Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟ್ ಬ್ಯಾನ್ ನಂತರ ಅತೀ ಹೆಚ್ಚು ಹಳೆ...

ನೋಟ್ ಬ್ಯಾನ್ ನಂತರ ಅತೀ ಹೆಚ್ಚು ಹಳೆ ನೋಟುಗಳು ಜಮೆಯಾದದ್ದು ಅಮಿತ್ ಶಾ ನಿರ್ದೇಶಕರಾಗಿರುವ ಬ್ಯಾಂಕ್ ನಲ್ಲಿ

ಆರ್ ಟಿಐ ವರದಿಯಲ್ಲಿ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ21 Jun 2018 7:16 PM IST
share
ನೋಟ್ ಬ್ಯಾನ್ ನಂತರ ಅತೀ ಹೆಚ್ಚು ಹಳೆ ನೋಟುಗಳು ಜಮೆಯಾದದ್ದು ಅಮಿತ್ ಶಾ ನಿರ್ದೇಶಕರಾಗಿರುವ ಬ್ಯಾಂಕ್ ನಲ್ಲಿ

#ಕೇವಲ 5 ದಿನಗಳಲ್ಲಿ 745 ಕೋಟಿ ರೂ. ಜಮೆ!

ಹೊಸದಿಲ್ಲಿ, ಜೂ.21: ನವೆಂಬರ್ 8, 2016ರಂದು ನೋಟು ಅಮಾನ್ಯಗೊಂಡ ನಂತರ ಹಳೆಯ 500 ಹಾಗು 1000 ರೂ. ನೋಟುಗಳು ಅತೀ ಹೆಚ್ಚಿನ ಪ್ರಮಾಣದಲ್ಲಿ ಜಿಲ್ಲಾ ಸಹಕಾರಿ ಬ್ಯಾಂಕ್ ಗಳ ಪೈಕಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ನಿರ್ದೇಶಕರಾಗಿರುವ ಜಿಲ್ಲಾ ಸಹಕಾರಿ ಬ್ಯಾಂಕ್ ನಲ್ಲಿ ಜಮೆಯಾಗಿದೆ ಎಂದು ಆರ್ ಟಿಐ ವರದಿಯಿಂದ ಬಹಿರಂಗಗೊಂಡಿದೆ ಎಂದು ಐಎಎನ್ ಎಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ಬಗ್ಗೆ ಮುಂಬೈನ ಕಾರ್ಯಕರ್ತರೊಬ್ಬರು ಅರ್ಜಿ ಸಲ್ಲಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ನೋಟು ಅಮಾನ್ಯ ನಿರ್ಧಾರ ಘೋಷಿಸಿದ ಕೇವಲ ಐದೇ ದಿನಗಳಲ್ಲಿ ಅಮಿತ್ ಶಾ ನಿರ್ದೇಶಕರಾಗಿರುವ ಅಹ್ಮದಾಬಾದ್ ಜಿಲ್ಲಾ ಸಹಕಾರಿ ಬ್ಯಾಂಕ್ ನಲ್ಲಿ 745.59 ಕೋಟಿ ರೂ.ಗಳು ಜಮೆಯಾಗಿದೆ. ನೋಟ್ ಅಮಾನ್ಯ ನಿರ್ಧಾರ ಘೋಷಣೆಯಾದ ಕೆಲ ದಿನಗಳಲ್ಲಿ ಅಂದರೆ ನವೆಂಬರ್ 14ರ ನಂತರ ಜಿಲ್ಲಾ ಸಹಕಾರಿ ಬ್ಯಾಂಕ್ ಗಳು ಅಮಾನ್ಯಗೊಂಡ ನೋಟುಗಳನ್ನು ಸ್ವೀಕರಿಸುವುದನ್ನು ನಿಷೇಧಿಸಲಾಯಿತು.

