Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಮುಂದಿನ ಚುನಾವಣೆಯಲ್ಲಿ ಬಿಎಸ್‍ಪಿ 50...

'ಮುಂದಿನ ಚುನಾವಣೆಯಲ್ಲಿ ಬಿಎಸ್‍ಪಿ 50 ಸ್ಥಾನಗಳನ್ನು ಪಡೆಯುವ ಹಾಗೆ ಕೆಲಸ ಮಾಡಿ'

ಕಾರ್ಯಕರ್ತರಿಗೆ ನೂತನ ರಾಜ್ಯಾಧ್ಯಕ್ಷ ಪ್ರೊ.ಹರಿರಾಮ್ ಕರೆ

ವಾರ್ತಾಭಾರತಿವಾರ್ತಾಭಾರತಿ23 Jun 2018 10:20 PM IST
share
ಮುಂದಿನ ಚುನಾವಣೆಯಲ್ಲಿ ಬಿಎಸ್‍ಪಿ 50 ಸ್ಥಾನಗಳನ್ನು ಪಡೆಯುವ ಹಾಗೆ ಕೆಲಸ ಮಾಡಿ

ಮೈಸೂರು,ಜೂ.23: ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ನಡೆಯುವ ಹೊತ್ತಿಗೆ ಬಿಎಸ್‍ಪಿ ಪಕ್ಷ 50 ಸ್ಥಾನಗಳನ್ನು ಗೆಲ್ಲುವ ರೀತಿ ಕಾರ್ಯಕರ್ತರು ಕೆಲಸ ಮಾಡಬೇಕಿದೆ ಎಂದು ನೂತನ ಬಿಎಸ್‍ಪಿ ರಾಜ್ಯಾಧ್ಯಕ್ಷ ಪ್ರೊ.ಹರಿರಾಮ್ ಕರೆ ನೀಡಿದರು.

ಮೈಸೂರು ಜಿಲ್ಲಾ ಬಹುಜನ ಸಮಾಜ ಪಾರ್ಟಿ ವತಿಯಿಂದ ಶನಿವಾರ ಗೋವರ್ಧನ್ ಹೋಟೆಲ್ ಸಭಾಂಗಣದಲ್ಲಿ ನೂತನ ರಾಜ್ಯಾಧ್ಯಕ್ಷರಿಗೆ ಅಭಿನಂದನಾ ಸಮಾರಂಭ ಮತ್ತು ಜಿಲ್ಲಾ ಸಮಿತಿ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಕಳೆದ ಹದಿನೈದು ವರ್ಷಗಳ ಫಲವಾಗಿ ಇಂದು ಕೊಳ್ಳೇಗಾಲದಲ್ಲಿ ಬಿಎಸ್‍ಪಿಯ ಎನ್.ಮಹೇಶ್ ಗೆಲುವು ಸಾಧಿಸಿದ್ದಾರೆ. ಮೊದಲ ಅವಧಿಯಲ್ಲೇ ಕ್ಯಾಬಿನೆಟ್ ಸಚಿವರಾಗಿದ್ದಾರೆ, ಅವರ ಗೆಲುವು ಪಕ್ಷಕ್ಕೆ ಮತ್ತು ಕಾರ್ಯಕರ್ತರಿಗೆ ಚೈತನ್ಯ ತುಂಬಿದೆ. ದಕ್ಷಿಣ ಭಾರತದಲ್ಲಿ ಬಿಎಸ್‍ಪಿ ಗೆಲುವು ಕಂಡಿರುವುದು ಇಡೀ ದೇಶದ ಗಮನ ಸೆಳೆದಿದೆ ಎಂದು ಹೇಳಿದರು.

ಪಕ್ಷದ ಕಾರ್ಯಕರ್ತರು ಬೂತ್ ಮಟ್ಟದಿಂದ ಪಕ್ಷವನ್ನು ಸಂಘಟಿಸಿ ಮಾಯಾವತಿಯವರ ಕೈ ಬಲಪಡಿಸಬೇಕು, ಈಗಿನಿಂದಲೇ ಕಾರ್ಯಕರ್ತರು ಪ್ರತಿ ಹಳ್ಳಿ ಮನೆಮನೆಗೆ ತೆರಳಿ ಬಿಎಸ್‍ಪಿ ಪಕ್ಷದ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಜನರಿಗೆ ತಿಳಿಸಿ ಅವರ ಮನಪರಿವರ್ತನೆಗೆ ಪ್ರಯತ್ನಿಸಬೇಕು. ಒಂದು ಸ್ಥಾನ ಪಡೆದ ನಾವು ಮುಂದಿನ ಚುನಾವಣೆ ವೇಳೆಗೆ 50 ಸ್ಥಾನಗಳನ್ನು ಗೆಲ್ಲುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕಿದೆ ಎಂದು ಕಿವಿಮಾತು ಹೇಳಿದರು. 

