Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಉಟ್ಟ ಸೀರೆ

ಉಟ್ಟ ಸೀರೆ

ವಾರ್ತಾಭಾರತಿವಾರ್ತಾಭಾರತಿ19 Jun 2018 12:04 AM IST
share
ಉಟ್ಟ ಸೀರೆ

ಉಟ್ಟ ಸೀರೆಯ ಹರಿದು ಹೋದಾತ ನೀನಲಾ ಬಸವಣ್ಣ.
ಮೆಟ್ಟಿದ ಕೆರಹ ಕಳೆದು ಹೋದಾತ ನೀನಲಾ ಬಸವಣ್ಣ.
ಕಟ್ಟಿದ ಮುಡಿಯ ಬಿಟ್ಟು ಹೋದಾತ ನೀನಲಾ ಬಸವಣ್ಣ.
ಸೀಮೆಯ ಸಂಬಂಧವ ತಪ್ಪಿಸಿ ಹೋದಾತ ನೀನಲಾ ಬಸವಣ್ಣ.
ಲಿಂಗಕ್ಕೆ ಮಾಡಿದುದ ಸೋಂಕದೆ ಹೋದೆಯಲ್ಲಾ ಬಸವಣ್ಣ.
ಜಂಗಮಕ್ಕೆ ಮಾಡಿದ ಮಾಟವ ಕೈಯಲ್ಲಿ ಹಿಡಿದುಕೊಂಡು
ಹೋದೆಯಲ್ಲಾ ಬಸವಣ್ಣ.
ಬೆಳಗನುಟ್ಟು ಬಯಲಾಗಿ ಹೋದೆಯಲ್ಲಾ ಬಸವಣ್ಣ.
ಆ ಬಸವಣ್ಣಂಗೆ ಶರಣೆಂಬ ಪಥವನೇ ತೋರು ಕಂಡಾ
ಕಲಿದೇವರದೇವ.
                                                               -ಮಡಿವಾಳ ಮಾಚಿದೇವ

ಸಮಗಾರ ಹರಳಯ್ಯ ಮತ್ತು ಮಧುವರಸರ ಮಕ್ಕಳ ಮದುವೆಯನ್ನು ಲಿಂಗವಂತರ ಮದುವೆ ಎಂದು ತಿಳಿಯದೆ, ಸಮಗಾರ ವರ ಮತ್ತು ಬ್ರಾಹ್ಮಣ ಕನ್ಯೆಯ ಮಧ್ಯೆ ನಡೆದ ಮದುವೆ ಎಂದು ಭಾವಿಸಿ ಕಲ್ಯಾಣದಲ್ಲಿ ಯಥಾಸ್ಥಿತಿವಾದಿಗಳು ಹುಯಿಲೆಬ್ಬಿಸುತ್ತಾರೆ. ಜಾತಿಸಂಕರದ ವಿಚಾರದಲ್ಲಿ ದೊರೆ ಬಿಜ್ಜಳ ಪ್ರಧಾನಿ ಬಸವಣ್ಣನವರ ಪರವಾಗಿ ನಿಲ್ಲದೆ ಆಸ್ಥಾನದ ಸನಾತನಿಗಳ ಪರವಾಗಿ ನಿಂತು ವರ್ಣಭೇದ ನೀತಿಯನ್ನು ಎತ್ತಿಹಿಡಿಯುತ್ತಾನೆ. ಹರಳಯ್ಯ ಮತ್ತು ಮಧುವರಸರಿಗೆ ಎಳೆಹೂಟಿ ಶಿಕ್ಷೆ ನೀಡಲಾಗುತ್ತದೆ. ಈ ಕಾರಣದಿಂದಾಗಿ ಬಸವಣ್ಣನವರು ಪ್ರಧಾನಿ ಪದವಿಯನ್ನು ತ್ಯಾಗಮಾಡಿ ಕೂಡಲಸಂಗಮಕ್ಕೆ ಹೋಗುತ್ತಾರೆ. ತದನಂತರ ಕಲ್ಯಾಣದಲ್ಲಿ ಶರಣರ ಹತ್ಯಾಕಾಂಡವಾಗುತ್ತದೆ. ಕೂಡಲಸಂಗಮದಲ್ಲಿ ಬಸವಣ್ಣನವರು ಲಿಂಗೈಕ್ಯರಾಗುತ್ತಾರೆ.

