ಕಾಂಗ್ರೆಸ್ನಿಂದ ನಗರಸಭಾ ಚುನಾವಣಾ ಪೂರ್ವಭಾವಿ ಸಭೆ

ಉಡುಪಿ, ಜೂ.18: ಕಳೆದ ಐದು ವರ್ಷಗಳ ಕಾಂಗ್ರೆಸ್ ನೇತೃತ್ವದ ಉಡುಪಿ ನಗರ ಸಭೆಯ ಆಡಳಿತ ಯಾವುದೇ ಕಪ್ಪುಚುಕ್ಕಿ ಇಲ್ಲದೆ ಕಾರ್ಯನಿರ್ವಹಿಸ ಲಾಗಿದೆ. ಹಲವಾರು ಕೋಟಿ ರೂ.ಅಭಿವೃದ್ಧಿ ಕಾಮಗಾರಿಯೊಂದಿಗೆ ನಗರಸಭಾ ವ್ಯಾಪ್ತಿಯ ಪ್ರದೇಶಗಳ ಅಭಿವೃದ್ಧಿ ಮಾಡಲಾಗಿದೆ. ಕನಸಿನ ಉಡುಪಿ ನಿರ್ಮಾಣ ಕ್ಕಾಗಿ ಜನಪರ ಕಾಳಜಿಯೊಂದಿಗೆ ಸ್ವಚ್ಚ ಆಡಳಿತ ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮುಂಬರುವ ನಗರಸಭಾ ಚುನಾವಣೆಯಲ್ಲಿ ಜನತೆ ಮತ ನೀಡುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಸೋಮವಾರ ಹಮ್ಮಿಕೊಳ್ಳಲಾದ ಉಡುಪಿ ನಗರಸಭಾ ವ್ಯಾಪ್ತಿಯ ಕಾರ್ಯಕರ್ತರ ಹಾಗೂ 35 ವಾರ್ಡ್ಗಳ ಬೂತ್, ಘಟಕಗಳ ಅಧ್ಯಕ್ಷರ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.
ನಗರಸಭಾ ಚುನಾವಣೆಯಲ್ಲಿ ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿಸಿ ಕೊಂಡ ಅಭ್ಯರ್ಥಿಗಳಿಗೆ ಪ್ರಾಶಸ್ತ್ಯ ನೀಡುವುದರೊಂದಿಗೆ ಕಾರ್ಯಕರ್ತರು ಶ್ರದ್ಧೆ ಮತ್ತು ಛಲದಿಂದ ಕಾರ್ಯನಿರ್ವಹಿಸಿದರೆ ಪಕ್ಷಕ್ಕೆ ಜನತೆ ಬೆಂಬಲ ನೀಡಲಿ ದ್ದಾರೆ ಎಂದು ಅವರು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ವ್ಯವಸ್ಥಿತವಾಗಿ ಬಿತ್ತರಿಸುವ ಬಿಜೆಪಿ ಷಡ್ಯಂತ್ರವನ್ನು ಕಾರ್ಯಕರ್ತರು ಜನತೆಗೆ ಮನವರಿಕೆ ಮಾಡಿಕೊಡ ಬೇಕಾಗಿದೆ. ಸತ್ಯ, ಧರ್ಮದಿಂದ ನಡೆದಾಗ ಮಾತ್ರ ಆ ಗೆಲುವು ಶಾಶ್ವತವಾಗುವುದು. ಜನತೆಗೆ ಸುಳ್ಳು ಸುದ್ದಿ ಹರಡಿಸುವುದೇ ಬಿಜೆಪಿಯ ದೊಡ್ಡ ಸಾಧನೆಯಾಗಿದೆ ಎಂದು ಹೇಳಿದರು.
ಬ್ಲಾಕ್ ಅಧ್ಯಕ್ಷ ಸತೀಶ್ ಅಮೀನ್ ಪಡುಕರೆ ಮಾತನಾಡಿ, ನಗರಸಭೆ ಚುನಾವಣೆಗೆ ಮೀಸಲಾತಿ ಪಟ್ಟಿ ಕರಡು ಪ್ರತಿಯಾಗಿದ್ದು ಸಾರ್ವಜನಿಕವಾಗಿ ತಕರಾರು ಸಲ್ಲಿಸುವ ಅವಕಾಶಗಳಿದ್ದು, ಆಕ್ಷೇಪಗಳಿದ್ದರೆ ಕೂಡಲೇ ಜಿಲ್ಲಾಧಿ ಕಾರಿಗಳಿಗೆ ಲಿಖಿತವಾಗಿ ಸಲ್ಲಿಸಬಹುದಾಗಿದೆ. ಚುನಾವಣೆ ಸಂಬಂಧಿಸಿ ಶೀಘ್ರ ಪ್ರಣಾಳಿಕೆ ಸಮಿತಿ ಹಾಗೂ ಆರ್ಥಿಕ ಸಮಿತಿಗಳನ್ನು ರಚಿಸಲಾಗುವುದು ಎಂದರು.
ಸಭೆಯಲ್ಲಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್ರಾಜ್, ಸದಸ್ಯ ಹಾರ್ಮಿಸ್ ನೊರೋಹ್ನ, ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ದಿನೇಶ್ ಪುತ್ರನ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಸದಾಶಿವ ಕಟ್ಟೆಗುಡ್ಡೆ, ಕೆ. ಕೃಷ್ಣಮೂರ್ತಿ, ಅಣ್ಣಯ್ಯ ಸೇರಿಗಾರ್, ಜ್ಯೋತಿ ಹೆಬ್ಬಾರ್, ರಫೀಕ್ ಕರಂಬಳ್ಳಿ, ಯಜ್ಞೇಶ್ ಆಚಾರ್ಯ, ಶಶಿರಾಜ್ ಕುಂದರ್, ಗಣಪತಿ ಶೆಟ್ಟಿಗಾರ್, ರಮೇಶ್ ಕಾಂಚನ್, ಶೋಭಾ ಪೂಜಾರಿ, ಸಲಿನ್ ಕರ್ಕಡ, ಸುಜಯ ಪೂಜಾರಿ, ವಿಜಯ ಪೂಜಾರಿ, ಮೊದಲಾದವರು ಉಪಸ್ಥಿತರಿದ್ದರು. ಬ್ಲಾಕ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್ ಕಾರ್ಯಕ್ರಮ ನಿರೂಪಿಸಿದರು.







