ಉಡುಪಿ: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
ಉಡುಪಿ, ಜೂ.20: ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮೂಲಕ ಗಮನ ಸೆಳೆಯುವ ರೈತ ಸಮುದಾಯದ ಪರಿಣಿತರಿಗೆ ಕೃಷಿ ಇಲಾಖೆಯಿಂದ ಕೃಷಿ ಪಂಡಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಕೃಷಿ ಪಂಡಿತ ಪ್ರಶಸ್ತಿಯಲ್ಲಿ ಭಾಗವಹಿಸಲು ಇಚ್ಛಿಸುವವರು ಉಡುಪಿ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ/ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರಬೇಕು. ಭಾಗವಹಿಸುವವರ ಸಂಶೋಧನೆ/ಸಾಧನೆಗಳು ಮೂಲ ಸ್ವರೂಪದಾಗಿದ್ದು, ಬೇರೆಯವರ ಸಾಧನೆ ಗಿಂತ ವಿಭಿನ್ನವಾಗಿರಬೇಕು. ಅಲ್ಲದೇಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು.
ಕೃಷಿ ಪಂಡಿತ ಪ್ರಶಸ್ತಿಯ ಬಹುಮಾನದ ವಿವರ: ಪ್ರಥಮ ರೂ.1,25,000, ದ್ವಿತೀಯ ರೂ.1,00,000, ತೃತೀಯ ರೂ.75,000ಹಾಗೂ ಉದಯೋನ್ಮುಖ ಕೃಷಿ ಪಂಡಿತ ರೂ.50,000. ಈ ಹಿಂದೆ ಕೃಷಿ ಪಂಡಿತ ಪ್ರಶಸ್ತಿ ಪಡೆದವರು ಹಾಗೂ ಇದೇ ಸಾಧನೆಗಾಗಿ ಕೇಂದ್ರ ಅಥವಾ ರಾಜ್ಯ ಸರಕಾರದಿಂದ ಸಮನಾಂತರ ಪ್ರಶಸ್ತಿ ಪಡೆದವರು ಮತ್ತೆ ಸ್ಪರ್ಧಿಸುವಂತಿಲ್ಲ.
ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸುವಂತೆ ಉಡುಪಿ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







