Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಬಕ: ಹಿಂದೂ ಮಹಿಳೆಯ ಶವಸಂಸ್ಕಾರ...

ಕಬಕ: ಹಿಂದೂ ಮಹಿಳೆಯ ಶವಸಂಸ್ಕಾರ ನೆರವೇರಿಸಿದ ಮುಸ್ಲಿಂ ಯುವಕರು

ವಾರ್ತಾಭಾರತಿವಾರ್ತಾಭಾರತಿ16 Jun 2018 7:11 PM IST
share
ಕಬಕ: ಹಿಂದೂ ಮಹಿಳೆಯ ಶವಸಂಸ್ಕಾರ ನೆರವೇರಿಸಿದ ಮುಸ್ಲಿಂ ಯುವಕರು

ಪುತ್ತೂರು, ಜೂ. 16: ಕಬಕದ ವಿದ್ಯಾಪುರ ಜನವಸತಿ ಕಾಲನಿ ನಿವಾಸಿ ಅವಿವಾಹಿತೆ ಭವಾನಿ (52) ಎಂಬವರು ಶನಿವಾರ ಮೃತಪಟ್ಟಿದ್ದು, ಅವರ ಶವಸಂಸ್ಕಾರಕ್ಕೆ ಕುಟುಂಬಸ್ಥರು ಮತ್ತು ಸ್ಥಳೀಯರು ಸಹಕರಿಸದ ಹಿನ್ನೆಲೆಯಲ್ಲಿ ಮುಸ್ಲಿಮ್ ಯುವಕರ ತಂಡವೊಂದು ಎಲ್ಲ ವಿಧಿವಿಧಾನಗಳನ್ನು ಮುಂದೆ ನಿಂತು ನೆರವೇರಿಸಿದ ಘಟನೆ ನಡೆದಿದೆ.

ಅವಿವಾಹಿತರಾಗಿದ್ದ ಭವಾನಿ ಇಂದು ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದು, ಈ ಸಂದರ್ಭ ಮನೆಯಲ್ಲಿದ್ದ ಅವರ ಸಹೋದರ ಕೃಷ್ಣ ಸಂಬಂಧಿಕರಿಗೆ ಹಾಗು ಸ್ಥಳೀಯ ನಿವಾಸಿಗಳಿಗೆ ಮಾಹಿತಿ ನೀಡಿ, ಅಂತ್ಯ ಸಂಸ್ಕಾರಕ್ಕೆ ಸಹಕರಿಸಲು ವಿನಂತಿಸಿದ್ದರು. ಆದರೆ ಸಂಬಂಧಿಗಳು ಮತ್ತು ಸ್ಥಳೀಯ ನಿವಾಸಿಗಳು ಯಾವುದೇ ರೀತಿಯಲ್ಲಿ ಸಹಕರಿಸದ ಹಿನ್ನೆಲೆಯಲ್ಲಿ ಮಧ್ಯಾಹ್ನದ ವರೆಗೂ ಮೃತದೇಹವನ್ನು ಅಂತ್ಯ ಸಂಸ್ಕಾರ ಮಾಡದೆ ಮನೆಯಲ್ಲೆ ಇರಿಸಲಾಗಿತ್ತು. 

ಈ ಬಗ್ಗೆ ಮಾಹಿತಿ ಅರಿತ ವಿದ್ಯಾಪುರ ನಿವಾಸಿಗಳಾದ  ಶೌಕತ್, ಹಂಝ, ನಝೀರ್, ರಿಯಾಝ್, ಫಾರೂಕ್ ರುಧ್ರಭೂಮಿಗೆ ಪಾವತಿಸಬೇಕಾಗಿದ್ದ ಹಣ ಸಂಗ್ರಹಿಸಿ, ನಂತರ ಮೃತದೇಹದ ಸ್ನಾನ ಮಾಡಿಸಲು ಕುಟುಂಬಸ್ಥರು ಮತ್ತು ಸ್ಥಳೀಯ ಹಿಂದೂ ಮಹಿಳೆಯರು ಸಹಕರಿಸದ ಹಿನ್ನೆಲೆಯಲ್ಲಿ ಅಂಗನವಾಡಿ ಟೀಚರ್ ರಾಜೇಶ್ವರಿ, ಮೃತರ ತಂಗಿ ಮತ್ತು ಸ್ಥಳೀಯರಾದ ಸಫಿಯಾ, ಝುಬೈದ ಎಂಬವರು ಮೃತದೇಹದ ಸ್ನಾನ ಮಾಡಿಸಿ ನಂತರ ಯುವಕರ ನೇತೃತ್ವದಲ್ಲಿ ಆಂಬ್ಯುಲೆನ್ಸ್ ಮೂಲಕ ಪುತ್ತೂರು ರುಧ್ರಭೂಮಿಗೆ ಮೃತದೇಹವನ್ನು ಸಾಗಿಸಿ, ಅಲ್ಲಿ 3500 ರೂ. ಪಾವತಿಸಿ ನಂತರ ಶವಸಂಸ್ಕಾರ ಮಾಡಲಾಯಿತು. 

