Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಭಾಪತಿ ಸ್ಥಾನಕ್ಕೇರುವವರು ಪಕ್ಷಪಾತ...

ಸಭಾಪತಿ ಸ್ಥಾನಕ್ಕೇರುವವರು ಪಕ್ಷಪಾತ ರಹಿತವಾಗಿರಬೇಕು: ಬಸವರಾಜ ಹೊರಟ್ಟಿ

ವಾರ್ತಾಭಾರತಿವಾರ್ತಾಭಾರತಿ23 Jun 2018 8:07 PM IST
share
ಸಭಾಪತಿ ಸ್ಥಾನಕ್ಕೇರುವವರು ಪಕ್ಷಪಾತ ರಹಿತವಾಗಿರಬೇಕು: ಬಸವರಾಜ ಹೊರಟ್ಟಿ

ಬೆಂಗಳೂರು, ಜೂ.23: ಯಾವುದೆ ಪಕ್ಷದ ಸದಸ್ಯರು ಸಭಾಪತಿ ಸ್ಥಾನಕ್ಕೆ ಆಯ್ಕೆಯಾದ ಕೂಡಲೆ ಪಕ್ಷಪಾತ ರಹಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಪರಿಷತ್‌ನ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಶನಿವಾರ ವಿಕಾಸಸೌಧದಲ್ಲಿ ವಿಧಾನ ಪರಿಷತ್ ವತಿಯಿಂದ ಮಾಜಿ ಸಭಾಪತಿ ಡಿ.ಎಚ್. ಶಂಕರ್‌ ಮೂರ್ತಿರವರ ಬೀಳ್ಕೊಡುಗೆ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಕ್ಷಭೇದ ಮರೆತು ಎಲ್ಲರನ್ನು ಸಮಾನವಾಗಿ ಕಾಣುವಂತಹ ಸಭಾಪತಿ ಸ್ಥಾನವನ್ನು ನಿರ್ವಹಿಸುವುದು ಸುಲಭಸಾಧ್ಯವಲ್ಲ. ಅಂತಹ ಸಭಾಪತಿ ಪೀಠವನ್ನು 8 ವರ್ಷಗಳ ಕಾಲ ಡಿ.ಎಚ್.ಶಂಕರಮೂರ್ತಿ ಯಶಸ್ವಿಯಾಗಿ ನಡೆಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಿಧಾನಸಭೆಯಂತೆಯೇ ವಿಧಾನ ಪರಿಷತ್‌ನಲ್ಲೂ ಧಿಕ್ಕಾರ ಕೂಗುವುದು, ಗಲಾಟೆ ಮಾಡುವುದು ನಾಚಿಕೆ ತರುವ ಸಂಗತಿಯಾಗಿದೆ. ಸಭಾಪತಿಯವರನ್ನು ಕೆಳಗಿಳಿಸಲು ಅವಿಶ್ವಾಸ ಮಂಡಿಸುವಂತಹ ಕ್ರಮವು ಸರಿಯಲ್ಲ. ವಿಧಾನಪರಿಷತ್ ನಾಡಿನ ಜಲ್ವಂತ ಸಮಸ್ಯೆಗಳನ್ನು ಪಕ್ಷಪಾತ ಮರೆತು ಒಟ್ಟಾಗಿ ಚರ್ಚಿಸುವಂತಹ ಉತ್ತಮ ವೇದಿಕೆಯೆಂದು ಅವರು ಹೇಳಿದರು.