ಪ್ರಧಾನಿ ನರೇಂದ್ರ ಮೋದಿಯವರನ್ನು ಸಮರ್ಥವಾಗಿ ಎದುರಿಸುವ ಶಕ್ತಿ ಮಾಯಾವತಿಯವರಿಗೆ ಇದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಎಸ್‍ಪಿ ಮೈತ್ರಿಯಾಗುವ ಸಾಧ್ಯತೆ ಇದೆ. ಕನಿಷ್ಠ ನಾವು ಎರಡು ಸ್ಥಾನಗಳನ್ನಾದರು ಗೆಲ್ಲುವ ಮೂಲಕ ಮಾಯಾವತಿಯವರ ಕೈ ಬಲಪಡಿಸಬೇಕಿದೆ. ಮತ್ತೊಮ್ಮೆ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಎರಡು ಸಾವಿರ ವರ್ಷಗಳ ಹಿಂದಕ್ಕೆ ನಾವು ಹೋಗಬೇಕಾಗುತ್ತೆ. ಹಾಗಾಗಿ ಎಚ್ಚರಿಕೆಯಿಂದ ಎಲ್ಲರೂ ಒಗ್ಗೂಡಿ ಕೆಲಸ ಮಾಡುವ ಅಗತ್ಯವಿದೆ ಎಂದು ಹೇಳಿದರು.

ದೆಹಲಿಯಲ್ಲಿ ರಾಷ್ಟ್ರಾಧ್ಯಕ್ಷೆ ಮಾಯಾವತಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಕ್ಷದಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಲಾಗಿದೆ. ಕರ್ನಾಟಕ ರಾಜ್ಯಕ್ಕೆ ಎನ್.ಮಹೇಶ್ ಸಂಯೋಜಕರನ್ನಾಗಿ ನೇಮಿಸಲಾಗಿದೆ. ಅವರ ಮಾರ್ಗದರ್ಶನದಲ್ಲಿ ರಾಜ್ಯಾಧ್ಯಕ್ಷ, ಉಪಾಧ್ಯಕ್ಷರು, ಐವರು ಕಾರ್ಯದರ್ಶಿಗಳು ಮತ್ತು ಓರ್ವ ಖಜಾಂಚಿಯನ್ನು ಮಾತ್ರ ನೇಮಕ ಮಾಡಲಾಗಿದೆ.ರಾಜ್ಯದಲ್ಲಿ ಬೆಂಗಳೂರು, ಮೈಸೂರು, ಗುಲಬರ್ಗ ಸೇರಿದಂತೆ ಮೂರು ವಲಯಗಳನ್ನಾಗಿ ಮಾಡಲಾಗಿದೆ. ಪ್ರತಿಯೊಂದು ವಲಯಕ್ಕೂ ಓರ್ವ ಉಸ್ತುವಾರಿಯನ್ನು ನೇಮಿಸಿ ಮೂವರನ್ನು ಅವರ ಕೆಳಗೆ ಕಲಸಮಾಡಲು ನಿಯೋಜಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮೈಸೂರು ವಲಯ ಉಸ್ತುವಾರಿಗಳಾದ ಸೋಸಲೆ ಸಿದ್ದರಾಜು, ಮಾದೇಶ್ ಉಸ್ತಾರ್, ಅರಕಲವಾಡಿ ನಾಗೇಂದ್ರ, ವಿಭಾಗ ಉಸ್ತುವಾರಿಗಳಾದ ಭೀನಮಹಳ್ಳಿ ಸೋಮೇಶ್, ಸಿದ್ದರಾಜು ಮಂಡ್ಯ, ನರಸಿಂಹ ಮೂರ್ತಿ, ಅಲಮೇಲು, ಶಿವಮಹದೇವು, ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಣೆಯನ್ನು ರಾಹುಲ್ ಮಾಡಿದರೆ, ಪ್ರಭುಸ್ವಾಮಿ ಸ್ವಾಗತ ಕೋರಿ ಪ್ರಸಾದ್ ವಂದಿಸಿದರು. 

ರಾಜ್ಯದಲ್ಲಿ ಒಂದು ಸ್ಥಾನ ಗೆದ್ದ ಬಿಎಸ್‍ಪಿಯ ಎನ್.ಮಹೇಶ್ ಕ್ಯಾಬಿನೆಟ್ ಸಚಿವರಾಗಿದ್ದಾರೆ. ಮುಂದೆ 25 ಅಥವಾ 30 ಸ್ಥಾನಗಳನ್ನು ಗೆದ್ದರೆ ರಾಜ್ಯದ ಮುಖ್ಯಮಂತ್ರಿಯಾಗುವುದರಲ್ಲಿ ಅನುಮಾನವೇ ಇಲ್ಲ.
-ಪ್ರೊ.ಹರಿರಾಮ್,ಬಿಎಸ್‍ಪಿ ರಾಜ್ಯಾಧ್ಯಕ್ಷ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X