Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮಕ್ಕಳಿಗೆ ಪಾಕೆಟ್ ಮನಿ ಕೊಡುವ ಪರಿಪಾಠ...

ಮಕ್ಕಳಿಗೆ ಪಾಕೆಟ್ ಮನಿ ಕೊಡುವ ಪರಿಪಾಠ ಬೆಳೆಸಿ

ಈದುಲ್ ಫಿತ್ರ್ ಸವಿ ನೆನಪುಗಳು!

ವಾರ್ತಾಭಾರತಿವಾರ್ತಾಭಾರತಿ15 Jun 2018 6:33 PM IST
share
ಮಕ್ಕಳಿಗೆ ಪಾಕೆಟ್ ಮನಿ ಕೊಡುವ ಪರಿಪಾಠ ಬೆಳೆಸಿ

ಪೆರ್ನಾಳ್ ಅಂದರೆ ಮಕ್ಕಳಿಗೆ ಅದರಲ್ಲೂ ಎಳೆಯ ಮಕ್ಕಳಿಗೆ ಹಣದ ಮೇಲೆ ಆಸೆ ಇದ್ದೇ ಇರುತ್ತದೆ. ಹಾಗಾಗಿ ಪೆರ್ನಾಳ್‌ನಂದು ನೆರೆಹೊರೆ, ಕುಟುಂಬಸ್ಥರ ಮನೆಗೆ ಹೋದಾಗ ಅಲ್ಲಿರುವ ಮಕ್ಕಳು ಹಿರಿಯರ ಪಾಕೆಟ್‌ನತ್ತ ಕಣ್ಣಿಡುವುದು ಸಹಜ. ಅವರು ಹಣ ಕೇಳುವ ಮುನ್ನವೇ 50 ಅಥವಾ 100 ರೂಪಾಯಿ ಕೊಡುವುದು ಒಳ್ಳೆಯದು. ಹಾಗೇ ಕೊಟ್ಟರೆ ಆ ಮಕ್ಕಳಿಗೆ ಸಿಗುವ ಸಂತಸಕ್ಕೆ ಪಾರವಿಲ್ಲ. ಈ ಪದ್ಧತಿ ಹೊಸತೇನೂ ಅಲ್ಲ,ನಾವು ಸಣ್ಣದಿರುವಾಗಲೂ ಹೀಗೆ ದೊಡ್ಡವರು ಸಣ್ಣ ಮಕ್ಕಳಿಗೆ ಹಣ ಕೊಡುತ್ತಿದ್ದರು. ಅದು ಮುಂದಿನ ಪೀಳಿಗೆಗೂ ಮುಂದುವರಿಯಬೇಕು.

ಅಂದಹಾಗೆ, ಮಕ್ಕಳಿಗೆ ಹಣ ಕೊಡುವಾಗ ಬಡವರು, ಮಧ್ಯಮ ವರ್ಗದ ಮಕ್ಕಳಿಗೆ ಮಾತ್ರ ಕೊಡಬೇಡಿ. ಶ್ರೀಮಂತರ ಮಕ್ಕಳಿದ್ದರೂ ಅವರಿಗೂ ಕೊಡಿ. ಯಾಕೆಂದರೆ ಮಕ್ಕಳಲ್ಲಿ ಬಡವ-ಶ್ರೀಮಂತ ಎಂಬ ಭೇದ ಭಾವವಿರುವುದಿಲ್ಲ. ಇನ್ನು ಪೆರ್ನಾಳ್ ದಿನದಂದು ಕುಟುಂಬ ಸಂಬಂಧವನ್ನು ಮತ್ತಷ್ಟು ಗಟ್ಟಿ ಮಾಡಿಕೊಳ್ಳಬೇಕು. ಕುಟುಂಬದ, ನೆರೆಕರೆಯ ಎಲ್ಲಾ ಮನೆಗಳಿಗೂ ತಪ್ಪದೆ ಭೇಟಿ ನೀಡಬೇಕು.

ಇನ್ನು ನಿಮ್ಮ ಮೇಲೆ ಯಾರಿಗೆ ಹೆಚ್ಚು ಸಿಟ್ಟು ಇದೆಯೋ ಅವರ ಮನೆ ಹುಡುಕಿಕೊಂಡು ಹೋಗಿ ಹಬ್ಬದಶುಭಾಶಯ ಸಲ್ಲಿಸಬೇಕು. ತಿಂಡಿ-ತಿನಿಸು ಹಂಚಿ ಹಳೆಯ ಕಹಿ ಘಟನೆಯನ್ನು ಮರೆತು ವಿಶೇಷ ಪ್ರಾರ್ಥನೆ ಮಾಡಲು ಹೇಳಿ ಬರಬೇಕು.

ಮನೆಯಲ್ಲಿ ಹಿರಿಯರಿದ್ದರೆ ಅವರನ್ನು ಕಂಡು ಮಾತನಾಡಿಸಬೇಕು, ಅವರಿಗೂ ಹಣ ನೀಡಿ ಖುಷಿಪಡಿಸಬೇಕು, ಅವರು ಬೀಡಾ ತಿನ್ನಲಿ, ಬೀಡಿ ಎಳೆಯಲಿ. ಅದನ್ನೂ ಹೋಗುವಾಗ ಕೊಂಡೊಯ್ಯಬೇಕು. ಮಕ್ಕಳು ಮಾತ್ರವಲ್ಲ, ಮೊಮ್ಮಕ್ಕಳು ಕೂಡಾ ಅಜ್ಜ-ಅಜ್ಜಿಯಂದಿರನ್ನು ಪೆರ್ನಾಳ್‌ನಂದು ಖುಷಿಪಡಿಸುವ ಮನಸ್ಸು ಮಾಡಬೇಕು. ಕೇವಲ ನಾವು ಮಾತ್ರ ಒಳ್ಳೆಯ ಬಟ್ಟೆಬರೆ, ಹೊಟ್ಟೆ ತುಂಬಾ ತಿಂದು ಖುಷಿಪಟ್ಟರೆ ಸಾಲದು. ನಮ್ಮ ಮನೆಯ ಕಿರಿಯರು, ಹಿರಿಯರನ್ನೂ ಖುಷಿಪಡಿಸಬೇಕು.

 ಅಬ್ದುರ್ರವೂಫ್ ಪುತ್ತಿಗೆ

ಸ್ಥಾಪಕಾಧ್ಯಕ್ಷರು, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X