ಕ್ಷೇಮಾಭ್ಯುದಯಕ್ಕೆ ಬಳಸಲಾಗುವುದು ಎಂದು ಮೋದಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X