Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಬದುಕಿನ ಲಯವನ್ನು ಹಿಡಿದಿಡುವ ರಹಮತ್

ಬದುಕಿನ ಲಯವನ್ನು ಹಿಡಿದಿಡುವ ರಹಮತ್

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ18 Jun 2018 12:03 AM IST
share
ಬದುಕಿನ ಲಯವನ್ನು ಹಿಡಿದಿಡುವ ರಹಮತ್

ಕನ್ನಡದ ಅಪರೂಪದ ಚಿಂತಕರು, ಸಂಶೋಧಕರಲ್ಲಿ ಡಾ. ರಹಮತ್ ತರೀಕೆರೆ ಒಬ್ಬರು. ಸೂಫಿ ಚಿಂತನೆ, ಸಂಸ್ಕೃತಿ ಚಿಂತನೆಗಳ ಕ್ಷೇತ್ರಗಳಿಗೆ ಅವರು ನೀಡಿರುವ ಕೊಡುಗೆ ಗಮನಾರ್ಹ. ‘ಸಣ್ಣ ಸಂಗತಿ’ ಅವರ ಇತ್ತೀಚಿನ ಕೃತಿ. ಬೇರೆ ಬೇರೆ ಸಂದರ್ಭಗಳಲ್ಲಿ ಬರೆದ ಬಿಡಿ ಬರಹಗಳನ್ನು ಈ ಕೃತಿಯಲ್ಲಿ ಒಟ್ಟು ಸೇರಿಸಲಾಗಿದೆ. ನೆನಪುಗಳು, ವ್ಯಕ್ತಿ ಚಿತ್ರಗಳು, ಶ್ರದ್ಧಾಂಜಲಿಗಳು, ಪುಸ್ತಕ ವಿಮರ್ಶೆ, ತಿರುಗಾಟದ ಅನುಭವ ಮೊದಲಾದವುಗಳನ್ನು ಲಹರಿ ರೂಪದಲ್ಲಿ ಹರಿಯ ಬಿಟ್ಟಿದ್ದಾರೆ. ಅಕಡಮಿಕ್ ಶಿಸ್ತಿನಾಚೆಗೆ ತಮ್ಮ ತಿಳಿವಿನ ನೋಟವನ್ನು ಹರಿಯಬಿಟ್ಟಿದ್ದಾರೆ. ಇಲ್ಲಿ ಒಟ್ಟು 70 ಚಿಂತನಾ ಬರಹಗಳಿವೆ. ಪುಸ್ತಕ ತೆರೆದುಕೊಳ್ಳುವುದೇ ‘ಸಣ್ಣ ಸಂಗತಿ’ ತಲೆಬರಹದ ಲೇಖನದ ಮೂಲಕ. ಯಾವುದು ಸಣ್ಣದು, ಯಾವುದು ದೊಡ್ಡದು ಎನ್ನುವ ನೆಲೆಯಲ್ಲಿ ಇಲ್ಲಿ ಚರ್ಚೆ ನಡೆಸಿದ್ದಾರೆ. ಗಾತ್ರ ಸೂಚಕವಾದ ಸಣ್ಣ, ದೊಡ್ಡ ಎಂಬ ಈ ಎದುರಾಳಿ ಅಂಶಗಳು ಒಂದು ಹಂತದವರೆಗೆ ವಾಸ್ತವ. ಆದರೆ ಸಣ್ಣದು ದೊಡ್ಡದಾಗುವ, ದೊಡ್ಡದು ಸಣ್ಣದಾಗುವ ಎರಡೂ ಸೇರಿ ಮತ್ತೊಂದಾಗುವ ಚೋದ್ಯದ ಬಗ್ಗೆ ಇಲ್ಲಿ ಕುತೂಹಲಕಾರಿ ವಿವರಣೆಗಳಿವೆ.

 ಪಂಡಿತ್ ರಾಮಭಾವು ಬಿಜಾಪುರೆ ಅವರೊಂದಿಗಿನ ಭೇಟಿಯ ಕ್ಷಣಗಳನ್ನು ಹಿಡಿದಿಡುವ ‘ಉಳಿದು ಹೋದ ಬಯಕೆ’ ಪುರುಷಾಹಮಿಕೆಗೆ ಬಲಿಯಾದ ಹೆಣ್ಣಿನ ಕುರಿತಂತೆ ಮಾತನಾಡುವ ‘ಸಂಗಾತಿಯ ವೌನ’, ಲಾಭಕೋರ ವೌಲ್ಯಗಳಿಗೆ ಬಲಿಯಾಗುವ ಮಕ್ಕಳ ಎಳೆತನವನ್ನು ಕಳವಳದಿಂದ ನೋಡುವ ‘ಗೆಳೆಯನ ಮಕ್ಕಳು’, ಸರಳತೆಯಲ್ಲಿ ಹುಟ್ಟುವ ಘನತೆಯನ್ನು ವಿವರಿಸುವ ‘ಸರಳತೆಯ ಘನತೆ’, ದೈನಂದಿನ ಬದುಕು, ವ್ಯವಹಾರಗಳಲ್ಲಿ ಕನ್ನಡ ಬಳಕೆಯ ಕೊರತೆಯ ಪರಿಣಾಮವನ್ನು ಹೇಳುವ ‘ಮನೆ ಖರೀದಿ ಪತ್ರ’, ಸಂತೆಯ ಸದ್ದು ಗದ್ದಲದ ಇಂಪನ್ನು ಹಿಡಿದಿಡುವ ‘ಸಂತೆಯ ಗೌಜು’, ಯುಗಾದಿಯು ಮೂಡಿಸುವ ಅನುಭವಗಳನ್ನು ಕಟ್ಟಿಕೊಡುವ ‘ಉಗಾದಿ ಚಿತ್ರಗಳು’....ಹೀಗೆ....ಸಹಜವಾಗಿ ಹರಡಿ ನಿಂತ ಕಾಡಿನೊಳಗೆ ಹೊಕ್ಕ ಅನುಭವ ನಮ್ಮದು. ಲೇಖನದಿಂದ ಲೇಖನಕ್ಕೆ ಹೊಸದಾಗುತ್ತಾ, ಭಿನ್ನ ಭಿನ್ನ ಅನುಭವಗಳನ್ನು ಕೊಡುತ್ತಾ ಹೋಗುತ್ತಾರೆ ಲೇಖಕರು. ಸಂಶೋಧಕ, ಅಧ್ಯಾಪಕ ರಹಮತ್ ತರೀಕೆರೆಗಿಂತ ಭಿನ್ನವಾದ ರಹಮತ್ ಅವರನ್ನು ಈ ಲೇಖನಗಳಲ್ಲಿ ಕಾಣಬಹುದು. ಬಹುಶಃ ಅವರ ನಿರಂತರ ಅಲೆದಾಟ, ಪ್ರವಾಸ ಇಲ್ಲಿರುವ ಪ್ರತಿ ಲೇಖನದ ಮೆೀಲೂ ತನ್ನ ಪರಿಣಾಮವನ್ನು ಬೀರಿದೆ.
ನವಕರ್ನಾಟಕ ಪ್ರಕಾಶನ ಈ ಕೃತಿಯನ್ನು ಹೊರತಂದಿದೆ. ಒಟ್ಟು ಪುಟಗಳು 260. ಮುಖಬೆಲೆ 225 ರೂ.

share
-ಕಾರುಣ್ಯಾ
-ಕಾರುಣ್ಯಾ
Next Story
X