Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಶ್ಮೀರ ಕುರಿತು ಮುಷರ್ರಫ್ ಹೇಳಿಕೆಗೆ...

ಕಾಶ್ಮೀರ ಕುರಿತು ಮುಷರ್ರಫ್ ಹೇಳಿಕೆಗೆ ಕಾಂಗ್ರೆಸ್ ನಾಯಕ ಸೋಝ್ ಬೆಂಬಲ: ಬಿಜೆಪಿ ಖಂಡನೆ

ವಾರ್ತಾಭಾರತಿವಾರ್ತಾಭಾರತಿ22 Jun 2018 7:43 PM IST
share
ಕಾಶ್ಮೀರ ಕುರಿತು ಮುಷರ್ರಫ್ ಹೇಳಿಕೆಗೆ ಕಾಂಗ್ರೆಸ್ ನಾಯಕ ಸೋಝ್ ಬೆಂಬಲ: ಬಿಜೆಪಿ ಖಂಡನೆ

ಹೊಸದಿಲ್ಲಿ,ಜೂ.22: ಕಾಶ್ಮೀರಿಗಳ ಮೊದಲ ಆಯ್ಕೆಯು ಸ್ವಾತಂತ್ರ್ಯವಾಗಿದೆ ಎಂಬ ಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೇಝ್ ಮುಷರ್ರಫ್ ಅವರ ಹೇಳಿಕೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಸೈಫುದ್ದೀನ್ ಸೋಝ್ ಅವರು ಬೆಂಬಲಿಸಿದ್ದು,ಇದನ್ನು ಬಿಜೆಪಿ ಕಟುವಾಗಿ ಟೀಕಿಸಿದೆ.

ಕಾಶ್ಮೀರಿಗಳಿಗೆ ತಮ್ಮಿಚ್ಛೆಯಂತೆ ನಡೆದುಕೊಳ್ಳಲು ಮುಕ್ತ ಅವಕಾಶ ನೀಡಿದರೆ ಅವರು ಸ್ವಾತಂತ್ರ್ಯವನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ ಎಂದು ಮುಷರ್ರಫ್ ಹೇಳಿದ್ದರು. ವಾಸ್ತವದಲ್ಲಿ ಅವರ ಹೇಳಿಕೆ ಇಂದಿಗೂ ಸರಿಯಾಗಿದೆ ಎಂದು ಸೋಝ್ ‘ಕಾಶ್ಮೀರ:ಗ್ಲಿಂಪ್ಸ್‌ಸ್ ಆಫ್ ಹಿಸ್ಟರಿ ಆ್ಯಂಡ್ ದಿ ಸ್ಟೋರಿ ಆಫ್ ಸ್ಟ್ರಗಲ್’ನಲ್ಲಿ ಬರೆದಿದ್ದಾರೆ.

ಕಾಶ್ಮೀರಿಗಳು ಪಾಕಿಸ್ತಾನದೊಂದಿಗೆ ವಿಲೀನವನ್ನು ಬಯಸುವುದಿಲ್ಲ,ಸ್ವಾತಂತ್ರ್ಯ ಅವರ ಮೊದಲ ಆಯ್ಕೆಯಾಗಲಿದೆ ಎಂದು ಮುಷರ್ರಫ್ ಹೇಳಿದ್ದರು. ಆ ಹೇಳಿಕೆ ಅಂದಿಗೂ ಇಂದಿಗೂ ಸತ್ಯವಾಗಿದೆ. ತಾನೂ ಅದನ್ನೇ ಹೇಳುತ್ತೇನೆ, ಆದರೆ ಅದು ಅಸಾಧ್ಯ ಎನ್ನುವುದು ತನಗೆ ಗೊತ್ತು ಎಂದು ಮಾಜಿ ಕೇಂದ್ರ ಸಚಿವರಾಗಿರುವ ಸೋಝ್ ಹೇಳಿದ್ದನ್ನು ಸುದ್ದಿಸಂಸ್ಥೆಯು ಶುಕ್ರವಾರ ಉಲ್ಲೇಖಿಸಿದೆ.

ಸೋಝ್ ಪಾಕಿಸ್ತಾನಕ್ಕೆ ಹೋಗುವುದು ಒಳ್ಳೆಯದು ಎಂದು ಹೇಳಿದ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ,1991ರಲ್ಲಿ ಜೆಕೆಎಲ್‌ಎಫ್ ಸೋಝ್‌ರ ಪುತ್ರಿಯನ್ನು ಅಪಹರಿಸಿದ್ದಾಗ ಕೇಂದ್ರ ಸಚಿವರಾಗಿದ್ದ ಅವರು ಕೇಂದ್ರ ಸರಕಾರದ ಅಧಿಕಾರದ ಲಾಭವನ್ನು ಪಡೆದುಕೊಂಡಿದ್ದರು. ಇಂತಹವರಿಗೆ ನೆರವಾಗುವುದರಿಂದ ಉಪಯೋಗವಿಲ್ಲ. ಇಲ್ಲಿ ಉಳಿಯಲು ಬಯಸುವವರು ಸಂವಿಧಾನಕ್ಕೆ ಬದ್ಧರಾಗಿರಬೇಕು. ಅವರು ಮುಷರ್ರಫ್‌ರನ್ನು ಇಷ್ಟ ಪಡುತ್ತಾರಾದರೆ ಅವರಿಗೆ ಪಾಕಿಸ್ತಾನಕ್ಕೆ ‘ವನ್ ವೇ ಟಿಕೆಟ್’ನ್ನು ನಾವು ನೀಡುತ್ತೇವೆ ಎಂದು ಕುಟುಕಿದರು.

ಸೋಝ್‌ರ ಹೇಳಿಕೆಯನ್ನು ಹೊಣೆಗೇಡಿತನದ್ದು ಎಂದು ಹೇಳಿದ ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಕ್ವಿ ಅವರು, ಕಾಶ್ಮೀರವೇ ಒಂದು ಮುಖ್ಯ ಸಮಸ್ಯೆಯಾಗಿದೆ. ಪ್ರತ್ಯೇಕತಾವಾದಿಗಳು ಮತ್ತು ಭಯೋತ್ಪಾದಕರು ಕಾಶ್ಮೀರದ ಬೆಳವಣಿಗೆ,ಅಭಿವೃದ್ಧಿ ಮತ್ತು ಶಾಂತಿಯನ್ನು ಕಿತ್ತುಕೊಂಡಿದ್ದಾರೆ. ಇಂತಹ ಶಕ್ತಿಗಳನ್ನು ವಿಫಲಗೊಳಿಸಲು ನಾವೆಲ್ಲ ಒಂದಾಗಬೇಕು. ಪ್ರತ್ಯೇಕತಾವಾದಿಗಳು ಮತ್ತು ಭಯೋತ್ಪಾದಕರಿಗೆ ಇಂಬು ನೀಡುವ ಇಂತಹ ಹೇಳಿಕೆಗಳನ್ನು ಯಾರೂ ನೀಡಬಾರದು ಎಂದರು.

ಸೋಝ್ ಅವರ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ವಿವರಣೆ ನೀಡಬೇಕು ಎಂದು ಶಿವಸೇನೆಯು ಆಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X