Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಹಿಳೆಯರು ರಕ್ತದಾನ ಮಾಡುವ ಕುರಿತು...

ಮಹಿಳೆಯರು ರಕ್ತದಾನ ಮಾಡುವ ಕುರಿತು ತಪ್ಪುಕಲ್ಪನೆ ಸಲ್ಲ: ಜಿಲ್ಲಾಧಿಕಾರಿ ಪ್ರಿಯಾಂಕ

ವಾರ್ತಾಭಾರತಿವಾರ್ತಾಭಾರತಿ14 Jun 2018 11:09 PM IST
share
ಮಹಿಳೆಯರು ರಕ್ತದಾನ ಮಾಡುವ ಕುರಿತು ತಪ್ಪುಕಲ್ಪನೆ ಸಲ್ಲ: ಜಿಲ್ಲಾಧಿಕಾರಿ ಪ್ರಿಯಾಂಕ

ಉಡುಪಿ, ಜೂ.14: ಕೇವಲ ಸಂಪತ್ತು ಇದ್ದವರು ಮಾತ್ರ ದಾನ ಮಾಡಲು ಆಗುವುದಲ್ಲ. ಆರೋಗ್ಯವಂತರಾಗಿದ್ದವರು ಕೂಡ ತಮ್ಮ ದೇಹದಲ್ಲಿರುವ ರಕ್ತ ವನ್ನು ದಾನ ಮಾಡಬಹುದಾಗಿದೆ. ಈ ದಾನವು ಎಲ್ಲಕ್ಕಿಂತಲೂ ಶ್ರೇಷ್ಠವಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಉಡುಪಿ, ಕರಾವಳಿ ಸ್ವಯಂ ಪ್ರೇರಿತ ರಕ್ತದಾನಿಗಳ ಸಂಘ ಗಂಗೊಳ್ಳಿ, ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರ ಹಾಗೂ ಮಣಿಪಾಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಗುರುವಾರ ಮಣಿಪಾಲ ಪ್ರಗತಿನಗರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಲಾದ ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

 ಮಹಿಳೆಯರು ರಕ್ತದಾನ ಮಾಡುವ ಕುರಿತು ಹಲವು ತಪ್ಪು ಕಲ್ಪನೆಗಳಿವೆ. ಇಂತಹ ಯಾವುದೇ ತಪ್ಪು ಕಲ್ಪನೆಗೆ ಯಾರು ಕೂಡ ಕಿವಿಗೊಡಬಾರದು. ಆರೋಗ್ಯವಂತ ಮಹಿಳೆ ಸೇರಿದಂತೆ ಎಲ್ಲ ವ್ಯಕ್ತಿಗಳು ರಕ್ತದಾನ ಮಾಡಬಹು ದಾಗಿದೆ. ಈ ಮೂಲಕ ಹಲವು ವ್ಯಕ್ತಿಗಳ ಜೀವ ಉಳಿಸಲು ಾಧ್ಯವಿದೆ ಎಂದು ಅವರು ತಿಳಿಸಿದರು.

ಸರಕಾರಿ ನೌಕರರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಮಾತನಾಡಿ, ಜಿಲ್ಲಾಸ್ಪತ್ರೆಯ ರಕ್ತನಿಧಿಯಿಂದ ಪಡೆದ ರಕ್ತವನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯವರು ಸ್ವೀಕರಿಸುತ್ತಿಲ್ಲ. ಜಿಲ್ಲಾಸ್ಪತ್ರೆಯಲ್ಲಿ ಎಲ್ಲ ರೀತಿಯಲ್ಲೂ ರಕ್ತ ಪರೀಕ್ಷೆ ಮಾಡಿದ್ದರೂ ಕೂಡ ಬೇರೆ ಆಸ್ಪತ್ರೆಯವರು ಯಾಕೆ ಪಡೆದುಕೊಳ್ಳು ತ್ತಿಲ್ಲ ಎಂದು ತಿಳಿಯುತ್ತಿಲ್ಲ. ಆದುದರಿಂದ ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿ, ಯಾವುದೇ ಆಸ್ಪತ್ರೆಯ ರಕ್ತವನ್ನು ಪ್ರತಿಯೊಂದು ಆಸ್ಪತ್ರೆಯಲ್ಲೂ ಸ್ವೀಕರಿ ಸುವಂತೆ ಮಾಡಬೇಕು ಎಂದು ಹೇಳಿದರು.

