ರಾಷ್ಟ್ರ ಪ್ರಶಸ್ತಿ: ಶಿಕ್ಷಕರಿಂದ ಅರ್ಜಿ ಆಹ್ವಾನ
ಉಡುಪಿ, ಜೂ.21: 2017-18ನೇ ಸಾಲಿಗೆ ರಾಷ್ಟ್ರಪ್ರಶಸ್ತಿಗೆ ಉತ್ತಮ ಶಿಕ್ಷಕರನ್ನು ಆಯ್ಕೆ ಮಾಡುವ ಸಲುವಾಗಿ ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಪರಿಷ್ಕೃತ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಅರ್ಹ ಆಸಕ್ತ ಶಿಕ್ಷಕರಿಂದ ಆನ್ಲೈನ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನವಾಗಿದೆ. ಆಸಕ್ತ ಶಿಕ್ಷಕರು ಹಾಗೂ ಈಗಾಗಲೇ ಜಿಲ್ಲಾ ಹಂತದಿಂದ ಆಯ್ಕೆಯಾಗಿ ಆಯುಕ್ತರ ಕಚೇರಿಗೆ ಪ್ರಸ್ತಾವನೆ ಸಲ್ಲಿಸಿರುವ ಶಿಕ್ಷಕರು ಸಹ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ಹಾಗೂ ಮಾಹಿತಿಗಾಗಿ ಎಂಹೆಚ್ಆರ್ಡಿ ಇಲಾಖಾ ವೆಬ್ಸೈಟ್-www.nationalawardtoteachers.com-ಅನ್ನು ಸಂಪರ್ಕಿಸುವಂತೆ ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