ಮೇಲ್ಮನೆಯನ್ನೇ ರದ್ದು ಮಾಡಬೇಕು ಎಂದ ಕಾಗೋಡು ತಿಮ್ಮಪ್ಪನವರು ಸಭಾಪತಿಯಾದರು. ಅದೇ ರೀತಿ ವಾಟಾಳ್ ನಾಗರಾಜ್ ಅವರು ನಾಲ್ಕು ಬಾರಿ ಮೇಲ್ಮನೆ ಚುನಾವಣೆ ಸ್ಪರ್ಧಿಸಿದ್ದರು. ವಿಧಾನಸಭೆಗೆ ಸತ್‌ಸಂಪ್ರದಾಯ ಹಾಕಿಕೊಡುವ ಮೇಲ್ಮನೆಯ ಘನತೆಯನ್ನು ಕಾಪಾಡಿಕೊಂಡು ಹೋಗುವುದು ನಮ್ಮೆಲ್ಲರ ಹಾಗೂ ಹೊಸ ಸದಸ್ಯರ ಕರ್ತವ್ಯ. ಶಿಕ್ಷಕ ಹಾಗೂ ಪದವೀಧರ ಕ್ಷೇತ್ರಗಳು ವಿಧಾನಸಭೆ ಚುನಾವಣೆಗಿಂತಲೂ ಕೆಟ್ಟದಾಗಿರುತ್ತವೆ ಎಂಬ ಅಭಿಪ್ರಾಯವನ್ನೂ ಹೋಗಲಾಡಿಸಬೇಕೆಂದು ಅವರು ಮನವಿ ಮಾಡಿದರು.

ಸನ್ಮಾನ ಸ್ವೀಕರಿಸಿ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಮಾತನಾಡಿ, ವಿಧಾನ ಪರಿಷತ್‌ನಲ್ಲಿ 30 ವರ್ಷ ಸದಸ್ಯನಾಗಿ ಹಾಗೂ 8 ವರ್ಷ ಸಭಾಪತಿಯಾಗಿ ಕಾರ್ಯ ನಿರ್ವಹಿಸಿದಾಗಿನ ಎಲ್ಲ ಕಹಿ ಘಟನೆಗಳನ್ನೂ ಮರೆತು ಸಿಹಿ ಘಟನೆಗಳನ್ನಷ್ಟೇ ಮೆಲುಕು ಹಾಕುತ್ತಿದ್ದೇನೆಂದು ತಿಳಿಸಿದರು.
ಮೇಲ್ಮನೆ ಬೇಕೆ ಬೇಡವೇ ಎಂದು ಚರ್ಚೆ ಮಾಡುವವರು, ಇದನ್ನು ಸ್ಥಾಪಿಸುವ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲರು ಆಡಿದ ಮಾತನ್ನು ನೋಡಬೇಕು. ವಿಧಾನಸಭೆಯನ್ನು ನಿಯಂತ್ರಿಸುವ ಬದಲಿಗೆ ವಿಧಾನಸಭೆಗೆ ಪ್ರೋತ್ಸಾಹಕ ಶಕ್ತಿಯಾಗಿ ಮೇಲ್ಮನೆ ಕೆಲಸ ಮಾಡಬೇಕು ಎಂಬುದು ಅವರ ಉದ್ದೇಶವಾಗಿತ್ತು. ಅದನ್ನು ಪಾಲಿಸಬೇಕಾದದ್ದು ಪರಿಷತ್ ಸದಸ್ಯರ ಜವಾಬ್ದಾರಿಯೆಂದು ಅವರು ಹೇಳಿದರು.

ವಿಧಾನಸೌಧದ ಆವರಣದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಸ್ಥಾಪಿಸಲು ಚಿಂತನೆ ನಡೆದಾಗ ಅದಕ್ಕೆ ಪ್ರಸ್ತಾವ ಸಲ್ಲಿಸಿದ ಮಾಜಿ ಸಭಾಪತಿ ಸುದರ್ಶನ್, ಸಿಎಂ ಸಿದ್ದರಾಮಯ್ಯ ಸಹಕರಿಸಿದರು. ಈ ಕಾರ್ಯ ಮಾಡಿದ ಸಮಾಧಾನವಿದೆ. ಚುನಾವಣಾ ರಾಜಕಾರಣದಿಂದ ಹೊರ ಹೋಗುತ್ತಿದ್ದೇನಾದರೂ ಸಾರ್ವಜನಿಕ ಜೀವನದಲ್ಲಿ ಇರುತ್ತೇನೆ ಎಂದು ಅವರು ಹೇಳಿದರು.

ಮಾಜಿ ಸಭಾಪತಿ ಪ್ರೊ. ಬಿ.ಕೆ. ಚಂದ್ರಶೇಖರ್, ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ, ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮೀ ಅನೇಕರು ಸೇರಿ ಶಂಕರಮೂರ್ತಿ ದಂಪತಿಯನ್ನು ಸನ್ಮಾನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X