ನಂತರ 'ವಾರ್ತಾಭಾರತಿ'ಯೊಂದಿಗೆ ಮಾತನಾಡಿದ ಫಾರೂಕ್ ಅವರು ಯಾವುದೇ ಜಾತಿ ಧರ್ಮ ನೋಡದೆ ಅಂತ್ಯ ಸಂಸ್ಕಾರ ಮಾಡಿದ್ದೇವೆ. ನಾವು ಮುಸ್ಲಿಮ್ ಯುವಕರು ಹಿಂದೂ ಮಹಿಳೆಯ ಅಂತ್ಯ ಸಂಸ್ಕಾರ ಮಾಡಿದ್ದೇವೆ ಅದು ವೈರಲ್ ಆಗಬೇನ್ನುವುದು ನಮ್ಮ ಉದ್ದೇಶವಲ್ಲ. ಇನ್ನು ಯಾವತ್ತೂ ಇಂತಹ ಪ್ರಕರಣ ನಡೆಯಬಾರದು. ಇಂತಹ ಘಟನೆಗಳು ಉತ್ತರಪ್ರದೇಶ, ರಾಜಸ್ಥಾನದಲ್ಲಿ ನಡೆಯುತ್ತಿರುವುದನ್ನು ಮಾಧ್ಯಮದ ಮೂಲಕ ನೋಡುತ್ತಿದ್ದೇವು ಆದರೆ ಅದು ನಮ್ಮ ಊರಿನಲ್ಲೇ ನಡೆಯಿತು ಎಂಬುದು ದೊಡ್ಡ ದುರಂತ ಎಂದು ಅನಿಸುತ್ತಿದೆ. ಇಂತಹ ಘಟನೆ ಇನ್ನು ಯಾವತ್ತೂ ಮರುಕಳಿಸಬಾರದು ಎಂಬುದೇ ನಮ್ಮ ಉದ್ದೇಶ ಎಂದು ತಿಳಿಸಿದರು. 

ಈ ಮಹಿಳೆಯ ಅಂತ್ಯ ಸಂಸ್ಕಾರವನ್ನು ಯಾರು ಮಾಡಬೇಕಿತ್ತೋ ಅವರು ಮಾಡಿಲ್ಲ ಎಂಬುದು ಬೇಸರ ಉಂಟುಮಾಡಿದೆ. ಇಲ್ಲಿ ಹಿಂದೂ ಸಂಘಟನೆಗಳಿವೆ, ಹಿಂದುತ್ವದ ಸಂಘಟನೆಗಳೂ ಇವೆ, ನಾವು ಹಿಂದೂಗಳನ್ನು ದತ್ತು ತೆಗೆದುಕೊಂಡಿದ್ದೇವೆ ಎಂದು ಹೇಳುವಂತಹ ಸಂಘಟನೆಗಳು ಇಂತಹ ಸಮಯದಲ್ಲಿ ಅಲ್ಲಿಗೆ ಬರಲಿಲ್ಲ. ಬಿಜೆಪಿಯನ್ನು ಪ್ರತಿನಿಧಿಸುವ ಕಬಕ ಪಂಚಾಯತ್ ಅಧ್ಯಕ್ಷರು ಕೂಡ ಮೃತರ ಮನೆಗೆ ಭೇಟಿ ನೀಡಿಲ್ಲ ಎಂಬುವುದು ಬೇಸರ ಉಂಟುಮಾಡಿದೆ ಎಂದು ಫಾರೂಕ್ ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X