Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜನಸಾಮಾನ್ಯರ ಅವಕಾಶ ಕಸಿಯುತ್ತಿರುವ...

ಜನಸಾಮಾನ್ಯರ ಅವಕಾಶ ಕಸಿಯುತ್ತಿರುವ ವಂಶಪಾರಂಪರ್ಯ: ವರುಣ್ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ19 Jun 2018 11:10 PM IST
share
ಜನಸಾಮಾನ್ಯರ ಅವಕಾಶ ಕಸಿಯುತ್ತಿರುವ ವಂಶಪಾರಂಪರ್ಯ: ವರುಣ್ ಗಾಂಧಿ

ಹೊಸದಿಲ್ಲಿ, ಜೂ.19: ರಾಜಕೀಯ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಲ್ಲಿ ವಂಶಪರಂಪರೆಯ ದೃಷ್ಟಿಕೋನದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಬಿಜೆಪಿ ಸಂಸದ ವರುಣ್ ಗಾಂಧಿ, ಇದರಿಂದ ಜನಸಾಮಾನ್ಯರಿಗೆ ಅವಕಾಶದ ಬಾಗಿಲು ಮುಚ್ಚಿದಂತಾಗುತ್ತದೆ ಎಂದಿದ್ದಾರೆ.

‘ದಿ ರೋಡ್ ಟು ಇಂಡಿಯಾಸ್ ಫ್ಯೂಚರ್: ಅಪರ್ಚುನಿಟೀಸ್ ಆ್ಯಂಡ್ ಚಾಲೆಂಜಸ್’ ಎಂಬ ವಿಷಯದ ಕುರಿತು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯ ಮಂಡಳಿಯ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಸೋಮವಾರ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ರಾಜಕೀಯದಲ್ಲಿ ವಂಶಪರಂಪರೆಯ ನಿಲುವಿಗೆ ಪ್ರಾಶಸ್ತ್ಯವಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಹೀಗಿರುವಾಗ ರಾಜಕೀಯದಲ್ಲಿ ಹೆಚ್ಚಿನ ಮಂದಿಗೆ ಅವಕಾಶದ ಬಾಗಿಲು ತೆಗೆಯಲು ಸಾಧ್ಯವೇ ಎಂದು ಪ್ರಶ್ನಿಸಿದ ವರುಣ್ ಗಾಂಧಿ, ಪ್ರತಿಯೊಂದು ದೇಶ, ರಾಜ್ಯ ಹಾಗೂ ಜಿಲ್ಲೆಯಲ್ಲೂ ಕೆಲವು ಗಣ್ಯ ಕುಟುಂಬಗಳಿರುತ್ತವೆ. ದುರದೃಷ್ಟಕರವಾಗಿದ್ದರೂ ಇದು ಸತ್ಯದ ವಿಷಯ ಎಂದರು. ಜನಸಾಮಾನ್ಯರಿಗೆ ಸಿನೆಮ ಉದ್ಯಮ, ಕ್ರೀಡಾ ಕ್ಷೇತ್ರ, ರಾಜಕೀಯ, ಕೈಗಾರಿಕೆ ಇತ್ಯಾದಿಗಳ ಬಾಗಿಲು ಮುಚ್ಚಿದೆ. ಸಣ್ಣ ನಗರವೊಂದರಲ್ಲಿ ವಾಸಿಸುತ್ತಿರುವ ಪ್ರತಿಭಾವಂತ ಯುವಜನತೆಯ ಪ್ರತಿಭಾ ವಿಕಸನಕ್ಕೆ ಅವಕಾಶವೇ ಇಲ್ಲದೆ ಹೋಗುವ ಪರಿಸ್ಥಿತಿ ಇರುವುದು ಬೇಸರದ ವಿಷಯವಾಗಿದೆ ಎಂದು ವರುಣ್ ಹೇಳಿದರು.

ಇದೇ ವೇಳೆ, ರಾಜಕೀಯ ಕ್ಷೇತ್ರದಲ್ಲಿ ತನ್ನ ಬೆಳವಣಿಗೆಗೆ ವಂಶಪರಂಪರೆ ಪ್ರಭಾವ ಬೀರಿದೆ ಎಂಬುದನ್ನು ಅವರು ಒಪ್ಪಿಕೊಂಡರು. ದೇಶದಲ್ಲಿ ಹೊಸ ಸಂಶೋಧನೆಗೆ ಆರ್ಥಿಕ ಅಡಚಣೆ ಎದುರಾಗುತ್ತಿದೆ ಎಂದ ಅವರು, ಚೀನಾವು ತನ್ನ ಜಿಡಿಪಿಯ ಶೇ.3ರಷ್ಟು ಪಾಲನ್ನು ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಯಕ್ಕೆ ವಿನಿಯೋಗಿಸಿದರೆ ಭಾರತದ ಪಾಲು ಕೇವಲ ಶೇ.0.6ರಷ್ಟು ಮಾತ್ರವಾಗಿದೆ. ಅಲ್ಲದೆ ದೇಶದಲ್ಲಿ ಹೊಸದಾಗಿ ಆರಂಭವಾಗುವ ಶೇ.93ರಷ್ಟು ಉದ್ದಿಮೆಗಳು ವಿಫಲವಾಗುತ್ತಿದ್ದು , ಉದ್ದಿಮೆ ಬೆಳೆಯಲು ಸಾಕಷ್ಟು ಸಮಯಾವಕಾಶವನ್ನು ಹಣ ಹೂಡಿರುವವರು (ಸಾಲ ನೀಡುವವರು) ನೀಡದಿರುವುದು ಇದಕ್ಕೆ ಪ್ರಮುಖ ಕಾರಣ ಎಂದು ವರುಣ್ ಗಾಂಧಿ ಹೇಳಿದರು. ಶೈಕ್ಷಣಿಕ ವ್ಯವಸ್ಥೆಯಲ್ಲಿ ಸುಧಾರಣೆ ಆಗಬೇಕಿದ್ದು ಪಿಎಚ್‌ಡಿ ಸಂಶೋಧನೆಯು ಉದ್ದಿಮೆ ಮತ್ತು ಸಂಶೋಧನೆಯೊಂದಿಗೆ ಸಂಪರ್ಕ ಹೊಂದಿರಬೇಕು . ಅಲ್ಲದೆ ಶಿಕ್ಷಣವು ಸರ್ವರಿಗೂ ದೊರಕುವಂತೆ ಮಾಡುವ ಅಗತ್ಯವಿದೆ ಎಂದರು.

ಪರಿಸರ ಹಾನಿಯ ಬಗ್ಗೆ ಉಲ್ಲೇಖಿಸಿದ ವರುಣ್ ಗಾಂಧಿ, ದಿಲ್ಲಿಯ ಎರಡು ಸೆಟಿಲೈಟ್ ನಗರಗಳಾದ ಫರೀದಾಬಾದ್ ಹಾಗೂ ಗುರ್ಗಾಂವ್‌ಗಳಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ಮುಚ್ಚಿದ ಬಳಿಕ ಈ ನಗರಗಳ ಬಹುತೇಕ ನಿವಾಸಿಗಳು ಗಂಭೀರ ಪ್ರಮಾಣದ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X