Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಹುದೈದಾ ವಿಮಾನ ನಿಲ್ದಾಣ ವಶಪಡಿಸಿಕೊಂಡ...

ಹುದೈದಾ ವಿಮಾನ ನಿಲ್ದಾಣ ವಶಪಡಿಸಿಕೊಂಡ ಯಮನ್ ಮಿತ್ರಕೂಟ

ವಾರ್ತಾಭಾರತಿವಾರ್ತಾಭಾರತಿ16 Jun 2018 11:53 PM IST
share
ಹುದೈದಾ ವಿಮಾನ ನಿಲ್ದಾಣ ವಶಪಡಿಸಿಕೊಂಡ ಯಮನ್ ಮಿತ್ರಕೂಟ

ಏಡನ್, ಜೂ. 16: ಯಮನ್‌ನ ಪ್ರಮುಖ ಬಂದರು ನಗರ ಹುದೈದಾದಲ್ಲಿರುವ ವಿಮಾನ ನಿಲ್ದಾಣವನ್ನು ಅರಬ್ ಮಿತ್ರಕೂಟ ಬೆಂಬಲಿತ ಯಮನ್ ಪಡೆಗಳು ಪ್ರವೇಶಿಸಿವೆ ಎಂದು ಯಮನ್ ಸೇನೆ ತಿಳಿಸಿದೆ.

ಇರಾನ್ ಬೆಂಬಲಿತ ಹೌದಿ ಬಂಡುಕೋರರ ವಿರುದ್ಧ ಸೌದಿ ಅರೇಬಿಯ ನೇತೃತ್ವದ ಮಿತ್ರಕೂಟ ಬೆಂಬಲಿತ ಯಮನಿ ಪಡೆಗಳು ಗಳಿಸಿದ ಮಹತ್ವದ ಮುನ್ನಡೆ ಇದಾಗಿದೆ.

ಮೂರು ವರ್ಷಗಳ ಹಿಂದೆ ಸಂಘರ್ಷ ಸ್ಫೋಟಿಸಿದಂದಿನಿಂದ ಆಯಕಟ್ಟಿನ ಹುದೈದಾ ನಗರದ ಹಿಡಿತ ಮೊದಲ ಬಾರಿಗೆ ಬಂಡುಕೋರರ ಕೈಯಿಂದ ನಿಧಾನವಾಗಿ ಜಾರುತ್ತಿದೆ.

‘‘ಅರಬ್ ಮಿತ್ರಕೂಟ ಬೆಂಬಲಿತ ಸೇನಾ ಪಡೆಗಳು ಹುದೈದಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಹೌದಿ ಬಂಡುಕೋರರ ಮುಷ್ಟಿಯಿಂದ ಮುಕ್ತಗೊಳಿಸಿವೆ’’ ಎಂದು ಯಮನ್ ಸೇನೆಯ ಮಾಧ್ಯಮ ಕಚೇರಿ ಶನಿವಾರ ಟ್ವಿಟರ್‌ನಲ್ಲಿ ತಿಳಿಸಿದೆ.

ಸರಕಾರಿ ಪಡೆಗಳು ವಿಮಾನ ನಿಲ್ದಾಣದ ಅವರಣವನ್ನು ಸುತ್ತುವರಿದಿವೆ, ಆದರೆ ಅದನ್ನು ವಶಪಡಿಸಿಕೊಂಡಿಲ್ಲ ಎಂದು ಯಮನ್ ಸೇನಾ ಮೂಲವೊಂದು ತಿಳಿಸಿದೆ.

ಸುತ್ತಮುತ್ತಲಿನ ಪ್ರದೇಶದಲ್ಲಿರುವ ನೆಲಬಾಂಬ್‌ಗಳನ್ನು ನಿಷ್ಕ್ರಿಯಗೊಳಿಸುವ ಕೆಲಸವನ್ನು ಯಮನ್ ಸೇನೆಯ ತಾಂತ್ರಿಕ ಪಡೆ ನಿರ್ವಹಿಸುತ್ತಿದೆ.

ಯಮನ್‌ನಲ್ಲಿ ಹಸಿವೆಯಿಂದ ಬಳಲುತ್ತಿರುವ ಲಕ್ಷಾಂತರ ಜನರ ಸಂಕಷ್ಟವನ್ನು ಕೊನೆಗೊಳಿಸುವ ಉದ್ದೇಶದಿಂದ ಆಯಕಟ್ಟಿನ ಬಂದರು ನಗರ ಹುದೈದಾವನ್ನು ವಶಪಡಿಸಿಕೊಳ್ಳುವ ಸೇನಾ ಕಾರ್ಯಾಚಣೆಯನ್ನು ಮಿತ್ರಕೂಟ ಬೆಂಬಲಿತ ಯಮನ್ ಸೇನೆ ನಾಲ್ಕು ದಿನಗಳ ಹಿಂದೆ ಆರಂಭಿಸಿರುವುದನ್ನು ಸ್ಮರಿಸಬಹುದಾಗಿದೆ.

ಕೆಎಸ್‌ರಿಲೀಫ್‌ನಿಂದ ಹುದೈದಾದಲ್ಲಿ ನೆರವು ವಿತರಣೆ

ಯಮನ್‌ನ ಪಶ್ಚಿಮದ ಪ್ರಾಂತ ಹುದೈದಾದ ಅಲ್-ಖೋಖದಲ್ಲಿ ಆಂತರಿಕವಾಗಿ ನಿರ್ವಸಿತರಾಗಿರುವ ಜನರಿಗಾಗಿ ಸ್ಥಾಪಿಸಲಾಗಿರುವ ಶಿಬಿರದಲ್ಲಿರುವ 360 ಯಮನ್ ನಾಗರಿಕರಿಗೆ ಕಿಂಗ್ ಸಲ್ಮಾನ್ ಮಾನವೀಯ ನೆರವು ಮತ್ತು ಪರಿಹಾರ ಕೇಂದ್ರ (ಕೆಎಸ್‌ರಿಲೀಫ್) ಆಹಾರ ಚೀಲಗಳನ್ನು ವಿತರಿಸಿದೆ.

ಈ ಪ್ರಾಂತದಲ್ಲಿ ವಿತರಣೆಗಾಗಿ ಕೆಎಸ್‌ರಿಲೀಫ್ 22,273 ಆಹಾರ ಚೀಲಗಳನ್ನು ನಿಗದಿಪಡಿಸಿದೆ. ಈ ನೆರವು ಯಮನಿಗರಿಗಾಗಿ ಸೌದಿ ಅರೇಬಿಯ ರೂಪಿಸಿರುವ 262 ಮಾನವೀಯ ನೆರವು ಯೋಜನೆಗಳ ಒಂದು ಭಾಗವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X