ಸಚಿವ ಜಿ.ಟಿ.ದೇವೇಗೌಡರಿಗೆ ಇನ್ನೆರಡು ದಿನಗಳಲ್ಲಿ ಬೇರೆ ಖಾತೆ ಹಂಚಿಕೆ: ಸಚಿವ ಸಾ.ರಾ.ಮಹೇಶ್
ಮೈಸೂರು,ಜೂ.21: ಆರೋಗ್ಯದ ಸಮಸ್ಯೆ ಇದ್ದ ಕಾರಣ ಸಚಿವ ಜಿ.ಟಿ.ದೇವೇಗೌಡ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿಲ್ಲ ಎಂದು ಸಚಿವ ಸಾ.ರಾ.ಮಹೇಶ್ ತಿಳಿಸಿದರು.
ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಗುರುವಾರ ಭಾಗವಹಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಚಿವ ಜಿ.ಟಿ.ದೇವೇಗೌಡರಿಗೆ ಬೇರೆ ಖಾತೆಯನ್ನು ಕೊಡುತ್ತೇವೆಂದು ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ಆರೋಗ್ಯದ ಸಮಸ್ಯೆ ಇದ್ದ ಕಾರಣ ಸಚಿವ ಜಿ.ಟಿ.ದೇವೇಗೌಡ ಇಂದಿನ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ. ಇನ್ನೆರಡು ದಿನಗಳಲ್ಲಿ ಸಾರ್ವಜನಿಕರ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಖಾತೆ ಬದಲಾವಣೆಯ ಬಗ್ಗೆ ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿಗಳು ನಿರ್ಧಾರ ಮಾಡುತ್ತಾರೆ ಎಂದರು.
ಮೈಸೂರಿನಲ್ಲಿ ನಡೆದ ಯೋಗ ಕಾರ್ಯಕ್ರಮಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ 20 ಲಕ್ಷ ನೆರವನ್ನು ನೀಡುವ ಮೂಲಕ ಯೋಗ ಪಟುಗಳಿಗೆ ಪ್ರೋತ್ಸಾಹ ಕೊಟ್ಟಿದ್ದೇವೆ. ಕರ್ನಾಟಕದಲ್ಲಿರುವ ಪ್ರವಾಸಿ ಕೇಂದ್ರಗಳಿಗೆ ಹೊರ ರಾಜ್ಯದಿಂದ ಬರುವ ಪ್ರವಾಸಿಗರಿಗೆ ಯೋಗಾಭ್ಯಾಸ ಕೇಂದ್ರ ಪ್ರಾರಂಭಿಸಲು ಮುಖ್ಯಮಂತ್ರಿಗಳು ಈಗಾಗಲೇ ಸೂಚನೆ ನೀಡಿದ್ದಾರೆ ಎಂದರು.