ಇಷ್ಟೆಲ್ಲ ನಡೆದ ನಂತರ ಮಾಚಿದೇವ ಬರೆದ ಹೃದಯಸ್ಪರ್ಶಿ ವಚನವಿದು. ಬಸವಣ್ಣ ಪ್ರಧಾನಿ ಪಟ್ಟವನ್ನು ಬಿಟ್ಟ ಕೂಡಲೇ ಪೋಷಾಕನ್ನು ಹರಿದರು. (ಏಕೆಂದರೆ ಪ್ರಧಾನಿ ಪೋಷಾಕನ್ನು ಬೇರೆಯವರು ತೊಡುವ ಹಾಗಿಲ್ಲ) ಪಾದರಕ್ಷೆಗಳನ್ನು ಕಳೆದರು. ರತ್ನಖಚಿತವಾದ ಕಿರೀಟವನ್ನು ಕಳಚಿಟ್ಟರು. ರಾಜಧಾನಿ ಕಲ್ಯಾಣವನ್ನು ಬಿಟ್ಟು ಕೂಡಲಸಂಗಮಕ್ಕೆ ಹೋದರು. ಅವರು ಇಷ್ಟಲಿಂಗವೆಂಬ ತತ್ತ್ವದಲ್ಲಿನ ನಂಬಿಕೆಯನ್ನು ಉಳಿಸಿಕೊಂಡೇ ಹೋದರು. ತಾವು ರೂಪಿಸಿದ ಸಾಮಾಜಿಕ ಕ್ರಾಂತಿಯ ಕನಸುಗಳನ್ನು ಅಭಯಹಸ್ತದಲ್ಲಿ ಹಿಡಿದಿಟ್ಟುಕೊಂಡೇ ಹೋದರು. ಮುಂದೆ ಕೂಡಲಸಂಗಮದಲ್ಲಿ ಪರಂಜ್ಯೋತಿಯನ್ನೇ ಧರಿಸಿ ಅಂದರೆ ಶಿವಮಯವಾಗಿ ಬಯಲಾದರು. ತಾವು ಕಟ್ಟಬಯಸಿದ ಸುಂದರ ಸಮಾಜಕ್ಕೆ ಕೊಡಲಿಪೆಟ್ಟು ಬಿದ್ದ ಸಂದರ್ಭದಲ್ಲಿ ಕೂಡ ಬಸವಣ್ಣನವರು ವಿಚಲಿತರಾಗಿಲ್ಲ. ತಮ್ಮ ಕನಸಿನ ಸಮತಾ ಸಮಾಜ ಒಂದಿಲ್ಲೊಂದು ದಿನ ನನಸಾಗಿಯೇ ತೀರುವುದು ಎಂಬ ಭಾವದಲ್ಲಿ ಅವರು ಕಲ್ಯಾಣವನ್ನು ತೊರೆದರು. ಬಸವಣ್ಣನವರ ನವಸಮಾಜದೆಡೆಗೆ ಸಾಗುವಂಥ ದಾರಿಯನ್ನೇ ತೋರಿಸು ಎಂದು ಮಾಚಿದೇವ ದೇವರಲ್ಲಿ ಪ್ರಾರ್ಥಿಸುತ್ತಾನೆ. ವಿಜಾಪುರ ಜಿಲ್ಲೆ ಸಿಂದಗಿ ತಾಲೂಕಿನ ದೇವರಹಿಪ್ಪರಗಿಯ ಮಾಚಿದೇವ, ಕಲ್ಯಾಣ ಹತ್ಯಾಕಾಂಡದ ನಂತರ ಚೆನ್ನಬಸವಣ್ಣನವರ ನೇತೃತ್ವದ ಶರಣ ಪಡೆಯ ಸೇನಾಪತಿಯಾದ. ಬಿಜ್ಜಳನ ಸೈನ್ಯದ ಜೊತೆ ಹೋರಾಡಿ ಶರಣರ ಮತ್ತು ವಚನಕಟ್ಟುಗಳ ರಕ್ಷಣೆ ಮಾಡಿದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X