Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹುದೈದಾ: ಹೌದಿ ನೆಲೆಗಳ ಮೇಲೆ ಮುಂದುವರಿದ...

ಹುದೈದಾ: ಹೌದಿ ನೆಲೆಗಳ ಮೇಲೆ ಮುಂದುವರಿದ ಸೌದಿ ಮಿತ್ರಕೂಟದ ವಾಯುದಾಳಿ

ಆಸರೆಗಾಗಿ ನಾಗರಿಕರ ಪಲಾಯನ

ವಾರ್ತಾಭಾರತಿವಾರ್ತಾಭಾರತಿ18 Jun 2018 10:44 PM IST
share
ಹುದೈದಾ: ಹೌದಿ ನೆಲೆಗಳ ಮೇಲೆ ಮುಂದುವರಿದ ಸೌದಿ ಮಿತ್ರಕೂಟದ ವಾಯುದಾಳಿ

ಏಡನ್ (ಯಮನ್), ಜೂ. 18: ಯಮನ್‌ನ ಪ್ರಮುಖ ಬಂದರು ನಗರ ಹುದೈದಾದ ವಿಮಾನ ನಿಲ್ದಾಣದಲ್ಲಿ ಅಡಗಿಕೊಂಡಿರುವ ಹೌದಿ ಬಂಡುಕೋರರ ವಿರುದ್ಧದ ವಾಯು ದಾಳಿಯನ್ನು ಸೌದಿ ಅರೇಬಿಯ ನೇತೃತ್ವದ ಮಿತ್ರಕೂಟ ಸೋಮವಾರ ಮುಂದುವರಿಸಿದೆ.

ಅದೇ ವೇಳೆ, ಹಾಲಿ ಸಂಘರ್ಷದ ಅತಿ ದೊಡ್ಡ ಕಾಳಗದಿಂದ ತಪ್ಪಿಕೊಳ್ಳುವುದಕ್ಕಾಗಿ ನಾಗರಿಕರು ಪಲಾಯನಗೈಯುತ್ತಿದ್ದಾರೆ.

ವಿಮಾನ ನಿಲ್ದಾಣ ಆವರಣಕ್ಕೆ ಹೊಂದಿಕೊಂಡಿರುವ ಮಂಝರ್ ಪಟ್ಟಣದ ಶಾಲೆಗಳು ಮತ್ತು ಮನೆಗಳ ಮೇಲ್ಛಾವಣಿಗಳಲ್ಲಿ ಅಡಗಿರುವ ಹೌದಿ ಸ್ನೈಪರ್‌ಗಳು ಮತ್ತು ಯೋಧರ ಮೇಲೆ ಅಪಾಚೆ ಹೆಲಿಕಾಪ್ಟರ್‌ಗಳು ದಾಳಿ ನಡೆಸಿವೆ.

 ಭೀಕರ ಕಾಳಗದಲ್ಲಿ ಡಝನ್‌ಗಟ್ಟಳೆ ನಾಗರಿಕರು ಗಾಯಗೊಂಡಿದ್ದಾರೆ ಹಾಗೂ ನೆರವು ಗುಂಪುಗಳಿಗೆ ನಗರದ ಅಗತ್ಯವಿರುವ ಭಾಗಗಳಿಗೆ ಬರಲು ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ.

ಬಂಡುಕೋರರು ಹುದೈದಾ ನಗರವನ್ನು ಕಳೆದುಕೊಂಡರೆ, ಅವರಿಗೆ ತೀವ್ರ ಹಿನ್ನಡೆಯಾಗಲಿದೆ. ಅದು ಅವರ ಸಾಮಗ್ರಿ ಪೂರೈಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ.

