Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿ: 60 ಕಿ.ಮೀ. ಉದ್ದದ ಕಾಲುವೆ...

ಸೌದಿ: 60 ಕಿ.ಮೀ. ಉದ್ದದ ಕಾಲುವೆ ನಿರ್ಮಾಣಕ್ಕೆ ಚಾಲನೆ

ಸೌದಿ-ಕತರ್ ಗಡಿಯುದ್ದಕ್ಕೂ ಸಾಗುವ ನೂತನ ಜಲಮಾರ್ಗ

ವಾರ್ತಾಭಾರತಿವಾರ್ತಾಭಾರತಿ20 Jun 2018 6:46 PM IST
share
ಸೌದಿ: 60 ಕಿ.ಮೀ. ಉದ್ದದ ಕಾಲುವೆ ನಿರ್ಮಾಣಕ್ಕೆ ಚಾಲನೆ

ರಿಯಾದ್ (ಸೌದಿ ಅರೇಬಿಯ), ಜೂ. 20: ಸೌದಿ ಅರೇಬಿಯ ಮತ್ತು ಕತರ್ ದೇಶಗಳ ಗಡಿಯುದ್ದಕ್ಕೂ ಸೌದಿ ಭೂಭಾಗದಲ್ಲಿ 60 ಕಿಲೋಮೀಟರ್ ಉದ್ದದ ಕಾಲುವೆ ಅಗೆಯಲು ಸೌದಿ ಅರೇಬಿಯ ಟೆಂಡರ್‌ಗಳನ್ನು ಆಹ್ವಾನಿಸಿದೆ. ಟೆಂಡರ್‌ಗಳನ್ನು ಸ್ವೀಕರಿಸಲು ಜೂನ್ 25 ಕೊನೆಯ ದಿನಾಂಕ.

ಈ ಯೋಜನೆ ಕಾರ್ಯಗತಗೊಂಡಾಗ ಕತರ್ ದ್ವೀಪವಾಗಿ ಮಾರ್ಪಡುತ್ತದೆ.

 ‘ಸಾಲ್ವ’ ಕಾಲುವೆ ನಿರ್ಮಾಣಕ್ಕಾಗಿ 5 ಅಂತಾರಾಷ್ಟ್ರೀಯ ಕಂಪೆನಿಗಳು ಈವರೆಗೆ ತಮ್ಮ ಟೆಂಡರ್‌ಗಳನ್ನು ಸಲ್ಲಿಸಿವೆ. 90 ದಿನಗಳಲ್ಲಿ ಟೆಂಡರ್ ಗೆದ್ದವರನ್ನು ಘೋಷಿಸಲಾಗುವುದು. ಟೆಂಡರ್ ಗೆದ್ದ ಕಂಪೆನಿಯು ಒಂದು ವರ್ಷದಲ್ಲಿ ಕಾಲುವೆ ತೋಡುವ ಕಾರ್ಯವನ್ನು ಪೂರ್ಣಗೊಳಿಸಬೇಕಾಗಿದೆ ಎಂದು ಸೌದಿ ದೈನಿಕ ‘ಮಕ್ಕಾ’ ವರದಿ ಮಾಡಿದೆ.

ಸಾಲ್ವ, ಸಕಕ್, ಖೊರ್ ಅಲ್ ಅದೀದ್ ಮತ್ತು ರಾಸ್ ಅಬು ಕಮೀಸ್‌ನ ಎರಡು ಸ್ಥಳಗಳಲ್ಲಿ ಖಾಸಗಿ ಬೀಚ್‌ಗಳನ್ನೊಳಗೊಂಡ ರಿಸಾರ್ಟ್‌ಗಳನ್ನು ಸ್ಥಾಪಿಸುವ ಯೋಜನೆಗಳು ಪರಿಶೀಲನೆಯಲ್ಲಿವೆ.

ಸಾಲ್ವ ಮತ್ತು ಅಕ್ಲತ್ ಅಲ್ ಝವಾಯೀದ್‌ಗಳಲ್ಲಿ ಬಂದರುಗಳನ್ನು ನಿರ್ಮಿಸಲಾಗುವುದು ಹಾಗೂ ಈ ಬಂದರ್‌ಗಳು ರಾಸ್ ಅಬು ಕಮೀಸ್‌ನಲ್ಲಿರುವ ಬಂದರಿಗೆ ಪೂರಕವಾಗಿರುತ್ತದೆ.

ಕಾಲುವೆಯು ಸಂಪೂರ್ಣವಾಗಿ ಸೌದಿ ಭೂಭಾಗದಲ್ಲಿರುತ್ತದೆ ಹಾಗೂ ಅದು ಕತರ್‌ನ ಅಧಿಕೃತ ಗಡಿಯಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿರುತ್ತದೆ.

ಸಾಲ್ವ ಕಾಲುವೆ ಮತ್ತು ಕತರ್ ಗಡಿ ನಡುವಿನ ಒಂದು ಕಿಲೋಮೀಟರ್ ಜಾಗದಲ್ಲಿ ಸೌದಿ ಸೇನಾ ನೆಲೆಯೊಂದನ್ನು ಸ್ಥಾಪಿಸಲಾಗುವುದು. ಉಳಿದ ಸ್ಥಳದಲ್ಲಿ ಸೌದಿ ಪರಮಾಣು ರಿಯಾಕ್ಟರ್‌ಗಳ ತ್ಯಾಜ್ಯ ವಿಲೇವಾರಿ ಸ್ಥಳವನ್ನಾಗಿ ಮಾಡಲಾಗುವುದು.

ಸೌದಿ ಅರೇಬಿಯ, ಯುಎಇ, ಬಹರೈನ್ ಮತ್ತು ಈಜಿಪ್ಟ್ ಕಳೆದ ವರ್ಷದ ಜೂನ್ 5ರಂದು ಕತರ್ ಭಯೋತ್ಪಾದನೆಗೆ ಬೆಂಬಲ ನೀಡುತ್ತದೆ ಎಂದು ಆರೋಪಿಸಿ ಅದರ ಮೇಲೆ ಆರ್ಥಿಕ ಮತ್ತು ರಾಜತಾಂತ್ರಿಕ ದಿಗ್ಬಂಧನಗಳನ್ನು ವಿಧಿಸಿರುವುದನ್ನು ಸ್ಮರಿಸಬಹುದಾಗಿದೆ.

5,000 ಕೋಟಿ ರೂ. ವೆಚ್ಚದ ಯೋಜನೆ

2.8 ಬಿಲಿಯ ಸೌದಿ ರಿಯಾಲ್ (ಸುಮಾರು 5,000 ಕೋಟಿ ರೂಪಾಯಿ) ವೆಚ್ಚದ ಪ್ರಸ್ತಾಪಿತ ಕಾಲುವೆಯು ಸಾಲ್ವದಿಂದ ಖೊರ್ ಅಲ್ ಅದೀದ್‌ವರೆಗೆ ಹಾದುಹೋಗುತ್ತದೆ. ಅದು 200 ಮೀಟರ್ ಅಗಲವಿರುತ್ತದೆ ಹಾಗೂ 15ರಿಂದ 20 ಮೀಟರ್ ಆಳವಿರುತ್ತದೆ. 295 ಮೀಟರ್ ಉದ್ದ ಹಾಗೂ 33 ಮೀಟರ್ ಅಗಲದ ಹಡಗುಗಳು ಈ ಕಾಲುವೆಯಲ್ಲಿ ಹಾದು ಹೋಗಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X