Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿದ್ದರಾಮಯ್ಯರ ಹೆಸರು ಕೆಡಿಸಲು ಕುತಂತ್ರ:...

ಸಿದ್ದರಾಮಯ್ಯರ ಹೆಸರು ಕೆಡಿಸಲು ಕುತಂತ್ರ: ಕಾಂಗ್ರೆಸ್ ಮುಖಂಡ ವಿಜಯಕುಮಾರ್

ವಾರ್ತಾಭಾರತಿವಾರ್ತಾಭಾರತಿ20 Jun 2018 10:11 PM IST
share
ಸಿದ್ದರಾಮಯ್ಯರ ಹೆಸರು ಕೆಡಿಸಲು ಕುತಂತ್ರ: ಕಾಂಗ್ರೆಸ್ ಮುಖಂಡ ವಿಜಯಕುಮಾರ್

ಮೈಸೂರು,ಜೂ.20: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಮೀನು ಖರೀದಿಗೆ ಸಂಬಂಧಿಸಿದಂತೆ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದರು ಎಂದು ಆರೋಪಿಸಿ ಒಬ್ಬರು ನ್ಯಾಯಾಲಯದ ಮೊರೆ ಹೋಗಿ ಎಫ್‍ಐಆರ್ ದಾಖಲಿಸುವಂತೆ ಮಾಡಿರುವುದು ಸಿದ್ದರಾಮಯ್ಯ ಅವರ ತೇಜೋವಧೆಗೆ ನಡೆಸಿದ ಯತ್ನವಾಗಿದ್ದು, ಆರೋಪಕ್ಕೆ ಯಾವುದೇ ದಾಖಲೆಗಳಿಲ್ಲ ಎಂದು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ಆರೋಪಿಸಿದರು.

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಕಾಂಗ್ರೆಸ್ ಸಮಿತಿಯ ಕಾನೂನು ಘಟಕದ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸಿಎಂ ಅಧಿಕಾರದಿಂದ ಇಳಿದ ಕೂಡಲೇ ಅವರ ಹೆಸರು ಕೆಡಿಸಲು ತಂಡವೊಂದು ಕೆಲಸ ಮಾಡುತ್ತಿದ್ದು, ಅದರ ಭಾಗವೇ ಅವರು ಭೂ ಅಕ್ರಮ ಎಸಗಿದ್ದಾರೆಂದು ಮಾಡಿರುವ ಆರೋಪವಾಗಿದೆ ಎಂದು ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆಗೊಳಿಸಿದ ಅವರು, ಇದು ವಿರೋಧಿ ತಂಡವೊಂದರ ಬೋಗಸ್ ಕುತಂತ್ರವಾಗಿದ್ದು, ಜೊತೆಗೆ ಹಿನಕಲ್ ಬಳಿಯ ಸರ್ವೆ ನಂ.70/4 ಬಿ ಭೂಮಿಯನ್ನು ಸಿದ್ದರಾಮಯ್ಯ ಅವರು ಖರೀದಿಸಿದ್ದರೆಂಬ ಬಗ್ಗೆ ಯಾವುದೇ ಅಕ್ರಮಗಳಿಲ್ಲ. ಅದರ ಮಾಲೀಕರಾಗಿದ್ದ ಸಾಕಮ್ಮ, ಅಣ್ಣಯ್ಯ, ಸುನಂದ ಎಂಬುವವರು ಈ ಹಿಂದೆಯೇ ತಮ್ಮ ಜಮೀನನ್ನು ಮುಡಾ ಸ್ವಾಧೀನ ಪಡಿಸಿಕೊಂಡಿದೆಯೇ ಎಂದು ಸ್ವಇಚ್ಛೆಯಿಂದ ಮುಡಾಕ್ಕೆ ಅರ್ಜಿ ಸಲ್ಲಿಸಿ, ಸ್ವಾಧೀನವಾಗಿಲ್ಲ ಎಂಬ ಉತ್ತರ ಪಡೆದಿದ್ದರು. ಇದೆಲ್ಲ ಗತಿಸಿ ಬಹಳ ವರ್ಷಗಳ ನಂತರವೇ ಸಿದ್ದರಾಮಯ್ಯ ಅವರು ಸಾಕಮ್ಮ ಅವರಿಂದ ಹತ್ತು ಗುಂಟೆ ಜಮೀನು ಖರೀದಿಸಿದ್ದು, ತಾವೇ ನಿಂತು ಅಲಿನೇಷನ್ ಮಾಡಿಸಿದ್ದರು ಎಂದು ಅವರ ವಿರುದ್ಧದ ಆರೋಪ ಸತ್ಯಕ್ಕೆ ದೂರವಾದುದಾಗಿದೆ ಎಂದರು.

ಅಲ್ಲದೆ, ತಾವು ಖರೀದಿಸಿದಷ್ಟೇ ಜಾಗದಲ್ಲಿ ಅವರು ಮನೆ ಕಟ್ಟಿಕೊಂಡು, ಬಳಿಕ ಚುನಾವಣೆ ವೆಚ್ಚಕ್ಕಾಗಿ 2003ರಲ್ಲಿಯೇ ಜಾಗ ಮಾರಾಟ ಸಹಾ ಮಾಡಿದ್ದಾರೆ. ಇದಲ್ಲದೆ, ಯಾವುದೇ ಪ್ರಕರಣ ನ್ಯಾಯಾಲಯದ ವ್ಯಾಪ್ತಿಗೆ ಬರಲು ಇರುವ ಕಾಲಮಿತಿ ಮೀರಿದ ಬಳಿಕ ಈಗ ಅವರ ವಿರುದ್ಧ ನ್ಯಾಯಾಲಯಕ್ಕೆ ಹೋಗಿದ್ದು, ಈ ರೀತಿ ಮಾಡಿರುವವರ ವಿರುದ್ಧ ಮಾನಹಾನಿ ಕೇಸ್ ಹಾಕಬೇಕೇ ಎಂಬ ಬಗ್ಗೆ ಚಿಂತಿಸುವುದರ ಜೊತೆಗೆ, ಈಗ ನ್ಯಾಯಾಲಯ ನೀಡಿರುವ ಆದೇಶ ಪ್ರಶ್ನಿಸುವುದಾಗಿ ತಿಳಿಸಿದರು.

ಕಾನೂನು ಘಟಕದ ಪದಾಧಿಕಾರಿಗಳಾದ ಪಾಳೆಯ ಸುರೇಶ್, ನಂದೀಶ್, ರಘು, ಚರಣ್, ಕಾಂತರಾಜ್, ತಿಮ್ಮಯ್ಯ  ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X