Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಬೆಳ್ಳಿತೆರೆಯಲ್ಲಿ ಪಾಣಿಪತ್ ಕದನ

ಬೆಳ್ಳಿತೆರೆಯಲ್ಲಿ ಪಾಣಿಪತ್ ಕದನ

ವಾರ್ತಾಭಾರತಿವಾರ್ತಾಭಾರತಿ23 Jun 2018 6:20 PM IST
share
ಬೆಳ್ಳಿತೆರೆಯಲ್ಲಿ ಪಾಣಿಪತ್ ಕದನ

ಬಾಲಿವುಡ್‌ನಲ್ಲಿ ಈಗ ಏನಿದ್ದರೂ ಬಿಗ್ ಬಜೆಟ್ ಚಿತ್ರಗಳ ಯುಗ. ಐತಿಹಾಸಿಕ ಕಥನಗಳನ್ನು ಆಧರಿಸಿದ ಚಿತ್ರಗಳತ್ತ ಬಿಟೌನ್ ನಿರ್ಮಾಪಕರು ಹೆಚ್ಚುಹೆಚ್ಚಾಗಿ ಆಸಕ್ತಿ ವಹಿಸುತ್ತಿದ್ದಾರೆ. 1761ರಲ್ಲಿ ನಡೆದ ಭೀಕರ ಪಾಣಿಪತ್ ಕದನದ ರೋಚಕ ಕಥೆಯನ್ನು ನಿರ್ದೇಶಕ ಅಶುತೋಷ್ ಗೋವಾರಿಕರ್ ಬೆಳ್ಳಿತೆರೆಯಲ್ಲಿ ತೋರಿಸಹೊರಟಿದ್ದಾರೆ.

ಇಷ್ಟಕ್ಕೂ ಅಶುತೋಷ್, ಐತಿಹಾಸಿಕ ಕಥಾವಸ್ತುವಿನ ಚಿತ್ರ ನಿರ್ದೇಶಿಸುತ್ತಿರುವುದು ಇದು ಹೊಸತೇನಲ್ಲ. ಈ ಮೊದಲು ಅವರು ಹೃತಿಕ್ ರೋಶನ್- ಐಶ್ವರ್ಯಾ ರೈ ಅಭಿನಯದ ಜೋಧಾ ಅಕ್ಬರ್ ಚಿತ್ರವನ್ನೂ ನಿರ್ದೇಶಿಸಿದ್ದರು. ಜೋಧಾ ಅಕ್ಬರ್ ಬಾಕ್ಸ್ ಅಫೀಸ್‌ನಲ್ಲಿ ಗೆಲ್ಲುವ ಜೊತೆಗೆ ಪ್ರೇಕ್ಷಕರಿಂದಲೂ ಮುಕ್ತಕಂಠದ ಪ್ರಶಂಸೆ ಪಡೆದಿತ್ತು.

ಪಾಣಿಪತ್ ಚಿತ್ರವು ಮರಾಠ ಸೇನೆ ಹಾಗೂ ಮುಹಮ್ಮದ್ ಶಾ ಅಬ್ದಾಲಿ ನೇತೃತ್ವದ ಸೈನ್ಯಗಳ ನಡುವೆ ನಡೆದ ಭೀಕರ ಕದನದ ರೋಚಕ ಕಥಾವಸ್ತುವನ್ನು ಹೊಂದಿದೆ. ಭಾರೀ ವೆಚ್ಚದಲ್ಲಿ ತಯಾರಾಗಲಿರುವ ಪಾಣಿಪತ್‌ನ ಮುಖ್ಯಪಾತ್ರಗಳಿಗೆ ಅರ್ಜುನ್‌ಕಪೂರ್. ಸಂಜಯ್‌ದತ್ ಹಾಗೂ ಕೃತಿ ಸನೂನ್ ನಟಿಸಲಿದ್ದಾರೆ. ಅಂದಹಾಗೆ ಅಶುತೋಷ್ ಅವರು ಮೂವತ್ತು ವರ್ಷಗಳ ಹಿಂದೆ ತೆರೆಕಂಡ ನಾಮ್ ಚಿತ್ರದಲ್ಲಿ ಸಂಜಯ್‌ದತ್ ಜೊತೆ ನಟಿಸಿದ್ದರು. ಅದೊಂದು ಅವಿಸ್ಮರಣೀಯ ಅನುಭವವಾಗಿತ್ತು ಎಂದು ಸ್ಮರಿಸುವ ಗೋವಾರಿಕರ್, ಸಂಜಯ್‌ದತ್‌ರಂತಹ ಅಗಾಧ ಪ್ರತಿಭೆಯ ನಟನಿಗೆ ನಿರ್ದೇಶಿಸುವ ಅವಕಾಶ ದೊರೆತಿರುವುದು, ತನ್ನ ಅದೃಷ್ಟವೆಂದು ಹೇಳಿಕೊಂಡಿದ್ದಾರೆ. ನವೆಂಬರ್‌ನಲ್ಲಿ ಚಿತ್ರೀಕರಣ ಪ್ರಾರಂಭಿಸಲಿರುವ ಪಾಣಿಪತ್‌ನ್ನು, ಅಶುತೋಷ್ ಅವ ರ ಪತ್ನಿ ಸುನೀತಾ ಗೋವಾರಿಕರ್ ತಮ್ಮ ಹೋಂ ಬ್ಯಾನರ್ ಎಜಿಪಿಪಿಎಲ್‌ನಲ್ಲಿ ವಿಶನ್‌ವರ್ಲ್ಡ್ ಜೊತೆಗೂಡಿ ನಿರ್ಮಿಸಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ಚಿತ್ರವು 2019ರ ಡಿಸೆಂಬರ್ 6ರಂದು ಬೆಳ್ಳಿತೆರೆಗೆ ಅಪ್ಪಳಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X