ಅಮಿತ್ ಶಾ ಅವರೇ ಬ್ಯಾಂಕ್ ನಿರ್ದೇಶಕರಾಗಿದ್ದಾರೆ ಎಂದು ಬ್ಯಾಂಕ್ ವೆಬ್ ಸೈಟ್ ತಿಳಿಸುತ್ತದೆ. 2000ದಲ್ಲಿ ಅವರು ಬ್ಯಾಂಕ್ ಚೇರ್ ಮೆನ್ ಆಗಿದ್ದರು. 2017ರ ಮಾರ್ಚ್ 31ರ ವೇಳೆಗೆ ಅಹ್ಮದಾಬಾದ್ ಜಿಲ್ಲಾ ಬ್ಯಾಂಕ್ ನ ಡೆಪಾಸಿಟ್ 5.050 ಕೋಟಿ ರೂ.ಗಳಾಗಿದ್ದು, 2016-17ರಲ್ಲಿ ಬ್ಯಾಂಕ್ ನ ನಿವ್ವಳ ಲಾಭ 14.31 ಕೋಟಿ ರೂ.ಗಳಾಗಿದೆ.

ಅಹ್ಮದಾಬಾದ್ ಬ್ಯಾಂಕ್ ನ ನಂತರದ ಸ್ಥಾನದಲ್ಲಿರುವ ರಾಜ್ ಕೋಟ್ ಜಿಲ್ಲಾ ಸಹಕಾರಿ ಬ್ಯಾಂಕ್ ಗೆ 693.19 ಕೋಟಿ ರೂ.ಗಳು ಜಮೆಯಾಗಿದ್ದು, ಗುಜರಾತ್ ಸಿಎಂ ವಿಜಯ್ ರೂಪಾನಿ ಸಂಪುಟದ ಸಚಿವರಾಗಿರುವ ಜಯೇಶ್ ಭಾಯ್ ವಿಠಲ್ ಭಾಯ್ ರಾದಾದಿಯಾ ಇದರ ಚೇರ್ ಮೆನ್ ಆಗಿದ್ದಾರೆ. ಕುತೂಹಲದ ವಿಚಾರವೆಂದರೆ ರಾಜ್ ಕೋಟ್ ಗುಜರಾತ್ ಬಿಜೆಪಿ ರಾಜಕೀಯ ಪ್ರಮುಖ ಕೇಂದ್ರವಾಗಿದೆ. 2001ರಲ್ಲಿ ಪ್ರಧಾನಿ ಮೋದಿ ಪ್ರಥಮ ಬಾರಿಗೆ ಇಲ್ಲಿಂದಲೇ ಶಾಸಕನಾಗಿ ಆಯ್ಕೆಯಾಗಿದ್ದರು. ರಾಜ್ ಕೋಟ್ ಸಹಕಾರಿ ಬ್ಯಾಂಕ್ ಜಮೆಯಾದ ಮೊತ್ತವು ಗುಜರಾತ್ ರಾಜ್ಯ ಸಹಕಾರಿ ಬ್ಯಾಂಕ್ ಗಿಂತಲೂ ಅಧಿಕವಾಗಿದ್ದು, ರಾಜ್ಯ ಸಹಕಾರಿ ಬ್ಯಾಂಕ್ ಗೆ ಕೇವಲ 1.11 ಕೋಟಿ ರೂ. ಜಮೆಯಾಗಿತ್ತು ಎನ್ನುವುದೂ ವರದಿಯಿಂದ ಬಹಿರಂಗಗೊಂಡಿದೆ.

"ನಗದು ನಿಷೇಧಿಸಿದ ಬಳಿಕ ರಾಜ್ಯ ಸಹಕಾರಿ ಬ್ಯಾಂಕ್‌ಗಳು (ಎಸ್‌ಸಿಬಿಗಳು) ಹಾಗೂ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳ (ಡಿಸಿಸಿಬಿಗಳು)ಲ್ಲಿ ಜಮೆಯಾದ ಮೊತ್ತವನ್ನು ಆರ್‌ಟಿಐ ಮೊದಲ ಬಾರಿಗೆ ಬಹಿರಂಗಗೊಳಿಸಿ ದಿಗ್ಭ್ರಮೆ ಉಂಟು ಮಾಡಿದೆ’’ಎಂದು ಈ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಆರ್‌ಟಿಐ ಕಾರ್ಯಕರ್ತ ಮನೋಹರಂಜನ್ ಎಸ್. ರಾಯ್ ಹೇಳಿದ್ದಾರೆ.

ಈ ಆರ್‌ಟಿಐ ಮಾಹಿತಿಯನ್ನು ನಬಾರ್ಡ್‌ನ ಚೀಫ್ ಜನರಲ್ ಮ್ಯಾನೇಜರ್ ಹಾಗೂ ಮೇಲ್ಮನವಿ ಪ್ರಾಧಿಕಾರ ಎಸ್. ಸರವಣವೇಲ್ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X