ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಬಸ್ಸು ಪಲ್ಟಿ!
20 ಮಂದಿಗೆ ಗಾಯ

ಚಿಕ್ಕಮಗಳೂರು, ಜೂ.15: ಚಾಲಕನ ನಿಯಂತ್ರಣ ಕೆಎಸ್ಆರ್ಟಿಸಿ ಬಸ್ಸು ಪಲ್ಟಿಯಾಗಿ 20 ಮಂದಿ ಗಾಯಗೊಂಡ ಘಟನೆ ಎನ್.ಆರ್.ಪುರ ತಾಲೂಕಿನ ಗುಡ್ಡೆಹಳ್ಳ ಬಳಿ ಸಂಭವಿಸಿದೆ. ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿಯ ಸ್ಪೀಪರ್ ಬಸ್ ದುರ್ಘಟನೆಗೀಡಾಗಿದ್ದು, ಗಾಯಾಳುಗಳನ್ನು ಎನ್.ಆರ್.ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