ಯಮನ್ ಸಂಘರ್ಷದಲ್ಲಿ ಈವರೆಗೆ 10,000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

ಕೆಎಸ್‌ರಿಲೀಫ್‌ನಿಂದ ಹುದೈದಾ ನಗರ ನಿವಾಸಿಗಳಿಗಾಗಿ ತುರ್ತು ಯೋಜನೆ

  ಸೌದಿ ಅರೇಬಿಯ ನೇತೃತ್ವದ ಮಿತ್ರಕೂಟ ಬೆಂಬಲಿತ ಯಮನ್ ಸೇನೆಯು ಬಂದರು ನಗರ ಹುದೈದಾ ಮೇಲಿನ ಹಿಡಿತವನ್ನು ಬಿಗಿಗೊಳಿಸಿರುವಂತೆಯೇ, ದೊರೆ ಸಲ್ಮಾನ್ ಮಾನವೀಯ ನೆರವು ಮತ್ತು ಪರಿಹಾರ ಕೇಂದ್ರ (ಕೆಎಸ್‌ರಿಲೀಫ್)ವು ಸಿಕ್ಕಿಹಾಕಿಕೊಂಡಿರುವ ನಿವಾಸಿಗಳಿಗಾಗಿ ತುರ್ತು ಪ್ರತಿಕ್ರಿಯೆ ಯೋಜನೆಯೊಂದನ್ನು ಸಿದ್ಧಪಡಿಸಿದೆ.

ಈ ಯೋಜನೆಯ ಪ್ರಕಾರ, ಹುದೈದಾ ನಗರಕ್ಕೆ ಪರಿಣತ ವೈದ್ಯಕೀಯ ತಂಡಗಳನ್ನು ಕಳುಹಿಸಲಾಗುವುದು ಹಾಗೂ ಮಾನವೀಯ ಮತ್ತು ಪರಿಹಾರ ನೆರವು ವಿತರಣೆಯನ್ನು ತೀವ್ರಗೊಳಿಸಲಾಗುವುದು ಎಂದು ಕೆಎಸ್‌ರಿಲೀಫ್‌ನಲ್ಲಿ ಆರೋಗ್ಯ ಮತ್ತು ಪರಿಸರ ನೆರವು ನಿರ್ದೇಶಕರಾಗಿರುವ ಡಾ. ಅಬ್ದುಲ್ಲಾ ಅಲ್-ಮುಅಲ್ಲಿಮ್ ತಿಳಿಸಿದರು.

ಯಮನ್ ಸೇನೆಯು ಶನಿವಾರ ಹುದೈದಾ ನಗರದ ವಿಮಾನ ನಿಲ್ದಾಣವನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ ಹಾಗೂ ಇರಾನ್ ಬೆಂಬಲಿತ ಹೌದಿ ಬಂಡುಕೋರರಿಂದ ನಗರವನ್ನು ಮುಕ್ತಗೊಳಿಸುವ ನಿಟ್ಟಿನಲ್ಲಿ ಮುಂದುವರಿಯುತ್ತಿದೆ.

‘‘ನಮ್ಮ ಸಮಗ್ರ ಯೋಜನೆ ಸಿದ್ಧವಾಗಿದೆ. ನಗರವು ಬಂಡುಕೋರರಿಂದ ಬಿಡುಗಡೆ ಹೊಂದಿದ ಕ್ಷಣ ಜನರಿಗೆ ನಾವು ವೈದ್ಯಕೀಯ ಸಲಕರಣೆಗಳು ಮತ್ತು ಸೇವೆಯನ್ನು ನೀಡುತ್ತೇವೆ ಹಾಗೂ ಅಲ್ಲಿನ ಸರಕಾರಿ ಆಸ್ಪತ್ರೆಗಳಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ಈ ವಲಯದಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಜನರಿಗೆ ಬೇಕಾಗುವ ಅಗತ್ಯ ನೆರವನ್ನು ಒದಗಿಸುತ್ತೇವೆ’’ ಎಂದು ಅಲ್-ಮುಅಲ್ಲಿಮ್ ‘ಅರಬ್ ನ್ಯೂಸ್’ಗೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X