Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೃಷಿಕರಿಗೆ ಹೆಚ್ಚಿನ ಇಳುವರಿ ತೆಗೆಯಲು...

ಕೃಷಿಕರಿಗೆ ಹೆಚ್ಚಿನ ಇಳುವರಿ ತೆಗೆಯಲು ತಾಂತ್ರಿಕ ಮಾಹಿತಿಯ ಅಗತ್ಯವಿದೆ -ವೇದವ್ಯಾಸ ಕಾಮತ್‌

ವಾರ್ತಾಭಾರತಿವಾರ್ತಾಭಾರತಿ23 Jun 2018 9:53 PM IST
share
ಕೃಷಿಕರಿಗೆ ಹೆಚ್ಚಿನ ಇಳುವರಿ ತೆಗೆಯಲು ತಾಂತ್ರಿಕ ಮಾಹಿತಿಯ ಅಗತ್ಯವಿದೆ -ವೇದವ್ಯಾಸ ಕಾಮತ್‌

ಮಂಗಳೂರು, ಜೂ.23:ಕೃಷಿಕರಿಗೆ ಹೆಚ್ಚು ಇಳುವರಿ ತೆಗೆಯಲು ತಾಂತ್ರಿಕತೆಯ ಮಾಹಿತಿಯ ಅಗತ್ಯವಿದೆ ಎಂದು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.ನಗರದ ಐಸಿಎಆರ್ -ಕೃಷಿ ವಿಜ್ಞಾನ ಕೇಂದ್ರ,ದಕ್ಷಿಣ ಕನ್ನಡ (ಕರ್ನಾಟಕ ಪಶು ವೈದ್ಯಕೀಯ ಪ್ರಾಣಿ ಹಾಗೂ ಮೀನುಗಾರಿಕಾ ವಿಜ್ಞಾನಗಳ ವಿಶ್ವ ವಿದ್ಯಾನಿಲಯ,ಬೀದರ್)ರಾಷ್ಟ್ರೀಯ ಕೃಷಿ ವಿಸ್ತರಣಾ ನಿರ್ವಹಣಾ ಸಂಸ್ಥೆ,ಹೈದರಾಬಾದ್ ಮತ್ತು ಸಮೇತಿ,ಕೃಷಿ ವಿಶ್ವ ವಿದ್ಯಾನಿಲಯ ಬೆಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ರಸಗೊಬ್ಬರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ ಪದವಿ ಪ್ರಮಾಣ ಸಮಾರಂಭವನ್ನು ಉದ್ಘಾಟಿಸಿ ಡಿಪ್ಲೋಮಾ ಪ್ರಮಾಣ ಪತ್ರ ವಿತರಿಸಿ ಮಾತನಾಡುತ್ತಿದ್ದರು.

ಹಿಂದಿನ ಕಾಲದಲ್ಲಿ ಹಿರಿಯರು ತಮ್ಮ ಅನುಭವದ ಹಾಗೂ ಹಿರಿಯ ಅನುಭವದ ಆಧಾರದಲ್ಲಿ ಕೃಷಿ ಚಟುವಟಿಕೆಗಳನ್ನು ಮಾಡುತ್ತಿದ್ದರು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಕೃಷಿಕರು ಹಲವಾರು ಸವಾಲುಗಳನ್ನು ಎದುರಿಸುತ್ತಿದ್ದಾರೆ.ಕೃಷಿಕೂಲಿಕಾರರ ಸಮಸ್ಯೆಯನ್ನು ಕೃಷಿಕರು ಎದುರಿಸುತ್ತಿದ್ದಾರೆ. ತಮ್ಮ ಭೂಮಿಯಲ್ಲಿ ಹೆಚ್ಚಿನ ಬೆಳೆ ತೆಗಯಬೇಕಾದರೆ ಆಧುನಿಕ ಕೃಷಿಯ ತಾಂತ್ರಿಕ ಮಾಹಿತಿ ದೊರೆಯಬೇಕಾಗುತ್ತಿದೆ. ದೇಶದ ಜನರು ಆಹಾರಕ್ಕೆ ಇಂದಿಗೂ ರೈತರ ಬೆಳೆಯನ್ನೇ ಅವಲಂಭಿಸಿರುವುದರಿಂದ ಕೃಷಿ ಬಗ್ಗೆ ಹೆಚ್ಚಿನ ಗಮನಹರಿಸಬೇಕು . ಈ ನಿಟ್ಟಿನಲ್ಲಿ ಕೃಷಿಕ ಪರಿಕರಗಳನ್ನು ಮಾರಾಟ ಮಾಡುವವರನ್ನು ಅವಲಂಭಿಸಿರುತ್ತಾರೆ. ಕೃಷಿಪರಿಕರ ಮಾರಾಟಗಾರರಿಗೆ ಕೃಷಿಯ ವೈಜ್ಞಾನಿಕ ಮಾಹಿತಿ ನೀಡುವ ನಿಟ್ಟಿನಲ್ಲಿ ಕೃಷಿ ವಿಶ್ವ ವಿದ್ಯಾನಿಲಯದ ಮೂಲಕ ನೀಡುವ ಡಿಪ್ಲೋಮಾ ಕೋರ್ಸ್ ಆರಂಭಿಸಿರುವುದು ಶ್ಲಾಘನೀಯ ಎಂದರು.

ಕೃಷಿಕರು ಕೃಷಿಯ ಇಲಾಖೆಗಳಿಂದ ಪಡೆಯುವ ಮಾಹಿತಿ ಶೇ 2ಮಾತ್ರ:- ಕೃಷಿಕರು ತಮ್ಮ ಜಮೀನಿನಲ್ಲಿ ಉತ್ತಮವಾದ ರೀತಿಯ ಕೃಷಿ ಮಾಡುವ ಬಗ್ಗೆ ಕೃಷಿ ಇಲಾಖೆ ಅಥವಾ ವಿಶ್ವ ವಿದಯನಿಲಯಕ್ಕಿಂತ ಹೆಚ್ಚಾಗಿ ಇತರ ಮೂಲಗಳನ್ನು ಅವಲಂಭಿಸಿರುತ್ತಾರೆ ಎಂದು ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯ ದೇಸಿ ಕಾರ್ಯಕ್ರಮದ ನೋಡೆಲ್ ಅಧಿಕಾರಿ ಡಾ.ಪೆನ್ನೋಬಳಿ ಸ್ವಾಮಿ ತಿಳಿಸಿದ್ದಾರೆ.

ಕೃಷಿಕರು ತಮ್ಮ ಜಮೀನಿನಲ್ಲಿ ಯಾವ ಬೆಳೆ ಬೆಳೆಯ ಬೇಕು,ಯಾವ ರೀತಿ ಬೆಳೆಯ ಬೇಕು ಎನ್ನುವ ಮಾಹಿತಿಯನ್ನು ಯಾರಿಂದ ಪಡೆಯುತ್ತಾರೆ ಎನ್ನುವ ಬಗ್ಗೆ ನಡೆಸಿದ ಸಮೀಕ್ಷೆ ನಡೆಸಲಾಗಿದೆ.ಈ ಸಮೀಕ್ಷೆಯ ಪ್ರಕಾರ ಶೇ 20ರಷ್ಟು ಕೃಷಿಕರು ಈ ಮಾಹಿತಿಯನ್ನು ಪ್ರಗತಿಪರ ಕೃಷಿಕರನ್ನು ಭೇಟಿ ಮಾಡುವ ಮೂಲಕ ಪಡೆಯುತ್ತಾರೆ. ಶೇ 15ರಷ್ಟು ಕೃಷಿ ಕರು ಕೃಷಿ ಪರಿಕರ ಮಾರಾಟಗಾರರಿಂದ ಪಡೆಯುತ್ತಾರೆ.ಉಳಿದಂತೆ 10ರಿಂದ 15ರಷ್ಟು ಕೃಷಿಕರು ಮಾಧ್ಯಮಗಳು ಮೂಲಕ ಮಾಹಿತಿ ಪಡೆಯುತ್ತಾರೆ ಎಂದು ಪೆನ್ನೊಬಳಿ ಸವಮಿ ತಿಳಿಸಿದ್ದಾರೆ.

