Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹೆತ್ತವರಿಂದ ಶಿಶುಗಳ ಬೇರ್ಪಡಿಸುವ ಸುದ್ದಿ...

ಹೆತ್ತವರಿಂದ ಶಿಶುಗಳ ಬೇರ್ಪಡಿಸುವ ಸುದ್ದಿ ಓದುವಾಗ ಬಿಕ್ಕಳಿಸಿದ ನಿರೂಪಕಿ

ಟ್ರಂಪ್ ಸರಕಾರದ ನೀತಿ

ವಾರ್ತಾಭಾರತಿವಾರ್ತಾಭಾರತಿ20 Jun 2018 8:48 PM IST
share
ಹೆತ್ತವರಿಂದ ಶಿಶುಗಳ ಬೇರ್ಪಡಿಸುವ ಸುದ್ದಿ ಓದುವಾಗ ಬಿಕ್ಕಳಿಸಿದ ನಿರೂಪಕಿ

ವಾಶಿಂಗ್ಟನ್, ಜೂ. 20: ಅಮೆರಿಕವು ತನ್ನ ಮೆಕ್ಸಿಕೊ ಗಡಿಯಲ್ಲಿ ಅಕ್ರಮ ವಲಸಿಗ ಹೆತ್ತವರಿಂದ ಅವರ ಶಿಶುಗಳನ್ನು ಬೇರ್ಪಡಿಸಿ ಆಶ್ರಯ ಸಂಸ್ಥೆಗಳಿಗೆ ಕಳುಹಿಸುತ್ತಿರುವ ಸುದ್ದಿಯ ವಿವರಗಳನ್ನು ನೇರಪ್ರಸಾರದಲ್ಲಿ ನೀಡುತ್ತಿದ್ದಾಗ ನಿರೂಪಕಿಯೊಬ್ಬರು ಬಿಕ್ಕಳಿಸಿ ಅತ್ತುಬಿಟ್ಟ ಘಟನೆ ನಡೆದಿದೆ.

ಎಂಎಸ್‌ಎನ್‌ಬಿಸಿ ಟಿವಿ ಚಾನೆಲ್‌ನ ರಚೆಲ್ ಮ್ಯಾಡೋ ತನ್ನ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾಗ, ಬ್ರೇಕಿಂಗ್ ಸುದ್ದಿಯೊಂದು ಬಂತು. ಅವರು ಅದನ್ನು ಓದಲು ಯತ್ನಿಸಿದರು.

ಆದರೆ, ಅಷ್ಟರಲ್ಲಿ ಅವರಿಗೆ ದುಃಖ ಉಮ್ಮಳಿಸಿ ಬಂತು. ಆ ಸುದ್ದಿಯನ್ನು ಅಲ್ಲೇ ಬಿಟ್ಟ ಅವರು ಇನ್ನೊಂದು ಸುದ್ದಿಯತ್ತ ಹೊರಳಿದರು.

ಬಳಿಕ ಟ್ವೀಟ್ ಮಾಡಿದ ಅವರು, ‘‘ಕ್ಷಮಿಸಿ, ನಾನು ಟಿವಿಯಲ್ಲಿರುವಾಗ ಸುದ್ದಿ ಹೇಳುವುದು ನನ್ನ ಕೆಲಸವಾಗಿತ್ತು’’ ಎಂದು ಹೇಳಿದ್ದಾರೆ.

ಅಮೆರಿಕ-ಮೆಕ್ಸಿಕೊ ಗಡಿಯಲ್ಲಿ ಅಕ್ರಮವಾಗಿ ಅಮೆರಿಕ ಪ್ರವೇಶಿಸುವ ವಲಸಿಗರ ಸಣ್ಣ ಮಕ್ಕಳನ್ನು ಅವರಿಂದ ಬೇರ್ಪಡಿಸಿ ಸೌತ್ ಟೆಕ್ಸಾಸ್‌ನಲ್ಲಿರುವ ಮಕ್ಕಳ ಆಶ್ರಯ ಧಾಮಕ್ಕೆ ಕಳುಹಿಸುವ ಅಧಿಕಾರಿಗಳ ನಿರ್ಧಾರಕ್ಕೆ ಸಂಬಂಧಿಸಿದ ಸುದ್ದಿಯನ್ನು ಅವರು ಹೇಳಲು ಪ್ರಯತ್ನಿಸುತ್ತಿದ್ದರು.

ವಲಸಿಗರು ಜೈಲಿಗೆ, ಮಕ್ಕಳು ಶಿಶು ಕೇಂದ್ರಕ್ಕೆ

ಮೆಕ್ಸಿಕೊ ಗಡಿಯಲ್ಲಿ ಅಕ್ರಮವಾಗಿ ಅಮೆರಿಕ ಪ್ರವೇಶಿಸುವ ವಲಸಿಗರನ್ನು ಅಮೆರಿಕವು ಬಂಧಿಸಿ ಜೈಲಿಗೆ ಕಳುಹಿಸುತ್ತಿದೆ. ಜೈಲಿನಲ್ಲಿ ಮಕ್ಕಳನ್ನು ಅವರ ಹೆತ್ತವರೊಂದಿಗೆ ಇಡಲು ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಹೆತ್ತವರಿಂದ ಮಕ್ಕಳನ್ನು ಬೇರ್ಪಡಿಸಲಾಗುತ್ತಿದೆ.

ಅಮೆರಿಕ ಸರಕಾರವು ಮೇ ತಿಂಗಳ ಆದಿ ಭಾಗದಲ್ಲಿ ಅಕ್ರಮ ವಲಸೆಗೆ ಶೂನ್ಯ ಸಹಿಷ್ಣುತೆ ಘೋಷಿಸಿದ ಬಳಿಕ, ಗಡಿಯಲ್ಲಿ 2,300ಕ್ಕೂ ಅಧಿಕ ಮಕ್ಕಳನ್ನು ಹೆತ್ತವರಿಂದ ಪ್ರತ್ಯೇಕಿಸಿ ಶಿಶು ಕೇಂದ್ರಗಳಿಗೆ ಕಳುಹಿಸಲಾಗಿದೆ ಹಾಗೂ ಹೆತ್ತವರನ್ನು ಜೈಲಿಗೆ ಕಳುಹಿಸಲಾಗಿದೆ.

ಆದರೆ, ಡೊನಾಲ್ಡ್ ಟ್ರಂಪ್ ಸರಕಾರದ ಈ ಕ್ರಮಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X