ಅಧ್ಯಕ್ಷತೆಯನ್ನು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ವಹಿಸಿದ್ದರು. ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಜಗದೀಶ್, ಸಂಸ್ಥೆಯ ಐಎಂಸಿ ಅಧ್ಯಕ್ಷ ವಿಶ್ವನಾಥ ಭಟ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು, ಕರಾವಳಿ ಸ್ವಯಂ ಪ್ರೇರಿತ ರಕ್ಷದಾನಿಗಳ ಸಂಘದ ಅಧ್ಯಕ್ಷ ದಿವಾಕರ ಖಾರ್ವಿ ಉಪಸ್ಥಿತರಿದ್ದರು.

ಜಿಲ್ಲಾ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ವೀಣಾ ಕುಮಾರಿ ರಕ್ತದಾನದ ಮಹತ್ವ ಕುರಿತು ಉಪನ್ಯಾಸ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೋಹಿಣಿ ಸ್ವಾಗತಿಸಿದರು.

ಮಹಿಳೆ ಸಹಿತ ಐವರು ರಕ್ತದಾನಿಗಳಿಗೆ ಸನ್ಮಾನ

ಕಾರ್ಯಕ್ರಮದಲ್ಲಿ ಹಲವು ಬಾರಿ ರಕ್ತದಾನ ಮಾಡಿದ ಐವರು ರಕ್ತದಾನಿ ಗಳನ್ನು ಗುರುತಿಸಿ ಸನ್ಮಾನ ಮಾಡಲಾಯಿತು. ಇದರಲ್ಲಿ 32 ಬಾರಿ ರಕ್ತದಾನ ಮಾಡಿದ ಕುಸುಮಾ ಎಲ್ಲರ ಪ್ರಶಂಸೆಗೆ ಪಾತ್ರರಾದರು. ಉಳಿದಂತೆ ಅಶೋಕ ಶೆಟ್ಟಿ(50 ಬಾರಿ), ರಮೇಶ್ ಸುವರ್ಣ(30 ಬಾರಿ), ಸಂಪತ್ ಕುಮಾರ್(15 ಬಾರಿ), ಸತ್ತಾರ್ ಹಾಗೂ ಸುಲೇಮಾನ್ ಅವರನ್ನು ಸನ್ಮಾನಿಸಲಾಯಿತು.

‘ರಕ್ತದಾನದಿಂದ ಇನ್ನೊಬ್ಬರ ಜೀವ ಉಳಿಸಬಹುದು. ನನಗೆ ಇದರಲ್ಲಿ ಆತ್ಮ ಸಂತೃಪ್ತಿ ಸಿಕ್ಕಿದೆ ಹೊರತು ಯಾವುದೇ ಹೆದರಿಕೆ ಆಗುತ್ತಿಲ್ಲ’ ಎಂದು ಸನ್ಮಾನ ಸ್ವೀಕರಿಸಿದ ಕುಸುಮಾ ಹೇಳಿದರು. ‘50ಕ್ಕೂ ಅಧಿಕ ಬಾರಿ ರಕ್ತದಾನ ಮಾಡಿದ ನನಗೆ ಆರು ತಿಂಗಳ ಹಿಂದೆ ಮಧುಮೇಹ ಕಾಯಿಲೆ ಇರುವುದು ಪತ್ತೆಯಾ ಯಿತು. ಇದರಿಂದ ಈಗ ರಕ್ತದಾನ ಮಾಡಲು ಆಗುತ್ತಿಲ್ಲ. ತುಂಬಾ ಬೇಸರ ಆಗುತ್ತಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಲು ಮುಂದೆ ಬರಬೇಕು’ ಎಂದು ಅಶೋಕ್ ಶೆಟ್ಟಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X