ಉಳಿದಂತೆ ಕೇವಲ ಶೇ 2ರಷ್ಟು ಕೃಷಿಕರು ಕೃಷಿ ಇಲಾಖೆ ಮತ್ತು ಕೃಷಿ ವಿಶ್ವ ವಿದ್ಯಾನಿಲಯಗಳಂತ ಸರಕಾರಿ ಸಂಸ್ಥೆಗಳಿಂದ ಮಾಹಿತಿ ಪಡೆಯುತ್ತಾರೆ ಎನ್ನುವ ಅಂಶ ಬೆಳಕಿಗೆ ಬಂದಿದೆ.ಇದರೊಂದಿಗೆ ಕೃಷಿ ಪರಿಕರ ಮಾರಾಟ ಮಾಡುವವರಲ್ಲಿ ಎಷ್ಟು ಜನ ಕೃಷಿ ಪದವಿಧರರು ಎಷ್ಟು ಇದ್ದಾರೆ ಎಂದಾಗ ಶೇ 99ರಷ್ಟು ಮಂದಿ ಕೃಷಿ ಪದವೀಧರರಿಲ್ಲ ಎನ್ನುವುದು ಬೆಳಕಿಗೆ ಬಂದಿದೆ ಈ ಹಿನ್ನೆಲೆಯಲ್ಲಿ ಕೃಷಿಕರಿಗೆ ಕೃಷಿ ವಿಶ್ವ ವಿದ್ಯಾನಿಲಯದ ಮಾಹಿತಿಯನ್ನು ಕೃಷಿ ಪರಿಕರ ಮಾರಾಟ ಮಾಡುವವರಿಗೆ ಕಡ್ಡಾಯವಾಗಿ ನೀಡಬೇಕು ಎನ್ನುವ ಹಿನ್ನೆಲೆಯಲ್ಲಿ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ ಪದವಿ ಆರಂಭಿಸಲಾಗಿದೆ ಎಂದು ಡಾ.ಪನ್ನೊಬಳಿ ಸ್ವಾಮಿ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 220 ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಡಿಪ್ಲೋಮಾ ಪದವಿ ನೀಡುವ ಗುರಿ ಹೊಂದಲಾಗಿದೆ.ಪ್ರಥಮ ತಂಡದ ತರಬೇತಿ ಪೊರ್ಣಗೊಂಡಿದೆ.ವಾರಂತ್ಯದಲ್ಲಿ ಒಂದು ದಿನ ಸೇರಿದಂತೆ ಒಂದು ವರ್ಷಗಳ ಕಾಲ ಈ ತರಬೇತಿ ನಡೆದಿದೆ ಎಂದು ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಶಿವಕುಮಾರ್ ಮಗದ ತಿಳಿಸಿದ್ದಾರೆ.

ಸಮಾರಂಭದಲ್ಲಿ ದ.ಕ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಆ್ಯಂಟೊನಿ ಮರಿಯಾ ಇಮ್ಯಾನ್ಯುಯೆಲ್, ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಹೆಚ್.ಆರ್. ನಾಯಕ್ ಮೊದಲಾದವರು ಉಪಸ್ಥಿತರಿದ್ದರು. ಮೀನುಗಾರಿಕಾ ಮಹಾ ವಿದ್ಯಾಲಯದಡೀನ್‌ಡಾ.ಎಂ.ಎನ್.ವೇಣುಗೋಪಾಲ್ ಅಧ್ಯಕ್ಷತೆ ವಹಿಸಿ ದ್ದರು. ಕಿಶೋರ್ ನಾಯಕ್ ವಂದಿಸಿದರು.ಕಾವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X