Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚಂದ್ರಕಲಾ ನಂದಾವರರ ‘ ಹೆಣ್ಣಿಗೆ...

ಚಂದ್ರಕಲಾ ನಂದಾವರರ ‘ ಹೆಣ್ಣಿಗೆ ವರ್ತಮಾನವಿಲ್ಲವೇ?’ ಕೃತಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ16 Jun 2018 11:32 PM IST
share
ಚಂದ್ರಕಲಾ ನಂದಾವರರ ‘ ಹೆಣ್ಣಿಗೆ ವರ್ತಮಾನವಿಲ್ಲವೇ?’ ಕೃತಿ ಬಿಡುಗಡೆ

ಮಂಗಳೂರು, ಜೂ.16: ಹಿರಿಯ ಲೇಖಕಿ ಚಂದ್ರಕಲಾ ನಂದಾವರ ಅವರ ‘ಹೆಣ್ಣಿಗೆ ವರ್ತಮಾನವಿಲ್ಲವೇ ?’ ಕೃತಿ ಬಿಡುಗಡೆ ಕಾರ್ಯಕ್ರಮವು ಕರಾವಳಿ ಲೇಖಕಿಯರ- ವಾಚಕಿಯರ ಸಂಘದ ಆಶ್ರಯದಲ್ಲಿ ಶನಿವಾರ ಸಂಘದ ಸಭಾಂಗಣದಲ್ಲಿ ಜರುಗಿತು.

ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಹಿರಿಯ ಸಾಹಿತಿ ಬಿ.ಎಂ.ರೋಹಿಣಿ ‘ಚಳುವಳಿ ಮತ್ತು ಹೋರಾಟಗಳಿಂದ ಕೂಡಿದ ಲೇಖಕಿ ಚಂದ್ರಕಲಾ ನಂದಾವರ ಅವರ ಬರಹಗಳಲ್ಲಿ ಹೆಣ್ಣಿನ ಅಸ್ಮಿತೆ ಹಾಗೂ ಬದ್ಧತೆ ಇದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಚಂದ್ರಕಲಾ ಅವರ ಬರಹಗಳಿಗೆ ಅದರದ್ದೇ ಆದ ತೂಕ, ಮಹತ್ವ ಇದೆ. ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತು ಬರೆಯುವ ಸಾಹಿತ್ಯಕ್ಕಿಂತ ಇದು ತುಂಬಾ ಭಿನ್ನವಾಗಿದೆ. ಹೋರಾಟ ಅಂದರೆ ಮಹಿಳೆಯರೆಲ್ಲಾ ಬೀದಿಗಿಳಿದು ಹೋರಾಟ ಮಾಡಬೇಕೆಂದು ಅಲ್ಲ. ಒಳ್ಳೆಯ ಉದ್ದೇಶಕ್ಕಾಗಿ ನಡೆಯುವ ಹೋರಾಟಕ್ಕೆ ಎಲ್ಲರ ಬೆಂಬಲ ಬೇಕು. ಆದರೆ ಸೇಫ್ ರೆನ್‌ನಲ್ಲಿ ಇದ್ದೇವೆಂದು ಭಾವಿಸಿರುವ ಕೆಲವರು ಸಮಾಜದ ಯಾವುದೇ ಆವಶ್ಯಕತೆಗಳಿಗೆ ಸ್ಪಂದಿಸುತ್ತಿಲ್ಲ.

ಗಾಂಧೀಜಿಯವರು ಕೂಡ ಆರಂಭದಲ್ಲಿ ಮಹಿಳೆಯರ ಬಗ್ಗೆ ಹೆಚ್ಚಿನ ವಿಶ್ವಾಸ ಹೊಂದಿರಲಿಲ್ಲ. ಆದರೆ ಅವರು ನಂತರದ ದಿನಗಳಲ್ಲಿ ಸ್ವಾತಂತ್ರ ಹೋರಾಟದಲ್ಲಿ ಮಹಿಳೆಯ ಪಾತ್ರದ ಬಗ್ಗೆ ಹೆಚ್ಚಿನ ವಿಶ್ವಾಸ ಹಾಗೂ ಭರವಸೆ ಇಟ್ಟುಕೊಂಡರು ಎಂದು ಬಿ.ಎಂ.ರೋಹಿಣಿ ಹೇಳಿದರು.

ಹೆಣ್ಣಿಗೆ ಶಿಕ್ಷಣ ನೀಡುವುದು ವ್ಯರ್ಥ ಎನ್ನುವ ಕಾಲ ಬದಲಾಗಿದೆ. ಮಾಸ್ತಿ, ನಿಸಾರ್ ಅಹ್ಮದ್ ಕೂಡ ಮಹಿಳೆಯರ ಸಾಹಿತ್ಯದ ಬಗ್ಗೆ ಹಿಂದೆ ಲಘುವಾಗಿ ಮಾತನಾಡಿದ್ದರು. ಇಂತಹ ಪ್ರತಿಕೂಲ ಪರಿಸ್ಥಿತಿಯೇ ಮಹಿಳೆಯರಲ್ಲಿ ಅಸ್ಮಿತೆಯನ್ನು ಕಂಡುಕೊಳ್ಳುವ ಹಠವನ್ನು ಹುಟ್ಟು ಹಾಕಿತು. ಮಹಿಳೆ ಗರಿಕೆ ಹುಲ್ಲು ಇದ್ದ ಹಾಗೆ. ಅವುಗಳನ್ನು ಬೆಂಕಿಯಲ್ಲಿ ಸುಟ್ಟು ಹಾಕಿದರೂ ಒಂದು ಮಳೆಗೆ ಚಿಗುರಿ ಎದ್ದು ನಿಲ್ಲುವ ಸಾಮರ್ಥ್ಯವನ್ನು ಗರಿಕೆ ಹುಲ್ಲು ಹೊಂದಿದೆ ಎಂದು ಬಿ.ಎಂ. ರೋಹಿಣಿ ಬಣ್ಣಿಸಿದರು.

ಕೃತಿ ಪರಿಚಯಿಸಿದ ಉಪನ್ಯಾಸಕಿ ಡಾ.ಶೈಲಾ, ಸ್ತ್ರೀ ಕೇಂದ್ರೀಕೃತ ಹಿನ್ನೆಲೆ ಹಾಗೂ ಮಹಿಳಾ ಪರ ಕಾಳಜಿ ಹೊಂದಿರುವ ಚಂದ್ರಕಲಾ ನಂದಾವರ ಅವರ ಬರಹಗಳು ಮಹಿಳೆಯರ ಆವಶ್ಯಕತೆಗಳ ಬಗ್ಗೆ ಚಿಂತನೆಗೆ ಹಚ್ಚುತ್ತದೆ ಎಂದರು.

ಕರಾವಳಿ ಲೇಖಕಿಯರ- ವಾಚಕಿಯರ ಸಂಘದ ಅಧ್ಯಕ್ಷೆ ಶಶಿಲೇಖಾ ಬಿ. ಅಧ್ಯಕ್ಷತೆ ವಹಿಸಿದ್ದರು. ರೂಪಕಲಾ ಆಳ್ವ, ವಿಜಯಲಕ್ಷ್ಮೀ ಆಳ್ವ, ವಿಜಯಲಕ್ಷ್ಮೀ ಭಟ್ ಯು. ಉಪಸ್ಥಿತರಿದ್ದರು. ಅರುಣಾ ನಾಗರಾಜ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X