Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಮಹಿಳಾ ನಿಷ್ಠ ಬರಹಗಳು....

ಮಹಿಳಾ ನಿಷ್ಠ ಬರಹಗಳು....

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ22 Jun 2018 12:03 AM IST
share
ಮಹಿಳಾ ನಿಷ್ಠ ಬರಹಗಳು....

 ಚಂದ್ರಕಲಾ ನಂದಾವರ ಅವರು ಲೇಖಕಿಯಾಗಿ, ಕವಯಿತ್ರಿಯಾಗಿ, ಸಂಘಟಕಿಯಾಗಿ ಈಗಾಗಲೇ ನಾಡಿನಾದ್ಯಂತ ಗುರುತಿಸಿಕೊಂಡವರು. ತಮ್ಮ ಮಹಿಳಾನಿಷ್ಠ ಬರಹಗಳಿಂದ ಅವರು ಗಮನಸೆಳೆದಿದ್ದಾರೆ. ‘ಹೊಸ್ತಿಲಿನಿಂದೀಚೆಗೆ’ ಕೃತಿಯ ಬಳಿಕ ಇದೀಗ ಅವರು ‘ಹೆಣ್ಣಿಗೆ ವರ್ತಮಾನವಿಲ್ಲವೆ’ ಕೃತಿಯನ್ನು ಹೊರತಂದಿದ್ದಾರೆ. ಕೃತಿಯ ಹೆಸರೇ ಹೇಳುವಂತೆ ಈ ಕೃತಿ, ಮಹಿಳಾ ಕೇಂದ್ರಿತವಾಗಿದೆ. ಹೆಣ್ಣಿನ ಕಣ್ಣಲ್ಲಿ ಸಮಾಜವನ್ನು ನೋಡಿದ್ದು ಮಾತ್ರವಲ್ಲ, ಮಹಿಳೆಯರ ಬದುಕನ್ನು ಅರ್ಥೈಸುವ ಪ್ರಯತ್ನವನ್ನು ಈ ಕೃತಿಯಲ್ಲಿ ಮಾಡಲಾಗಿದೆ.ಮೊದಲ ಎರಡು ಲೇಖನಗಳು ಅಖಿಲ ಕರ್ನಾಟಕ ಲೇಖಕಿಯರ ಸಂಘದ ಸಮ್ಮೇಳನಕ್ಕೆ ಸಂಬಂಧಪಟ್ಟುದಾದರೆ, ಉಳಿದುದು ಮಹಿಳೆಗೆ ಸಂಬಂಧಿಸಿ ಸಾಂದರ್ಭಿಕ ಲೇಖನಗಳು. ಇಲ್ಲಿ ಒಟ್ಟು 18 ಲೇಖನಗಳಿವೆ. ‘ಮಹಿಳಾ ಸ್ವಾತಂತ್ರ ಮತ್ತು ಗಾಂಧೀಜಿ’ ಲೇಖನದಲ್ಲಿ ಗಾಂಧೀಜಿ ಹೇಗೆ ಮಹಿಳಾ ಸ್ವಾತಂತ್ರವನ್ನು ಕಂಡುಕೊಂಡಿದ್ದರು ಎನ್ನುವುದನ್ನು ವಿಶ್ಲೇಷಿಸುತ್ತಾರೆ. ಸ್ವಾತಂತ್ರ ಪೂರ್ವ ಮಹಿಳೆಯ ಸ್ವಾತಂತ್ರದ ಕಲ್ಪನೆ ಮತ್ತು ಇತ್ತೀಚಿನ ಸ್ವಾತಂತ್ರದ ಕಲ್ಪನೆಗಳನ್ನು ತುಲನೆ ಮಾಡುತ್ತಾ, ಭಾರತೀಯ ಮಹಿಳೆಯು ಸ್ವಾತಂತ್ರ, ಸಮಾನತೆಯೊಂದಿಗೆ ತನ್ನ ಅಸ್ಮಿತೆ ಹಾಗೂ ಆತ್ಮಗೌರವವನ್ನು ಕಾಪಾಡಿಕೊಳ್ಳಬೇಕು ಎಂದು ಅಭಿಪ್ರಾಯಪಡುತ್ತಾರೆ. ಹಾಗೆಯೇ ಸ್ವಾತಂತ್ರ ಮತ್ತು ಸ್ವಚ್ಛಂದತೆಯ ನಡುವಿನ ಗೆರೆಯನ್ನೂ ಅವರು ಈ ಲೇಖನದಲ್ಲಿ ಗುರುತಿಸುತ್ತಾರೆ. ಸಾರಾ ಅಬೂಬಕರ್ ಅವರ ಚಂದ್ರಗಿರಿಯ ತೀರದಲ್ಲಿ ಕಾದಂಬರಿಯನ್ನು ವಿಮರ್ಶಿಸುತ್ತಾ, ಮುಸ್ಲಿಮ್ ಹೆಣ್ಣು ಮಕ್ಕಳ ಬದುಕಿನ ದುರಂತಗಳನ್ನು ಚರ್ಚಿಸುತ್ತಾರೆ. ಒಬ್ಬ ಮುಸ್ಲಿಮ್ ಲೇಖಕಿ ಎದುರಿಸಬೇಕಾದ ಸವಾಲುಗಳನ್ನೂ ಈ ಕೃತಿಯಲ್ಲಿ ಚರ್ಚಿಸುತ್ತಾರೆ. ಮದುವೆ ಹೇಗೆ ಪುರುಷನ ಸರ್ವಾಧಿಕಾರಿತನದಿಂದ ಹೆಣ್ಣಿನ ಬದುಕನ್ನು ನಿಯಂತ್ರಿಸುತ್ತಾ ಅಂತಿಮವಾಗಿ ಹೆಣ್ಣಿನ ವ್ಯಕ್ತಿತ್ವವನ್ನೇ ನಾಶ ಮಾಡಲು ಮುಂದಾಗುತ್ತದೆ ಎನ್ನುವುದನ್ನು ಈ ಲೇಖನ ಹೇಳುತ್ತದೆ. ಸಂಚಿಯ ಹೊನ್ನಮ್ಮಳ ಹದಿಬದೆಯ ಧರ್ಮವನ್ನು ‘ತನ್ನೊಡಲಿಗೆ ತನ್ನ ಮನವ ಕಾಪಿಡುವುದು’ ಎಂಬ ಲೇಖನದಲ್ಲಿ ವಿಶ್ಲೇಷಿಸಿದ್ದಾರೆ. ಆಕೆಯ ಮಾತುಗಳ ಮಿತಿಗಳನ್ನು ಉಲ್ಲೇಖಿಸುತ್ತಲೇ ಅದು ಹೆಣ್ಣನ್ನು ನೋಡಿದ ರೀತಿಯನ್ನು ಲೇಖಕಿ ವಿವರಿಸುತ್ತಾರೆ. ‘ಪ್ರಸ್ತುತ ಸಮಾಜದಲ್ಲಿ ಯುವತಿಯರು’ ಲೇಖನದಲ್ಲಿ ಆಧುನಿಕ ಮಹಿಳೆ ಎದುರಿಸುವ ಸವಾಲನ್ನು ವಿಶ್ಲೇಷಿಸುತ್ತಾರೆ. ಕೌಟುಂಬಿಕವಾಗಿ, ಸಾಮಾಜಿಕವಾಗಿ ಆಧುನಿಕ ಯುವತಿಯರು ಎದುರಿಸುತ್ತಿರುವ ಸವಾಲು ಮತ್ತು ಅದನ್ನು ನಿಭಾಯಿಸಬಹುದಾದ ದಾರಿ ಈ ಲೇಖನದಲ್ಲಿದೆ. ಮರ್ಯಾದಾ ಹತ್ಯೆ, ಮಹಿಳೆಯ ಆತ್ಮಗೌರವ, ಮಹಿಳಾ ಯಕ್ಷಗಾನ, ತುಳು ಸಂಸ್ಕೃತಿಯಲ್ಲಿ ಮಹಿಳೆ, ಕರಾವಳಿಯ ಮಾತೃಮೂಲೀಯ ಸಂಸ್ಕೃತಿಗಳ ಸ್ಥಿತ್ಯಂತರಗಳು ಇಲ್ಲಿರುವ ಇನ್ನಿತರ ಮುಖ್ಯ ಲೇಖನಗಳು. ಕೊನೆಯ ಲೇಖನದಲ್ಲಿ ಗೌರಿ ಲಂಕೇಶ್ ಅವರನ್ನು ಸ್ಮರಿಸಿದ್ದಾರೆ.

ಹೇಮಾಂಶು ಪ್ರಕಾಶನ ಹೊರತಂದಿರುವ ಈ ಕೃತಿಯ ಒಟ್ಟು ಪುಟಗಳು 130. ಮುಖಬೆಲೆ 125 ರೂ. ಆಸಕ್ತರು 94802 65441 ದೂರವಾಣಿಯನ್ನು ಸಂಪರ್ಕಿಸಬಹುದು.

share
-ಕಾರುಣ್ಯಾ
-ಕಾರುಣ್ಯಾ
Next Story
X