ಉಡುಪಿ; ಅಖಿಲ ಕರ್ನಾಟಕ ಕನ್ನಡ ವಿಜ್ಞಾನ ಸಮ್ಮೇಳನ
ಉಡುಪಿ, ಜೂ.20: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯ ಸಹಯೋಗದಲ್ಲಿ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಅಖಿಲ ಕರ್ನಾಟಕ 11ನೇ ಕನ್ನಡ ವಿಜ್ಞಾನ ಸಮ್ಮೇಳನವನ್ನು ಜೂ.29,30 ಮತು್ತ ಜು.1ರಂದು ಆಯೋಜಿಸಲಾಗುತ್ತದೆ.
ರಾಜ್ಯದ ಹೆಸರಾಂತ ವಿಜ್ಞಾನಿಗಳು, ಶಿಕ್ಷಣತಜ್ಞರು, ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ವಿಜ್ಞಾನಾಸಕ್ತರು ಒಂದೆಡೆ ಸೇರಿ ವಿಚಾರ ವಿನಿಮಯ ಕೈಗೊಳ್ಳುವ ವೇದಿಕೆ ಇದಾಗಿದ್ದು, ಸಮ್ಮೇಳನದಲ್ಲಿ ಕೃಷಿ, ಆರೋಗ್ಯ, ವಿಜ್ಞಾನ ಸಾಹಿತ್ಯ ಸೇರಿದಂತೆ ಹಲವು ವಿಷಯಗಳ ಮೇಲೆ ಗೋಷ್ಠಿಗಳನ್ನು ಆಯೋಜಿಸಲಾಗಿದೆ. ಮೂರು ದಿನಗಳ ಕಾಲ ನಡೆಯುವ ಈ ಸಮ್ಮೇಳನದಲ್ಲಿ ನಿಗದಿತ ಸಂಖ್ಯೆಯ ಪ್ರತಿನಿಧಿಗಳು ಭಾಗವಹಿಸಬಹುದಾಗಿದೆ.
ಸಮಾವೇಶದಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವವರು ನೋಂದಣಿ ಫಾರಂಗಳಿಗಾಗಿ ವಿಜ್ಞಾನ ಪರಿಷತ್ತಿನ ಸ್ಥಳೀಯ ಕಾರ್ಯಕಾರಿ ಸಮಿತಿ ಸದಸ್ಯರು, ತಮ್ಮ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಅಥವಾ ಕರಾವಿಪ ಕೇಂದ್ರ ಕಛೇರಿ ದೂರವಾಣಿ ಸಂಖ್ಯೆ:080-26718939/9008442557ನ್ನು ಸಂಪರ್ಕಿ ಸುವಂತೆ ಪರಿಷತ್ತಿನ ಗೌರವ ಕಾರ್ಯದರ್ಶಿ ಗಿರೀಶ್ ಬಿ.ಕ್ಲೇವಾಡ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.